AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂ-ಅರುಣಾಚಲ ಪ್ರದೇಶದ ಗಡಿಯಲ್ಲಿ ಗುಂಡಿನ ದಾಳಿಗೆ ಇಬ್ಬರು ಬಲಿ

ಸಾಮಾನ್ಯವಾಗಿ, ನೆರೆಯ ರಾಜ್ಯವು ನಮ್ಮ ಮೇಲೆ ದಾಳಿ ಮಾಡುವುದಿಲ್ಲ ಎಂದು ಅವರು ಹೇಳಿದರು. ಆದರೆ ನೆರೆಯ ರಾಜ್ಯಗಳ ಕೆಲವರು ಭೂಮಿಯನ್ನು ಆಕ್ರಮಿಸಿಕೊಳ್ಳುವ ದುರಾಸೆಯಿಂದ ಇಂತಹ ಚಟುವಟಿಕೆಗಳಲ್ಲಿ ತೊಡಗುತ್ತಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದ ಅಸ್ಸಾಂ ಸಿಎಂ

ಅಸ್ಸಾಂ-ಅರುಣಾಚಲ ಪ್ರದೇಶದ ಗಡಿಯಲ್ಲಿ ಗುಂಡಿನ ದಾಳಿಗೆ ಇಬ್ಬರು ಬಲಿ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jun 05, 2023 | 5:15 PM

Share

ಮುಖ್ಯಾಂಶಗಳು

  • ಅಸ್ಸಾಂ-ಅರುಣಾಚಲ ಪ್ರದೇಶದ(Arunachal Pradesh border) ಗಡಿಭಾಗದ ಪನ್ಬರಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ
  • ಧೇಮಾಜಿಯ ಶಾಸಕ ರನೋಜ್ ಪೆಗು ಈ ಬಗ್ಗೆ ಟ್ವೀಟ್ ಮಾಡಿದ್ದು, ಮೃತರನ್ನು ಬೋರ್ಬಿಲಾ ಚುಟಿಯಾಕಾರಿ ಗ್ರಾಮದ ನಿವಾಸಿ ಬೋಗಾ ಚುಟಿಯಾ ಮತ್ತು ಮೊನಿತು ಗೊಗೊಯ್ ಎಂದು ಗುರುತಿಸಿದ್ದಾರೆ.
  • ಧೇಮಾಜಿಯ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾಧಿಕಾರಿ ಈ ವಿಷಯವನ್ನು ಪರಿಶೀಲಿಸುತ್ತಿದ್ದಾರೆ ಎಂದ ಅಸ್ಸಾಂ ಸಿಎಂ

ಅಸ್ಸಾಂನ (Assam) ಧೇಮಾಜಿ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವಿಗೀಡಾಗಿದ್ದು, ಇಬ್ಬರಿಗೆ ಗಾಯಗಳಾಗಿವೆ ಎಂದು ಪ್ರತಿದಿನ್ ಟೈಮ್ ವರದಿ ಮಾಡಿದೆ. ಅಸ್ಸಾಂ-ಅರುಣಾಚಲ ಪ್ರದೇಶದ(Arunachal Pradesh border) ಗಡಿಭಾಗದ ಪನ್ಬರಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಧೇಮಾಜಿಯ ಶಾಸಕ ರನೋಜ್ ಪೆಗು ಈ ಬಗ್ಗೆ ಟ್ವೀಟ್ ಮಾಡಿದ್ದು, ಮೃತರನ್ನು ಬೋರ್ಬಿಲಾ ಚುಟಿಯಾಕಾರಿ ಗ್ರಾಮದ ನಿವಾಸಿ ಬೋಗಾ ಚುಟಿಯಾ ಮತ್ತು ಮೊನಿತು ಗೊಗೊಯ್ ಎಂದು ಗುರುತಿಸಿದ್ದಾರೆ. ಗಾಯಗೊಂಡವರನ್ನು ಪುಷ್ಪಾ ಗೊಗೊಯ್ ಮತ್ತು ಅಕೋನಿ ಗೊಹೈನ್ ಎಂದು ಗುರುತಿಸಲಾಗಿದೆ. ಜಿಲ್ಲಾಡಳಿತ ಮತ್ತು ಸ್ಥಳೀಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದಾರೆ ಎಂದು ಪೆಗು ಹೇಳಿದ್ದಾರೆ.

ಧೇಮಾಜಿಯ ಹಲವು ಪ್ರದೇಶಗಳಲ್ಲಿ ಅಸ್ಸಾಂ ಮತ್ತು ಅರುಣಾಚಲ ಪ್ರದೇಶದ ಗಡಿಯನ್ನು ಇನ್ನೂ ಸರಿಯಾಗಿ ಗುರುತಿಸಲಾಗಿಲ್ಲ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಸಾಮಾನ್ಯವಾಗಿ, ನೆರೆಯ ರಾಜ್ಯವು ನಮ್ಮ ಮೇಲೆ ದಾಳಿ ಮಾಡುವುದಿಲ್ಲ ಎಂದು ಅವರು ಹೇಳಿದರು. ಆದರೆ ನೆರೆಯ ರಾಜ್ಯಗಳ ಕೆಲವರು ಭೂಮಿಯನ್ನು ಆಕ್ರಮಿಸಿಕೊಳ್ಳುವ ದುರಾಸೆಯಿಂದ ಇಂತಹ ಚಟುವಟಿಕೆಗಳಲ್ಲಿ ತೊಡಗುತ್ತಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಧೇಮಾಜಿಯ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾಧಿಕಾರಿ ಈ ವಿಷಯವನ್ನು ಪರಿಶೀಲಿಸುತ್ತಿದ್ದಾರೆ ಎಂದು ಶರ್ಮಾ ಹೇಳಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶದ ಚುನಾವಣೆಗೆ ಕಮಲ್ ನಾಥ್ ನಾಯಕತ್ವ ಬಗ್ಗೆ ಪಕ್ಷದಲ್ಲೇ ಅಸಮಾಧಾನ; ಪರಸ್ಪರ ವಾಕ್ಸಮರ ನಡೆಸಿದ ನಾಯಕರು

ಏಪ್ರಿಲ್ 20 ರಂದು, ಶರ್ಮಾ ಮತ್ತು ಅರುಣಾಚಲ ಪ್ರದೇಶದ ಸಿಎಂ ಪೇಮಾ ಖಂಡು ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಉಪಸ್ಥಿತಿಯಲ್ಲಿ ಉಭಯ ರಾಜ್ಯಗಳ ನಡುವಿನ ದೀರ್ಘಾವಧಿಯ ಗಡಿ ವಿವಾದವನ್ನು ಇತ್ಯರ್ಥಗೊಳಿಸಲು ಒಪ್ಪಂದಕ್ಕೆ ಸಹಿ ಹಾಕಿದರು. 700 ಕಿಲೋಮೀಟರ್ ಗಡಿ ಪ್ರದೇಶದ ವಿವಾದವನ್ನು ಸಂಪೂರ್ಣವಾಗಿ ಪರಿಹರಿಸಲಾಗಿದೆ ಎಂದು ಆ ಸಮಯದಲ್ಲಿ ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ಗೃಹ ಸಚಿವರು ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ