AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ತಿದ್ದುಪಡಿ ಕಾಯ್ದೆ ರದ್ದು ಆಗ್ರಹಿಸಿ 2 ಕೋಟಿ ಸಹಿ ಸಂಗ್ರಹ: ಶೀಘ್ರವೇ ರಾಷ್ಟ್ರಪತಿಗೆ ಸಲ್ಲಿಕೆ

ಕೃಷಿ ತಿದ್ದುಪಡಿ ಕಾಯ್ದೆಗೆ ಕಾಂಗ್ರೆಸ್​ ನಿರಂತರವಾಗಿ ವಿರೋಧಿಸುತ್ತಲೇ ಬಂದಿದೆ. ಅಲ್ಲದೆ, ರೈತರ ಪ್ರತಿಭಟನೆಯನ್ನೂ ಕೂಡ ಬೆಂಬಲಿಸುವುದಾಗಿ ಹೇಳಿದೆ. ಹೀಗಿರುವಾಗಲೇ ಕೃಷಿ ತಿದ್ದುಪಡಿ ಕಾಯ್ದೆ ರದ್ದು ಮಾಡಬೇಕೆಂದು ಆಗ್ರಹಿಸಿ ದೇಶಾದ್ಯಂತ ಕಾಂಗ್ರೆಸ್​ ಸಹಿ ಸಂಗ್ರಹ ಮಾಡಿದೆ.

ಕೃಷಿ ತಿದ್ದುಪಡಿ ಕಾಯ್ದೆ ರದ್ದು ಆಗ್ರಹಿಸಿ 2 ಕೋಟಿ ಸಹಿ ಸಂಗ್ರಹ: ಶೀಘ್ರವೇ ರಾಷ್ಟ್ರಪತಿಗೆ ಸಲ್ಲಿಕೆ
ಪ್ರತಿಭಟನೆಯಲ್ಲಿ ತೊಡಗಿರುವ ರೈತರು
ರಾಜೇಶ್ ದುಗ್ಗುಮನೆ
| Edited By: |

Updated on: Dec 22, 2020 | 8:32 PM

Share

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ಕಾಯ್ದೆ ವಿರುದ್ಧ ಇಡೀ ದೇಶಾದ್ಯಂತ ಪ್ರತಿಭಟನೆ ಭುಗಿಲೆದ್ದಿದೆ. ಅದರಲ್ಲೂ ದೆಹಲಿಯಲ್ಲಿ ಕಳೆದು ಮೂರು ವಾರಗಳಿಂದ ನಿರಂತರವಾಗಿ ರೈತರು ಪ್ರತಿಭಟನೆ ನಡೆಸುತ್ತಲೇ ಇದ್ದಾರೆ. ಈ ಮಧ್ಯೆ, ಕೃಷಿ ಕಾಯ್ದೆ ರದ್ದು ಮಾಡಬೇಕೆಂದು ಕೋರಿ ದೇಶಾದ್ಯಂತ 2 ಕೋಟಿ ಸಹಿ ಸಂಗ್ರಹ ಮಾಡಲಾಗಿದೆ.

ಕೃಷಿ ತಿದ್ದುಪಡಿ ಕಾಯ್ದೆಗೆ ಕಾಂಗ್ರೆಸ್​ ನಿರಂತರವಾಗಿ ವಿರೋಧಿಸುತ್ತಲೇ ಬಂದಿದೆ. ಅಲ್ಲದೆ, ರೈತರ ಪ್ರತಿಭಟನೆಯನ್ನೂ ಕೂಡ ಬೆಂಬಲಿಸುತ್ತಿರುವುದಾಗಿ ಹೇಳಿದೆ. ಹೀಗಿರುವಾಗಲೇ ಕೃಷಿ ತಿದ್ದುಪಡಿ ಕಾಯ್ದೆ ರದ್ದು ಮಾಡಬೇಕೆಂದು ಆಗ್ರಹಿಸಿ ದೇಶಾದ್ಯಂತ ಕಾಂಗ್ರೆಸ್​ ಸಹಿ ಸಂಗ್ರಹ ಮಾಡಿದೆ.

ಕೃಷಿ ತಿದ್ದುಪಡಿ ಕಾಯ್ದೆ ತಿದ್ದುಪಡಿಗೆ ಆಗ್ರಹಿಸಿ ಸಂಗ್ರಹಿಸಿ ಸಹಿಯನ್ನು ಡಿಸೆಂಬರ್ 24ರವೆರೆಗೆ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನಾಯಕರ ನಿಯೋಗವು ರಾಷ್ಟ್ರಪತಿ ರಾಮನಾಥ ಕೋವಿಂದ್​ಗೆ ಸಲ್ಲಿಕೆ ಮಾಡಲಿದೆ. ಈ ಮೂಲಕ ಕೃಷಿ ತಿದ್ದುಪಡಿ ಕಾಯ್ದೆ ರದ್ದತಿಯ ಅಗತ್ಯವಿದೆ ಎಂಬುದನ್ನು ರಾಷ್ಟ್ರಪತಿಗೆ ನಿಯೋಗದ ಸದಸ್ಯರು ಮನವರಿಕೆ ಮಾಡಿಕೊಡಲಿದ್ದಾರೆ ಎಂದು ಕಾಂಗ್ರೆಸ್​ ನಾಯಕ ಕೆಸಿ ವೇಣುಗೋಪಾಲ್​ ಹೇಳಿದ್ದಾರೆ.

ಬೋರಿಸ್​ಗೆ ಪತ್ರ ಬರೆಯಲಿದ್ದಾರೆ ರೈತರು 2021 ಗಣರಾಜ್ಯೋತ್ಸವ ದಿನದಂದು ಭಾರತಕ್ಕೆ ಭೇಟಿ ನೀಡಲಿರುವ ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್​ರ ಭೇಟಿಯನ್ನು ತಡೆಯುವಂತೆ ಇಂಗ್ಲೆಂಡ್​ನ ಸಂಸದರಿಗೆ ಪತ್ರ ಬರೆಯುವುದಾಗಿ ಚಳವಳಿ ನಿರತ ರೈತ ನಾಯಕ ಕುಲ್ವಂತ್ ಸಿಂಗ್ ಹೇಳಿದ್ದಾರೆ. ಕೇಂದ್ರದ ಜೊತೆಗಿನ ಇಂದಿನ ಭೇಟಿಯಲ್ಲಿ ಸರ್ಕಾರ ನೀಡುವ ಪ್ರಸ್ತಾಪದ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಕೇಂದ್ರ ಕೃಷಿ ಸಚಿವರ ಜೊತೆ ರೈತ ನಾಯಕರ ಸಭೆ ಜರುಗುತ್ತಿದ್ದು, ಈವರೆಗೂ ನಿರ್ಣಯ ಹೊರಬಿದ್ದಿಲ್ಲ.

ರೈತರ ದಿಲ್ಲಿ ಚಲೋ ಪ್ರತಿಭಟನೆ ರಾಜಕೀಯ ಸ್ವರೂಪ ಪಡೆಯಲಾರಂಭಿಸಿದೆ!

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು