AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಎಎಫ್ ನೆಲೆಯಲ್ಲಿ ಸ್ಫೋಟ ಸಂಭವಿಸಿದ ನಂತರ ಜಮ್ಮುವಿನ ಕಲುಚಕ್ ಸೇನಾ ಶಿಬಿರದ ಮೇಲೆ ಮತ್ತೆರಡು ಡ್ರೋನ್ ಪತ್ತೆ

Jammu: ಸೇನಾ ಸಿಬ್ಬಂದಿ ಡ್ರೋನ್‌ಗಳ ಮೇಲೆ 20-25 ಸುತ್ತು ಗುಂಡು ಹಾರಿಸಿದರು. ಎರಡು ಡ್ರೋನ್‌ಗಳನ್ನು ಪತ್ತೆ ಹಚ್ಚಲು ಕಲುಚಕ್ ಮಿಲಿಟರಿ ಕೇಂದ್ರದೊಳಗೆ ದೊಡ್ಡ ಪ್ರಮಾಣದ ಶೋಧ ನಡೆಯುತ್ತಿದೆ. ಜಮ್ಮು ಪ್ರದೇಶದಲ್ಲಿ ವಿಶೇಷವಾಗಿ ಸೇನಾ ನೆಲೆಯಲ್ಲಿ ಹೆಚ್ಚಿನ ಎಚ್ಚರಿಕೆ ನೀಡಲಾಗಿದೆ.

ಐಎಎಫ್ ನೆಲೆಯಲ್ಲಿ ಸ್ಫೋಟ ಸಂಭವಿಸಿದ ನಂತರ ಜಮ್ಮುವಿನ ಕಲುಚಕ್ ಸೇನಾ ಶಿಬಿರದ ಮೇಲೆ ಮತ್ತೆರಡು ಡ್ರೋನ್ ಪತ್ತೆ
ಭಾರತೀಯಸೇನೆ (ಸಂಗ್ರಹ ಚಿತ್ರ)
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jun 28, 2021 | 4:01 PM

ಜಮ್ಮು: ಜೂನ್ 27-28ರ ಮಧ್ಯರಾತ್ರಿಯಲ್ಲಿ ಜಮ್ಮುವಿನ ಕಲುಚಕ್ ಸೇನಾ ನೆಲೆಯಲ್ಲಿ ಎರಡು ಡ್ರೋನ್‌ಗಳನ್ನು ಗುರುತಿಸಲಾಗಿದೆ. ಒಂದು ಮಾನವರಹಿತ ವೈಮಾನಿಕ ವಾಹನ ((UAV) ರಾತ್ರಿ 11: 45 ಕ್ಕೆ ಸೇನಾ ನೆಲೆಯೊಳಗೆ ಮತ್ತು ಇನ್ನೊಂದು ಬೆಳಿಗ್ಗೆ 2:40 ಕ್ಕೆ ಹಾರಾಟ ನಡೆಸುತ್ತಿರುವುದು ಕಂಡುಬಂದಿದೆ. ತಕ್ಷಣವೇ ಅವುಗಳನ್ನು ನಿಷ್ಕ್ರಿಯಗೊಳಿಸಲು ಯೋಧರು ಡ್ರೋನ್‌ಗಳ ಮೇಲೆ ಗುಂಡು ಹಾರಿಸಿದರು. ಜಮ್ಮು ಪಠಾಣ್‌ಕೋಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲುಚಕ್-ಪುರ್ಮಂಡಲ್ ರಸ್ತೆಯ ಬದಿಯಲ್ಲಿ ಎರಡು ಕ್ವಾಡ್‌ಕೋಪ್ಟರ್‌ಗಳು ಪತ್ತೆಯಾಗಿದೆ. ಕಲುಚೆಕ್ ಸೇನಾ ನೆಲೆ ಬಳಿ ಶಂಕಿತ ವಸ್ತುಗಳು ಹಾರುತ್ತಿವೆ ಎಂದು ಪೊಲೀಸರು ತಿಳಿಸಿರುವುದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

ಸೇನಾ ಸಿಬ್ಬಂದಿ ಡ್ರೋನ್‌ಗಳ ಮೇಲೆ 20-25 ಸುತ್ತು ಗುಂಡು ಹಾರಿಸಿದರು. ಎರಡು ಡ್ರೋನ್‌ಗಳನ್ನು ಪತ್ತೆ ಹಚ್ಚಲು ಕಲುಚಕ್ ಮಿಲಿಟರಿ ಕೇಂದ್ರದೊಳಗೆ ದೊಡ್ಡ ಪ್ರಮಾಣದ ಶೋಧ ನಡೆಯುತ್ತಿದೆ. ಜಮ್ಮು ಪ್ರದೇಶದಲ್ಲಿ ವಿಶೇಷವಾಗಿ ಸೇನಾ ನೆಲೆಯಲ್ಲಿ ಹೆಚ್ಚಿನ ಎಚ್ಚರಿಕೆ ನೀಡಲಾಗಿದೆ.

ಜಮ್ಮುವಿನ ವಾಯುಪಡೆ ನಿಲ್ದಾಣದಲ್ಲಿ ಡ್ರೋನ್ ದಾಳಿ ನಡೆದ ಒಂದು ದಿನದ ನಂತರ ಈ ಘಟನೆ ನಡೆದಿದೆ. ಈ ರೀತಿಯ ಮೊದಲ ದಾಳಿಯಲ್ಲಿ ಜಮ್ಮು ವಿಮಾನ ನಿಲ್ದಾಣದ ಹೆಚ್ಚಿನ ಭದ್ರತಾ ತಾಂತ್ರಿಕ ಪ್ರದೇಶಕ್ಕೆ ಸ್ಫೋಟಕಗಳನ್ನು ಬಿಡಲು ಡ್ರೋನ್‌ಗಳನ್ನು ಬಳಸಲಾಯಿತು. ಭಾನುವಾರ ಮುಂಜಾನೆ ಎರಡು ಸ್ಫೋಟಗಳು ನಡೆದವ ಒಂದು ಕಟ್ಟಡದ ಮೇಲ್ಚಾವಣಿಯಲ್ಲಿ ರಂಧ್ರವನ್ನು ಸೀಳಿಸಿದರೆ, ಇನ್ನೊಂದು ಸ್ಫೋಟವು ತೆರೆದ ಜಾಗದಲ್ಲಾಗಿತ್ತು.

ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಭಯೋತ್ಪಾದಕ ದಾಳಿಯ ಬಗ್ಗೆ ತನಿಖೆ ನಡೆಸುತ್ತಿವೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ. ಅಧಿಕೃತ ಭೇಟಿಯಲ್ಲಿ ಬಾಂಗ್ಲಾದೇಶದಲ್ಲಿರುವ ಐಎಎಫ್ ಮುಖ್ಯ ವಾಯು ಮುಖ್ಯಸ್ಥ ಮಾರ್ಷಲ್ ಆರ್.ಕೆ.ಎಸ್ ಭದೌರಿಯಾ, ಜಮ್ಮುವಿನ ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸುತ್ತಿದ್ದಾರೆ.

ಇದನ್ನೂ ಓದಿ:  ಜಮ್ಮುವಿನಲ್ಲಿ ಅವಳಿ ಸ್ಫೋಟದ ಬೆನ್ನಲ್ಲೇ ಇಂದು 6ಕೆಜಿ ತೂಕದ ಐಇಡಿ ಪತ್ತೆ; ದೊಡ್ಡದೊಂದು ಉಗ್ರದಾಳಿ ತಪ್ಪಿತು ಎಂದ ಡಿಜಿಪಿ

(Two drones were spotted at Kaluchak military station in Jammu Alert Army jawans fired at the drones)

ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ