Video: ಮದುವೆಗಾಗಿ ದೇವಸ್ಥಾನಕ್ಕೆ ಬಂದ 2 ಕುಟುಂಬಗಳ ಮಧ್ಯೆ ಹೊಡೆದಾಟ; ವಧುವನ್ನು ತಪ್ಪಿಸಲು ಹೋಗಿ ವರನಿಗೆ ಗಾಯ

ಕುಟುಂಬದವರು ಅದೆಷ್ಟರ ಮಟ್ಟಿಗೆ ಹೊಡೆದಾಟದಲ್ಲಿ ತಲ್ಲೀನರಾಗಿದ್ದಾರೆ ಎಂದರೆ ಅವರಿಗೆ ಕೊವಿಡ್​ 19 ನಿಯಂತ್ರಣಾ ನಿಯಮಗಳನ್ನು ತಾವು ಪಾಲಿಸುತ್ತಿಲ್ಲ ಎಂಬ ವಿಷಯವೇ ಮರೆತುಹೋಗಿದೆ.

Video: ಮದುವೆಗಾಗಿ ದೇವಸ್ಥಾನಕ್ಕೆ ಬಂದ 2 ಕುಟುಂಬಗಳ ಮಧ್ಯೆ ಹೊಡೆದಾಟ; ವಧುವನ್ನು ತಪ್ಪಿಸಲು ಹೋಗಿ ವರನಿಗೆ ಗಾಯ
ಮದುವೆಯ ಸಾಂಕೇತಿಕ ಚಿತ್ರ
Follow us
| Updated By: Lakshmi Hegde

Updated on: Aug 21, 2021 | 11:34 AM

ತಮಿಳುನಾಡಿನ ಕುಂದ್ರತ್ತೂರಿನ ಮುರುಗನ್​ ದೇವಸ್ಥಾನ (Murugan Temple)ದಲ್ಲಿ ಎರಡು ಕುಟುಂಬಗಳು ಹೊಡೆದಾಡಿದ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ವೈರಲ್​ ಆಗುತ್ತಿದೆ. ಯಾವ ಕುಟುಂಬದವರು ಮೊದಲು ಇಲ್ಲಿ ಮದುವೆ ಕಾರ್ಯ ನಡೆಸಬೇಕು ಎಂಬ ವಿಚಾರಕ್ಕೆ ವಾಗ್ವಾದ ಶುರುವಾಗಿ, ನಂತರ ಅದು ಮೈಕೈ ಮುಟ್ಟಿ, ಹೊಡೆದಾಡುವ ಹಂತಕ್ಕೆ ತಲುಪಿತ್ತು ಎಂದು ವರದಿಯಾಗಿದೆ. ವೈರಲ್​ ಆದ ವಿಡಿಯೋ ನೋಡಿ ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲಿ ಒಬ್ಬರೂ ಮಾಸ್ಕ್ ಕೂಡ ಹಾಕದೆ, ನೂಕು-ನುಗ್ಗಲು ಮಾಡಿಕೊಂಡಿದ್ದನ್ನು ಕಾಣಬಹುದು.

ಮುರುಗನ್​ ದೇವಸ್ಥಾನದಲ್ಲಿ ಮದುವೆ ಮಾಡಲು ಎರಡು ಬೇರೆಬೇರೆ ಕುಟುಂಬದವರು ಆಗಮಿಸಿದ್ದರು. ಆದರೆ ಒಂದು ಬಾರಿಗೆ ಇಲ್ಲಿ ಒಂದು ಕುಟುಂಬ ಮಾತ್ರ ಮದುವೆ ಮಾಡಬಹುದು. ಆದರೆ ಈ ಎರಡೂ ಕುಟುಂಬಗಳು ತಾವು ಮೊದಲು-ತಾವು ಮೊದಲು ಎಂದು ಕೂಗಾಡಿಕೊಂಡಿದ್ದಾರೆ. ಅದರ ಒಂದು ಕುಟುಂಬಕ್ಕೆ ಸೇರಿದ ವಧುವನ್ನು ಹಿಡಿದು ಎಳೆದಾಡಲಾಗಿದೆ..ಅದನ್ನು ನೋಡಲಾಗದೆ ಇನ್ನೊಂದು ಕುಟುಂಬದ ವರ ಹೋಗಿ ನಿಲ್ಲಿಸಲು ಪ್ರಯತ್ನಿಸಿದ್ದಾನೆ. ಆಗ ಆತನಿಗೂ ಏಟು ಬಿದ್ದಿದೆ.

ಕುಟುಂಬದವರು ಅದೆಷ್ಟರ ಮಟ್ಟಿಗೆ ಹೊಡೆದಾಟದಲ್ಲಿ ತಲ್ಲೀನರಾಗಿದ್ದಾರೆ ಎಂದರೆ ಅವರಿಗೆ ಕೊವಿಡ್​ 19 ನಿಯಂತ್ರಣಾ ನಿಯಮಗಳನ್ನು ತಾವು ಪಾಲಿಸುತ್ತಿಲ್ಲ ಎಂಬ ವಿಷಯವೇ ಮರೆತುಹೋಗಿದೆ. 21 ಸೆಕೆಂಡ್​ಗಳ ವಿಡಿಯೋಕ್ಕೆ ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟೆ, ವಿವಿಧ ರೂಪದ ಕಾಮೆಂಟ್​​ಗಳನ್ನು ನೆಟ್ಟಿಗರು ಬರೆದಿದ್ದಾರೆ. ಇಂಥ ಕಾರ್ಯಕ್ರಮಗಳೇ ಕೊರೊನಾ ಸೂಪರ್​ ಸ್ಪ್ರೆಡರ್​ಗಳಾಗಿ ಬದಲಾಗುತ್ತವೆ. ಸರ್ಕಾರ ಕಡಿವಾಣ ಹಾಕಬೇಕು ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಕಾಮೆಂಟ್​ ಬರೆದಿದ್ದಾರೆ. ಈ ತಿಂಗಳಲ್ಲಿ ಇರುವ ಕೊನೆಯ ಒಳ್ಳೆಯ ಮುಹೂರ್ತ ಆಗಿದ್ದರಿಂದ ಎರಡೂ ಕುಟುಂಬಗಳೂ ಪರಸ್ಪರ ಕಿತ್ತಾಡಿಕೊಂಡಿವೆ. ಮುಹೂರ್ತ ತಪ್ಪಿದರೆ ಮತ್ತೆ ಮದುವೆ ವಿಳಂಬವಾಗುತ್ತದೆ ಎಂಬ ಆತಂಕದಲ್ಲಿ ದೈಹಿಕ ಹಿಂಸಾಚಾರ ನಡೆಸಿಕೊಂಡಿದ್ದಾರೆಂದು ವರದಿಯಾಗಿದೆ.

ಇದನ್ನೂ ಓದಿ: ಜೈಲಿನಿಂದ ಬಿಡುಗಡೆಯಾಗುವ ವಿನಯ್ ಕುಲಕರ್ಣಿ ಸ್ವಾಗತಕ್ಕೆ ರಾಖಿ ಹಿಡಿದು ನಿಂತಿರುವ ಲಕ್ಷ್ಮೀ ಹೆಬ್ಬಾಳ್ಕರ್

Vaccine for Children: ಕೋವಿಡ್​ 3ನೇ ಅಲೆ ಭೀತಿ ಮಧ್ಯೆ ಮಕ್ಕಳು ಮರಳಿ ಶಾಲೆಗೆ; ಮಕ್ಕಳಿಗೆ ತಕ್ಷಣಕ್ಕೆ ಬೇಕಿದೆ ಕೊರೊನಾ ವ್ಯಾಕ್ಸಿನ್  

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ