AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂ-ಅರುಣಾಚಲ ಪ್ರದೇಶದ ಗಡಿಯಲ್ಲಿ ಗುಂಡಿನ ದಾಳಿಗೆ ಇಬ್ಬರು ಬಲಿ

ಸಾಮಾನ್ಯವಾಗಿ, ನೆರೆಯ ರಾಜ್ಯವು ನಮ್ಮ ಮೇಲೆ ದಾಳಿ ಮಾಡುವುದಿಲ್ಲ ಎಂದು ಅವರು ಹೇಳಿದರು. ಆದರೆ ನೆರೆಯ ರಾಜ್ಯಗಳ ಕೆಲವರು ಭೂಮಿಯನ್ನು ಆಕ್ರಮಿಸಿಕೊಳ್ಳುವ ದುರಾಸೆಯಿಂದ ಇಂತಹ ಚಟುವಟಿಕೆಗಳಲ್ಲಿ ತೊಡಗುತ್ತಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದ ಅಸ್ಸಾಂ ಸಿಎಂ

ಅಸ್ಸಾಂ-ಅರುಣಾಚಲ ಪ್ರದೇಶದ ಗಡಿಯಲ್ಲಿ ಗುಂಡಿನ ದಾಳಿಗೆ ಇಬ್ಬರು ಬಲಿ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jun 05, 2023 | 5:15 PM

Share

ಮುಖ್ಯಾಂಶಗಳು

  • ಅಸ್ಸಾಂ-ಅರುಣಾಚಲ ಪ್ರದೇಶದ(Arunachal Pradesh border) ಗಡಿಭಾಗದ ಪನ್ಬರಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ
  • ಧೇಮಾಜಿಯ ಶಾಸಕ ರನೋಜ್ ಪೆಗು ಈ ಬಗ್ಗೆ ಟ್ವೀಟ್ ಮಾಡಿದ್ದು, ಮೃತರನ್ನು ಬೋರ್ಬಿಲಾ ಚುಟಿಯಾಕಾರಿ ಗ್ರಾಮದ ನಿವಾಸಿ ಬೋಗಾ ಚುಟಿಯಾ ಮತ್ತು ಮೊನಿತು ಗೊಗೊಯ್ ಎಂದು ಗುರುತಿಸಿದ್ದಾರೆ.
  • ಧೇಮಾಜಿಯ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾಧಿಕಾರಿ ಈ ವಿಷಯವನ್ನು ಪರಿಶೀಲಿಸುತ್ತಿದ್ದಾರೆ ಎಂದ ಅಸ್ಸಾಂ ಸಿಎಂ

ಅಸ್ಸಾಂನ (Assam) ಧೇಮಾಜಿ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವಿಗೀಡಾಗಿದ್ದು, ಇಬ್ಬರಿಗೆ ಗಾಯಗಳಾಗಿವೆ ಎಂದು ಪ್ರತಿದಿನ್ ಟೈಮ್ ವರದಿ ಮಾಡಿದೆ. ಅಸ್ಸಾಂ-ಅರುಣಾಚಲ ಪ್ರದೇಶದ(Arunachal Pradesh border) ಗಡಿಭಾಗದ ಪನ್ಬರಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಧೇಮಾಜಿಯ ಶಾಸಕ ರನೋಜ್ ಪೆಗು ಈ ಬಗ್ಗೆ ಟ್ವೀಟ್ ಮಾಡಿದ್ದು, ಮೃತರನ್ನು ಬೋರ್ಬಿಲಾ ಚುಟಿಯಾಕಾರಿ ಗ್ರಾಮದ ನಿವಾಸಿ ಬೋಗಾ ಚುಟಿಯಾ ಮತ್ತು ಮೊನಿತು ಗೊಗೊಯ್ ಎಂದು ಗುರುತಿಸಿದ್ದಾರೆ. ಗಾಯಗೊಂಡವರನ್ನು ಪುಷ್ಪಾ ಗೊಗೊಯ್ ಮತ್ತು ಅಕೋನಿ ಗೊಹೈನ್ ಎಂದು ಗುರುತಿಸಲಾಗಿದೆ. ಜಿಲ್ಲಾಡಳಿತ ಮತ್ತು ಸ್ಥಳೀಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದಾರೆ ಎಂದು ಪೆಗು ಹೇಳಿದ್ದಾರೆ.

ಧೇಮಾಜಿಯ ಹಲವು ಪ್ರದೇಶಗಳಲ್ಲಿ ಅಸ್ಸಾಂ ಮತ್ತು ಅರುಣಾಚಲ ಪ್ರದೇಶದ ಗಡಿಯನ್ನು ಇನ್ನೂ ಸರಿಯಾಗಿ ಗುರುತಿಸಲಾಗಿಲ್ಲ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಸಾಮಾನ್ಯವಾಗಿ, ನೆರೆಯ ರಾಜ್ಯವು ನಮ್ಮ ಮೇಲೆ ದಾಳಿ ಮಾಡುವುದಿಲ್ಲ ಎಂದು ಅವರು ಹೇಳಿದರು. ಆದರೆ ನೆರೆಯ ರಾಜ್ಯಗಳ ಕೆಲವರು ಭೂಮಿಯನ್ನು ಆಕ್ರಮಿಸಿಕೊಳ್ಳುವ ದುರಾಸೆಯಿಂದ ಇಂತಹ ಚಟುವಟಿಕೆಗಳಲ್ಲಿ ತೊಡಗುತ್ತಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಧೇಮಾಜಿಯ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾಧಿಕಾರಿ ಈ ವಿಷಯವನ್ನು ಪರಿಶೀಲಿಸುತ್ತಿದ್ದಾರೆ ಎಂದು ಶರ್ಮಾ ಹೇಳಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶದ ಚುನಾವಣೆಗೆ ಕಮಲ್ ನಾಥ್ ನಾಯಕತ್ವ ಬಗ್ಗೆ ಪಕ್ಷದಲ್ಲೇ ಅಸಮಾಧಾನ; ಪರಸ್ಪರ ವಾಕ್ಸಮರ ನಡೆಸಿದ ನಾಯಕರು

ಏಪ್ರಿಲ್ 20 ರಂದು, ಶರ್ಮಾ ಮತ್ತು ಅರುಣಾಚಲ ಪ್ರದೇಶದ ಸಿಎಂ ಪೇಮಾ ಖಂಡು ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಉಪಸ್ಥಿತಿಯಲ್ಲಿ ಉಭಯ ರಾಜ್ಯಗಳ ನಡುವಿನ ದೀರ್ಘಾವಧಿಯ ಗಡಿ ವಿವಾದವನ್ನು ಇತ್ಯರ್ಥಗೊಳಿಸಲು ಒಪ್ಪಂದಕ್ಕೆ ಸಹಿ ಹಾಕಿದರು. 700 ಕಿಲೋಮೀಟರ್ ಗಡಿ ಪ್ರದೇಶದ ವಿವಾದವನ್ನು ಸಂಪೂರ್ಣವಾಗಿ ಪರಿಹರಿಸಲಾಗಿದೆ ಎಂದು ಆ ಸಮಯದಲ್ಲಿ ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ಗೃಹ ಸಚಿವರು ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!