AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಬೆಡ್​​ನಲ್ಲಿ ಇಬ್ಬರು ಕೊರೊನಾ ರೋಗಿಗಳು; ಕೊವಿಡ್​ ಸೋಂಕಿನ ವಿಪರೀತ ಪ್ರಸರಣದಿಂದ ಈ ಆಸ್ಪತ್ರೆಯಲ್ಲಿ ಸಾಲುತ್ತಿಲ್ಲ ವ್ಯವಸ್ಥೆ

ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಕೊರೊನಾ ಸೋಂಕಿತರು ಇರುವ ಜಿಲ್ಲೆಗಳಲ್ಲಿ ನಾಗ್ಪುರವೂ ಒಂದು. ಸೋಮವಾರ ಒಂದೇ ದಿನ 31000 ಸೋಂಕಿನ ಕೇಸ್​ಗಳ ದಾಖಲಾಗಿವೆ. ಇಲ್ಲಿ ಒಟ್ಟು 2,21,997 ಕೊರೊನಾ ಸೋಂಕಿತರು ಇದ್ದಾರೆ. ವೈರಲ್ ಆದ ಫೋಟೋಗಳನ್ನು ನೋಡಿ ಬಿಜೆಪಿ ಮುಖಂಡ ಚಂದ್ರಕಾಂತ್​ ಬಾವಾಂಕುಲೆ ಕಿಡಿಕಾರಿದ್ದಾರೆ.

ಒಂದೇ ಬೆಡ್​​ನಲ್ಲಿ ಇಬ್ಬರು ಕೊರೊನಾ ರೋಗಿಗಳು; ಕೊವಿಡ್​ ಸೋಂಕಿನ ವಿಪರೀತ ಪ್ರಸರಣದಿಂದ ಈ ಆಸ್ಪತ್ರೆಯಲ್ಲಿ ಸಾಲುತ್ತಿಲ್ಲ ವ್ಯವಸ್ಥೆ
ನಾಗ್ಪುರ ಆಸ್ಪತ್ರೆಯಲ್ಲಿ ಒಂದೇ ಬೆಡ್​​ನಲ್ಲಿ ಇಬ್ಬರು ಮಹಿಳೆಯರು
Lakshmi Hegde
|

Updated on: Mar 30, 2021 | 4:40 PM

Share

ನಾಗ್ಪುರ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವಿಪರೀತ ಆಗುತ್ತಿದೆ. ಆಸ್ಪತ್ರೆಗಳಲ್ಲಿ ಬೆಡ್​​ಗಳ ಕೊರತೆ ಉಂಟಾಗುತ್ತಿರುವುದಾಗಿ ವರದಿಯೂ ಆಗಿದೆ. ಈಗ ಅದಕ್ಕೆ ಸಾಕ್ಷಿಯೆಂಬಂತೆ ನಾಗ್ಪುರದ ಆಸ್ಪತ್ರೆಯೊಂದರ ಫೋಟೋಗಳು ವೈರಲ್ ಆಗುತ್ತಿವೆ. ಈ ಫೋಟೋಗಳು ಕೊರೊನಾ ಭೀಕರತೆಯನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಈ ಫೋಟೋಗಳು ನಾಗ್ಪುರ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆ (GMCH)ಯದ್ದು ಎನ್ನಲಾಗಿದ್ದು, ಅದರಲ್ಲಿ ಒಂದು ಬೆಡ್ ಮೇಲೆ ಇಬ್ಬರು ಕೊರೊನಾ ರೋಗಿಗಳನ್ನು ಮಲಗಿಸಿದ್ದನ್ನು ನೋಡಬಹುದು..!

ಒಂದು ಸಣ್ಣನೆಯ ಬೆಡ್​ನಲ್ಲಿ ಇಬ್ಬರು ಕೊರೊನಾ ಸೋಂಕಿತರು ಮಲಗಿರುವ ಫೋಟೋಗಳು ವೈರಲ್ ಆದ ಬೆನ್ನಲ್ಲೇ, ಆಸ್ಪತ್ರೆಯ ಉನ್ನತ ಅಧಿಕಾರಿಗಳು ಸ್ಪಷ್ಟನೆ ನೀಡಿ ಸಮಸ್ಯೆಯನ್ನು ಸರಿಪಡಿಸಲಾಗಿದೆ. ಇದು ಸ್ವಲ್ಪ ದಿನಗಳ ಹಳೇ ಫೋಟೋ ಎಂದು ಹೇಳಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆ ದುಬಾರಿಯಾಗಿರುವುದರಿಂದ ಹೆಚ್ಚಿನ ಜನರು ಸರ್ಕಾರಿ ಆಸ್ಪತ್ರೆಯಾದ GMCHಗೆ ಬರುತ್ತಿದ್ದಾರೆ. ಇದೇ ಕಾರಣಕ್ಕೆ ಒಂದು ಬೆಡ್​ನಲ್ಲಿ ಇಬ್ಬರನ್ನು ಮಲಗಿಸುವ ಪರಿಸ್ಥಿತಿ ಎದುರಾಗಿತ್ತು ಎಂದೂ ತಿಳಿಸಿದ್ದಾರೆ.

GMCHನಲ್ಲಿ ಕೆಲಸದ ಒತ್ತಡ ಜಾಸ್ತಿ ಇದೆ. ಇಲ್ಲಿ ಬೆಡ್​ಗಳ ಸಂಖ್ಯೆಯನ್ನು ಹೆಚ್ಚು ಮಾಡುತ್ತಿದ್ದೇವೆ. ಈಗ ಒಂದು ಬೆಡ್​​ನಲ್ಲಿ ಒಬ್ಬನೇ ರೋಗಿಯನ್ನು ಮಲಗಿಸಲಾಗುತ್ತಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಅವಿನಾಶ್​ ಗವಾಂಡೆ ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಕೊರೊನಾ ಸೋಂಕಿತರು ಇರುವ ಜಿಲ್ಲೆಗಳಲ್ಲಿ ನಾಗ್ಪುರವೂ ಒಂದು. ಸೋಮವಾರ ಒಂದೇ ದಿನ 31000 ಸೋಂಕಿನ ಕೇಸ್​ಗಳ ದಾಖಲಾಗಿವೆ. ಇಲ್ಲಿ ಒಟ್ಟು 2,21,997 ಕೊರೊನಾ ಸೋಂಕಿತರು ಇದ್ದಾರೆ. ವೈರಲ್ ಆದ ಫೋಟೋಗಳನ್ನು ನೋಡಿ ಬಿಜೆಪಿ ಮುಖಂಡ ಚಂದ್ರಕಾಂತ್​ ಬಾವಾಂಕುಲೆ ಕಿಡಿಕಾರಿದ್ದಾರೆ. ಮಹಾರಾಷ್ಟ್ರದಲ್ಲಿ ಉಳಿದ ರೋಗಿಗಳಂತೆಯೇ ಕೊವಿಡ್​-19 ಸೋಂಕಿತರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ನಾಗ್ಪುರ ಆಸ್ಪತ್ರೆಯಲ್ಲಿ ಸಾವು ಕುಣಿಯುತ್ತಿದೆ. ಇಷ್ಟಾದರೂ ಸರ್ಕಾರ ಕುಂಭಕರ್ಣನಂತೆ ನಿದ್ದೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗದಗದಲ್ಲಿ 14 ವರ್ಷದ ಬಾಲಕಿ ಕೊಲೆ ಪ್ರಕರಣ; ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಚಿವ ಸಿ.ಸಿ.ಪಾಟೀಲ್

ಹೆಂಡತಿ ಹೊರಗೆ ಕಳಿಸಿ ನನ್ನ ಕರೆಸಿಕೊಳ್ಳುತ್ತಿದ್ದ; ಬ್ರಿಟಿಷ್​ ಪ್ರಧಾನಿ ಬೋರಿಸ್ ಜಾನ್ಸನ್​ ವಿರುದ್ಧ ಅಮೆರಿಕ​ ಮಹಿಳೆ ಹೇಳಿಕೆ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ