AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮುವಿನ ಏರ್ ​ಫೋರ್ಸ್ ಸ್ಟೇಶನ್​ ಒಳಗೆ ಎರಡು ಬಾರಿ ಸ್ಫೋಟ; ಬಾಂಬ್​ ನಿಷ್ಕ್ರಿಯ ದಳದಿಂದ ಪರಿಶೀಲನೆ

ಸ್ಥಳಕ್ಕೆ ಬಾಂಬ್​ ನಿಷ್ಕ್ರಿಯ ದಳ ತೆರಳಿದ್ದು, ಪರಿಶೀಲನೆ ನಡೆಯುತ್ತಿದೆ. ಇಷ್ಟು ಪ್ರಮಾಣದ ಭದ್ರತೆಯಿದ್ದರೂ ಸ್ಫೋಟ ಹೇಗಾಯಿತು ಎಂಬ ಬಗ್ಗೆ ತನಿಖೆಯೂ ಅದಾಗಲೇ ಶುರುವಾಗಿದೆ.

ಜಮ್ಮುವಿನ ಏರ್ ​ಫೋರ್ಸ್ ಸ್ಟೇಶನ್​ ಒಳಗೆ ಎರಡು ಬಾರಿ ಸ್ಫೋಟ; ಬಾಂಬ್​ ನಿಷ್ಕ್ರಿಯ ದಳದಿಂದ ಪರಿಶೀಲನೆ
ಜಮ್ಮು ಏರ್​ಫೋರ್ಸ್ ಪ್ರದೇಶ
TV9 Web
| Updated By: Lakshmi Hegde|

Updated on:Jun 27, 2021 | 9:04 AM

Share

ಜಮ್ಮುವಿನ ವಾಯುನೆಲೆ ಸ್ಟೇಶನ್​​ ಒಳಗೆ, 5 ನಿಮಿಷಗಳ ಅಂತರದಲ್ಲಿ ಎರಡು ಸ್ಫೋಟ ಸಂಭವಿಸಿದೆ. ಜೂ.26-27ರ ಮಧ್ಯರಾತ್ರಿ ಹೊತ್ತಿಗೆ ಈ ವಾಯುನೆಲೆ ಉನ್ನತ ಭದ್ರತಾ ಪ್ರದೇಶವಾಗಿದ್ದು, ಏರ್​​ಪೋರ್ಟ್​ ಬಳಿಯೇ ಇದೆ. ಸ್ಫೋಟದಿಂದ ಇಬ್ಬರು ಗಾಯಗೊಂಡಿದ್ದು, ಯಾರದ್ದೂ ಪ್ರಾಣ ಹಾನಿಯಾಗಿಲ್ಲ ಎಂದು ವರದಿಯಾಗಿದೆ. ತಡರಾತ್ರಿ 1.50 ಗಂಟೆ ಹೊತ್ತಿಗೆ ಮೊದಲು ಕಟ್ಟಡದ ಮೇಲ್ಭಾಗದಲ್ಲಿ ಸ್ಫೋಟಗೊಂಡಿತು. ಅದಾದ 5 ನಿಮಿಷಗಳಲ್ಲಿ ನೆಲಭಾಗದಲ್ಲಿ ಮತ್ತೇ ಅದೇ ತರಹದ ಸ್ಫೋಟ ಉಂಟಾಗಿದೆ.

ಸ್ಥಳಕ್ಕೆ ಬಾಂಬ್​ ನಿಷ್ಕ್ರಿಯ ದಳ ತೆರಳಿದ್ದು, ಪರಿಶೀಲನೆ ನಡೆಯುತ್ತಿದೆ. ಇಷ್ಟು ಪ್ರಮಾಣದ ಭದ್ರತೆಯಿದ್ದರೂ ಸ್ಫೋಟ ಹೇಗಾಯಿತು ಎಂಬ ಬಗ್ಗೆ ತನಿಖೆಯೂ ಅದಾಗಲೇ ಶುರುವಾಗಿದೆ. ಏರ್​ಫೋರ್ಸ್​ ಸ್ಟೇಶನ್​​ನಲ್ಲಿದ್ದ ಯಾವುದೇ ಉಪಕರಣಗಳಿಗೂ ಹಾನಿಯುಂಟಾಗಿಲ್ಲ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ. ಜಮ್ಮು-ಕಾಶ್ಮೀರದ ಭದ್ರತೆಗೆ ಸಂಬಂಧಪಟ್ಟಂತೆ ಇತ್ತೀಚೆಗಷ್ಟೇ ಗೃಹ ಸಚಿವ ಅಮಿತ್​ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್​, ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಇತರ ಗಣ್ಯರು ಸಭೆ ನಡೆಸಿದ್ದಾರೆ. ಮುಂದಿನ ವರ್ಷ ಅಲ್ಲಿ ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಸಿದ್ಧತೆ ಮಾಡುತ್ತಿದೆ.

ಇದನ್ನೂ ಓದಿ:Bigg Boss Kannada: ದಿವ್ಯಾಗಾಗಿ ಬಿಗ್​ ಬಾಸ್​ ಬಿಟ್ಟುಕೊಡ್ತೀನಿ ಎಂದ ಅರವಿಂದ್​; ಹಾಗಾದ್ರೆ ದಿವ್ಯಾ ಆಯ್ಕೆ ಏನು?

Published On - 9:03 am, Sun, 27 June 21

ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!