AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮದುವೆಗಾಗಿ ದೇವಸ್ಥಾನಕ್ಕೆ ಬಂದ 2 ಕುಟುಂಬಗಳ ಮಧ್ಯೆ ಹೊಡೆದಾಟ; ವಧುವನ್ನು ತಪ್ಪಿಸಲು ಹೋಗಿ ವರನಿಗೆ ಗಾಯ

ಕುಟುಂಬದವರು ಅದೆಷ್ಟರ ಮಟ್ಟಿಗೆ ಹೊಡೆದಾಟದಲ್ಲಿ ತಲ್ಲೀನರಾಗಿದ್ದಾರೆ ಎಂದರೆ ಅವರಿಗೆ ಕೊವಿಡ್​ 19 ನಿಯಂತ್ರಣಾ ನಿಯಮಗಳನ್ನು ತಾವು ಪಾಲಿಸುತ್ತಿಲ್ಲ ಎಂಬ ವಿಷಯವೇ ಮರೆತುಹೋಗಿದೆ.

Video: ಮದುವೆಗಾಗಿ ದೇವಸ್ಥಾನಕ್ಕೆ ಬಂದ 2 ಕುಟುಂಬಗಳ ಮಧ್ಯೆ ಹೊಡೆದಾಟ; ವಧುವನ್ನು ತಪ್ಪಿಸಲು ಹೋಗಿ ವರನಿಗೆ ಗಾಯ
ಮದುವೆಯ ಸಾಂಕೇತಿಕ ಚಿತ್ರ
TV9 Web
| Edited By: |

Updated on: Aug 21, 2021 | 11:34 AM

Share

ತಮಿಳುನಾಡಿನ ಕುಂದ್ರತ್ತೂರಿನ ಮುರುಗನ್​ ದೇವಸ್ಥಾನ (Murugan Temple)ದಲ್ಲಿ ಎರಡು ಕುಟುಂಬಗಳು ಹೊಡೆದಾಡಿದ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ವೈರಲ್​ ಆಗುತ್ತಿದೆ. ಯಾವ ಕುಟುಂಬದವರು ಮೊದಲು ಇಲ್ಲಿ ಮದುವೆ ಕಾರ್ಯ ನಡೆಸಬೇಕು ಎಂಬ ವಿಚಾರಕ್ಕೆ ವಾಗ್ವಾದ ಶುರುವಾಗಿ, ನಂತರ ಅದು ಮೈಕೈ ಮುಟ್ಟಿ, ಹೊಡೆದಾಡುವ ಹಂತಕ್ಕೆ ತಲುಪಿತ್ತು ಎಂದು ವರದಿಯಾಗಿದೆ. ವೈರಲ್​ ಆದ ವಿಡಿಯೋ ನೋಡಿ ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲಿ ಒಬ್ಬರೂ ಮಾಸ್ಕ್ ಕೂಡ ಹಾಕದೆ, ನೂಕು-ನುಗ್ಗಲು ಮಾಡಿಕೊಂಡಿದ್ದನ್ನು ಕಾಣಬಹುದು.

ಮುರುಗನ್​ ದೇವಸ್ಥಾನದಲ್ಲಿ ಮದುವೆ ಮಾಡಲು ಎರಡು ಬೇರೆಬೇರೆ ಕುಟುಂಬದವರು ಆಗಮಿಸಿದ್ದರು. ಆದರೆ ಒಂದು ಬಾರಿಗೆ ಇಲ್ಲಿ ಒಂದು ಕುಟುಂಬ ಮಾತ್ರ ಮದುವೆ ಮಾಡಬಹುದು. ಆದರೆ ಈ ಎರಡೂ ಕುಟುಂಬಗಳು ತಾವು ಮೊದಲು-ತಾವು ಮೊದಲು ಎಂದು ಕೂಗಾಡಿಕೊಂಡಿದ್ದಾರೆ. ಅದರ ಒಂದು ಕುಟುಂಬಕ್ಕೆ ಸೇರಿದ ವಧುವನ್ನು ಹಿಡಿದು ಎಳೆದಾಡಲಾಗಿದೆ..ಅದನ್ನು ನೋಡಲಾಗದೆ ಇನ್ನೊಂದು ಕುಟುಂಬದ ವರ ಹೋಗಿ ನಿಲ್ಲಿಸಲು ಪ್ರಯತ್ನಿಸಿದ್ದಾನೆ. ಆಗ ಆತನಿಗೂ ಏಟು ಬಿದ್ದಿದೆ.

ಕುಟುಂಬದವರು ಅದೆಷ್ಟರ ಮಟ್ಟಿಗೆ ಹೊಡೆದಾಟದಲ್ಲಿ ತಲ್ಲೀನರಾಗಿದ್ದಾರೆ ಎಂದರೆ ಅವರಿಗೆ ಕೊವಿಡ್​ 19 ನಿಯಂತ್ರಣಾ ನಿಯಮಗಳನ್ನು ತಾವು ಪಾಲಿಸುತ್ತಿಲ್ಲ ಎಂಬ ವಿಷಯವೇ ಮರೆತುಹೋಗಿದೆ. 21 ಸೆಕೆಂಡ್​ಗಳ ವಿಡಿಯೋಕ್ಕೆ ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟೆ, ವಿವಿಧ ರೂಪದ ಕಾಮೆಂಟ್​​ಗಳನ್ನು ನೆಟ್ಟಿಗರು ಬರೆದಿದ್ದಾರೆ. ಇಂಥ ಕಾರ್ಯಕ್ರಮಗಳೇ ಕೊರೊನಾ ಸೂಪರ್​ ಸ್ಪ್ರೆಡರ್​ಗಳಾಗಿ ಬದಲಾಗುತ್ತವೆ. ಸರ್ಕಾರ ಕಡಿವಾಣ ಹಾಕಬೇಕು ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಕಾಮೆಂಟ್​ ಬರೆದಿದ್ದಾರೆ. ಈ ತಿಂಗಳಲ್ಲಿ ಇರುವ ಕೊನೆಯ ಒಳ್ಳೆಯ ಮುಹೂರ್ತ ಆಗಿದ್ದರಿಂದ ಎರಡೂ ಕುಟುಂಬಗಳೂ ಪರಸ್ಪರ ಕಿತ್ತಾಡಿಕೊಂಡಿವೆ. ಮುಹೂರ್ತ ತಪ್ಪಿದರೆ ಮತ್ತೆ ಮದುವೆ ವಿಳಂಬವಾಗುತ್ತದೆ ಎಂಬ ಆತಂಕದಲ್ಲಿ ದೈಹಿಕ ಹಿಂಸಾಚಾರ ನಡೆಸಿಕೊಂಡಿದ್ದಾರೆಂದು ವರದಿಯಾಗಿದೆ.

ಇದನ್ನೂ ಓದಿ: ಜೈಲಿನಿಂದ ಬಿಡುಗಡೆಯಾಗುವ ವಿನಯ್ ಕುಲಕರ್ಣಿ ಸ್ವಾಗತಕ್ಕೆ ರಾಖಿ ಹಿಡಿದು ನಿಂತಿರುವ ಲಕ್ಷ್ಮೀ ಹೆಬ್ಬಾಳ್ಕರ್

Vaccine for Children: ಕೋವಿಡ್​ 3ನೇ ಅಲೆ ಭೀತಿ ಮಧ್ಯೆ ಮಕ್ಕಳು ಮರಳಿ ಶಾಲೆಗೆ; ಮಕ್ಕಳಿಗೆ ತಕ್ಷಣಕ್ಕೆ ಬೇಕಿದೆ ಕೊರೊನಾ ವ್ಯಾಕ್ಸಿನ್  

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ