AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾ ಆಸ್ಪತ್ರೆಯಲ್ಲಿ 15 ರೋಗಿಗಳು ಸಾವು, ಆಕ್ಸಿಜನ್ ಸಿಗದೆ ಸಾವು ಸಂಭವಿಸಿದೆ ಎಂದು ರೋಗಿಗಳ ಕುಟುಂಬ ಆರೋಪ

Goa: ಒಂದೇ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ 26 ಜನರು ಪ್ರಾಣ ಕಳೆದುಕೊಂಡ ಎರಡು ದಿನಗಳ ನಂತರ ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 15 ಸಾವುಗಳು ಸಂಭವಿಸಿವೆ .

ಗೋವಾ ಆಸ್ಪತ್ರೆಯಲ್ಲಿ 15 ರೋಗಿಗಳು ಸಾವು, ಆಕ್ಸಿಜನ್ ಸಿಗದೆ ಸಾವು ಸಂಭವಿಸಿದೆ ಎಂದು ರೋಗಿಗಳ ಕುಟುಂಬ ಆರೋಪ
ಪ್ರಾತಿನಿಧಿಕ ಚಿತ್ರ
Follow us
ರಶ್ಮಿ ಕಲ್ಲಕಟ್ಟ
|

Updated on:May 13, 2021 | 5:56 PM

ಪಣಜಿ: ಗೋವಾದ ಪ್ರಧಾನ ಸರ್ಕಾರಿ ಆಸ್ಪತ್ರೆಯಲ್ಲಿ ಬೆಳಗಿನ ಜಾವ 2 ರಿಂದ ಬೆಳಿಗ್ಗೆ 6 ರವರೆಗೆ ಆಮ್ಲಜನಕದ ಕೊರತೆಯಿಂದಾಗಿ 26 ರೋಗಿಗಳು ಪ್ರಾಣ ಕಳೆದುಕೊಂಡ ಎರಡು ದಿನಗಳ ನಂತರ ಗುರುವಾರ ಬೆಳಿಗ್ಗೆ  15 ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಪ್ರಮೋದ್ ಸಾವಂತ್ ನೇತೃತ್ವದ ಸರ್ಕಾರ ಗುರುವಾರ ಬಾಂಬೆ ಹೈಕೋರ್ಟ್‌ಗೆ ತಿಳಿಸಿದೆ. ಈ ಎಲ್ಲಾ ಸಾವುಗಳು ಆಮ್ಲಜನಕದ ಪೂರೈಕೆಯಲ್ಲಿನ ವ್ಯತ್ಯಯವಾದ ಕಾರಣ ಸಂಭವಿಸಿದೆ ಎಂದು ಹೇಳಲಾಗುವುದಿಲ್ಲ ಎಂದಿದೆ ಸರ್ಕಾರ. ಕೇವಲ ಒಂದು ದಿನ ಮುಂಚಿತವಾಗಿ ಸ್ಥಿರವಾದ ಆಮ್ಲಜನಕ ಪೂರೈಕೆಯನ್ನು ಖಾತರಿಪಡಿಸದಿದ್ದಕ್ಕಾಗಿ ರಾಜ್ಯ ಸರ್ಕಾರವನ್ನು ಖಂಡಿಸಿದ ನ್ಯಾಯಾಧೀಶರು, ಗುರುವಾರ ಆಸ್ಪತ್ರೆಯ ಸಮಜಾಯಿಷಿಯನ್ನು ಒಪ್ಪಲಿಲ್ಲ.

ಆಮ್ಲಜನಕದ ಕೊರತೆಯಿಂದ ಸಾವುಗಳು ಸಂಭವಿಸುತ್ತಿವೆ ಎಂದು ಅಂಕಿಅಂಶಗಳು ತೋರಿಸುತ್ತವೆ. ಸತ್ಯವನ್ನು ನಿರಾಕರಿಸಲು ಪ್ರಯತ್ನಿಸಬೇಡಿ ಎಂದು ಹೈಕೋರ್ಟ್‌ನ ಗೋವಾ ನ್ಯಾಯಮೂರ್ತಿಗಳಾದ ಎಂ.ಎಸ್. ಸೋನಾಕ್ ಮತ್ತು ನಿತಿನ್ ಜಾಂಬ್ರೆ ಅವರು ರಾಜ್ಯದ ಉನ್ನತ ಕಾನೂನು ಅಧಿಕಾರಿ ಅಡ್ವೊಕೇಟ್ ಜನರಲ್ ದೇವಿದಾಸ್ ಪಂಗಂಗೆ ಹೇಳಿದ್ದಾರೆ. ಸಮಸ್ಯೆಯನ್ನು ಇನ್ನೂ ಬಗೆಹರಿದಿಲ್ಲ ಎಂದು ನಮಗೆ ತಿಳಿದಿದೆ ಎಂದು ನ್ಯಾಯಪೀಠ ಹೇಳಿದೆ.

ಒಂದೇ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ 26 ಜನರು ಪ್ರಾಣ ಕಳೆದುಕೊಂಡ ಎರಡು ದಿನಗಳ ನಂತರ ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 15 ಸಾವುಗಳು ಸಂಭವಿಸಿವೆ . ಪ್ರಮೋದ್ ಸಾವಂತ್ ಸರ್ಕಾರಕ್ಕೆ ಎಲ್ಲವನ್ನೂ ಕೈಬಿಡಿ ಎಂದು ಆದೇಶಿಸಿದ ನ್ಯಾಯಾಧೀಶರು ಕನಿಷ್ಠ ಒಂದು ರಾತ್ರಿ ಮತ್ತು ಯಾವುದೇ ಸಾವುಗಳು ಸಂಭವಿಸದಂತೆ ನೋಡಿಕೊಳ್ಳಿ ಎಂದಿದ್ದಾರೆ.

ರಾತ್ರಿಯಿಡೀ ಆಮ್ಲಜನಕದ ಪೂರೈಕೆ ಕಡಿಮೆಯಾಗಲು ಶುರುವಾದಾಗ ರೋಗಿಗಳ ಸಂಬಂಧಿಕರು ವಿಷಯ ತಿಳಿಸಿದ್ದು ತಕ್ಷಣವೇ ಲೇ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಪೊಲೀಸರು ಸಹಾಯಕ್ಕಾಗಿ ಆಸ್ಪತ್ರೆಗೆ ದೌಡಾಯಿಸಿದ್ದರು. ಆದರೆ ಯಾರಿಗೂ ತಕ್ಷಣ ಸಮಸ್ಯೆಯನ್ನು ಪರಿಹರಿಸಲು ಮತ್ತು ಸ್ಥಿರವಾದ ಆಮ್ಲಜನಕದ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಹೆಚ್ಚಿನ ಸಮಯ ಹಿಡಿಯಿತು.

ವೈದ್ಯಕೀಯ ಕಾಲೇಜಿನ ಡೀನ್ ಡಾ.ಶಿವಾನಂದ್ ಬಂಡೇಕರ್ ಅವರು ರಾತ್ರಿಯ ಸಮಯದಲ್ಲಿ ಆಮ್ಲಜನಕದ ಒತ್ತಡ ಕಡಿಮೆಯಾಗಿದೆ ಎಂದು ಒಪ್ಪಿಕೊಂಡರು ಆದರೆ ಎಲ್ಲಾ ಸಾವುಗಳಿಗೆ ಇದು ಕಾರಣವಲ್ಲ ಎಂದು ಹೇಳಿದ್ದಾರೆ. ಕಡಿಮೆ ಒತ್ತಡದಲ್ಲಿ ಆಮ್ಲಜನಕವನ್ನು ಪಡೆಯುತ್ತಿರುವ ವಾರ್ಡ್‌ಗಳಿಂದ ನಿರ್ಣಾಯಕ ರೋಗಿಗಳನ್ನು ಹೊಸದಾಗಿ ನಿಯೋಜಿಸಲಾದ ಬ್ಲಾಕ್‌ಗೆ ಸ್ಥಳಾಂತರಿಸಲಾಗುವುದು, ಅಲ್ಲಿ ಆಮ್ಲಜನಕದ ಪೂರೈಕೆ ಸ್ಥಿರವಾಗಿರುತ್ತದೆ ಎಂದು ಅವರು ಹೇಳಿದ್ದಾರೆ|

ಆಮ್ಲಜನಕದ ಪೂರೈಕೆಯಿಂದಾಗಿ ಸರ್ಕಾರಿ ಆಸ್ಪತ್ರೆಯಲ್ಲಿನ ಸಾವುಗಳು ಪ್ರಮೋದ್ ಸಾವಂತ್ ಸರ್ಕಾರಕ್ಕೆ ದೊಡ್ಡ ಮುಜುಗರವನ್ನುಂಟುಮಾಡಿದೆ.ಇದನ್ನು ವಿರೋಧ ಪಕ್ಷಗಳು, ನಾಗರಿಕ ಸಮಾಜ ಗುಂಪುಗಳು ಮತ್ತು ಕನಿಷ್ಠ ಆಡಳಿತ ಪಕ್ಷದ ಶಾಸಕರು ಸಾಕಷ್ಟು ಕೆಲಸ ಮಾಡಿಲ್ಲ ಎಂದು ತೀವ್ರವಾಗಿ ಟೀಕಿಸಿದ್ದಾರೆ.

ಆಮ್ಲಜನಕವನ್ನು ಪೂರೈಕೆಯ ಕೊರತೆಯಿಂದ ಜನರು ಸಾಯಬಾರದು ಎಂದು ಖಚಿತಪಡಿಸಿಕೊಳ್ಳುವುದು ನಿಮ್ಮ ಕರ್ತವ್ಯ ಎಂದು ಬುಧವಾರ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೆನಪಿಸಿತು. ಈ ಕರ್ತವ್ಯವನ್ನು ಅಸಹಾಯಕತೆಯನ್ನು ತೋರಿಸುವ ಮೂಲಕ ಅಥವಾ ಆಮ್ಲಜನಕವನ್ನು ಸೋರ್ಸಿಂಗ್ ಮತ್ತು ಸರಬರಾಜು ಮಾಡುವಲ್ಲಿ ವ್ಯವಸ್ಥಾಪಕ ತೊಂದರೆಗಳನ್ನು ಮುಂದಿಡುವುದರಿಂದ ತಪ್ಪಿಸಲಾಗುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ.

ಗುರುವಾರ ಬೆಳಿಗ್ಗೆ ಹೈಕೋರ್ಟ್‌ನ ವಿಚಾರಣೆಯೊಂದರಲ್ಲಿ, ಗೋವಾ ವೈದ್ಯಕೀಯ ಕಾಲೇಜು ಮುಂಜಾನೆ 2 ರಿಂದ ಬೆಳಿಗ್ಗೆ 6 ರವರೆಗೆ ಇನ್ನೂ 15 ಸಾವುಗಳು ಸಂಭವಿಸಿವೆ ಎಂದು ಒಪ್ಪಿಕೊಂಡರು. ಆದರೆ ಅರ್ಜಿದಾರರು ಹೇಳಿದಂತೆ ಆಮ್ಲಜನಕ ಪೂರೈಕೆಯಲ್ಲಿನ ಅಡ್ಡಿ ಕಾರಣ ಅವರೆಲ್ಲರೂ ಸಾವನ್ನಪ್ಪಿಲ್ಲ ಎಂದಿದ್ದಾರೆ.

ಗೋವಾ ಕೋವಿಡ್ ಸ್ವಯಂಸೇವಕರ ಜಾಲವನ್ನು ಸ್ಥಾಪಿಸಿರುವ ಮತ್ತು ಅರ್ಜಿದಾರರಲ್ಲಿ ಒಬ್ಬರಾದ ಶ್ರುತಿ ಚತುರ್ವೇದಿ ಈ ಹಿಂದೆ 15 ಸಾವುಗಳ ಬಗ್ಗೆ ಸುದ್ದಿ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ:  ಹದಿನೆಂಟು ವರ್ಷ ಮೇಲ್ಪಟ್ಟ ಎಲ್ಲರಿಗೂ ಐವೆರ್ಮೆಕ್ಟಿನ್​; ಕೊರೊನಾ ಬಂದರೂ ಸಾವು ತಡೆಯಲು ಈ ಯೋಜನೆ ಎಂದ ಗೋವಾ ಸರ್ಕಾರ

Published On - 5:52 pm, Thu, 13 May 21

ನೆರೆರಾಜ್ಯದ ಆನೆಹಿಂಡನ್ನು ಪಳಗಿಸಲು ಹೊರಟಿವೆ ಕರ್ನಾಟಕದ ಸಲಗಗಳು
ನೆರೆರಾಜ್ಯದ ಆನೆಹಿಂಡನ್ನು ಪಳಗಿಸಲು ಹೊರಟಿವೆ ಕರ್ನಾಟಕದ ಸಲಗಗಳು
‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್
‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್
ಬಾನು ಮುಷ್ತಾಕ್ ಕೃತಿ ಹಾರ್ಟ್ ಲ್ಯಾಂಪ್​ಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
ಬಾನು ಮುಷ್ತಾಕ್ ಕೃತಿ ಹಾರ್ಟ್ ಲ್ಯಾಂಪ್​ಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್