AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡುಬೀದಿಯಲ್ಲಿ ಯುವತಿಯರ ಹೊಡೆದಾಟ; ಕೊಳಚೆ ನೀರಲ್ಲಿ ಬಿದ್ದು ಹೊರಳಾಡಿ, ಜುಟ್ಟು ಹಿಡಿದುಕೊಂಡು ಕಾದಾಟ

ಹೊಡೆದಾಟದಲ್ಲಿ ಅದೆಷ್ಟರ ಮಟ್ಟಿಗೆ ಮೈಮರೆತಿದ್ದರು ಎಂದರೆ, ಇವರಿಬ್ಬರೂ ಪರಸ್ಪರ ಎಳೆದಾಡುತ್ತ ಹೋಗಿ ಕೊಚ್ಚೆ ಗುಂಡಿಗೆ ಬಿದ್ದಿದ್ದಾರೆ. ಅವರ ಮೈಯೆಲ್ಲ ಕಪ್ಪಾದ, ಹೊಲಸು ನೀರಿನಿಂದ ಗಲೀಜಾದರೂ ಸಹ ಎಚ್ಚರವಿರಲಿಲ್ಲ.

ನಡುಬೀದಿಯಲ್ಲಿ ಯುವತಿಯರ ಹೊಡೆದಾಟ; ಕೊಳಚೆ ನೀರಲ್ಲಿ ಬಿದ್ದು ಹೊರಳಾಡಿ, ಜುಟ್ಟು ಹಿಡಿದುಕೊಂಡು ಕಾದಾಟ
ಇಬ್ಬರು ಯುವತಿಯರ ಹೊಡೆದಾಟ
Follow us
Lakshmi Hegde
|

Updated on: Apr 09, 2021 | 9:32 AM

ಇಬ್ಬರು ಯುವತಿಯರ ಬೀದಿ ಜಗಳದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಸಿಕ್ಕಾಪಟೆ ವೈರಲ್ ಆಗುತ್ತಿದೆ. ನೆಟ್ಟಿಗರಂತೂ ವಿಡಿಯೋ ನೋಡಿ ಆಡಿಕೊಂಡು ನಗುತ್ತಿದ್ದಾರೆ. ಪ್ಯಾಂಟ್ ಶರ್ಟ್​ ಹಾಕಿಕೊಂಡ ಹುಡುಗಿಯರು ರಸ್ತೆ ಮಧ್ಯೆ ಪರಸ್ಪರ ಜುಟ್ಟು ಹಿಡಿದುಕೊಂಡು ಎಳೆದಾಡುತ್ತ ಹೊಡೆದಾಡಿದ್ದಾರೆ. ಈ ವಿಡಿಯೋ ಎಲ್ಲಿಯದು ಎಂಬುದು ಗೊತ್ತಾಗಿಲ್ಲ. ಆದರೆ ಇವರಿಬ್ಬರು ಇಷ್ಟೊಂದು ಕ್ರೂರವಾಗಿ, ಕೆಟ್ಟದಾಗಿ ಹೊಡೆದಾಡಿಕೊಳ್ಳಲು ಕಾರಣವೇನು? ಎಲ್ಲಿ ನಡೆದಿದ್ದು ಎಂಬ ಕುತೂಹಲವನ್ನು ನೆಟ್ಟಿಗರು ವ್ಯಕ್ತಪಡಿಸುತ್ತಿದ್ದಾರೆ.

ಹೊಡೆದಾಟದಲ್ಲಿ ಅದೆಷ್ಟರ ಮಟ್ಟಿಗೆ ಮೈಮರೆತಿದ್ದರು ಎಂದರೆ, ಇವರಿಬ್ಬರೂ ಪರಸ್ಪರ ಎಳೆದಾಡುತ್ತ ಹೋಗಿ ಕೊಚ್ಚೆ ಗುಂಡಿಗೆ ಬಿದ್ದಿದ್ದಾರೆ. ಅವರ ಮೈಯೆಲ್ಲ ಕಪ್ಪಾದ, ಹೊಲಸು ನೀರಿನಿಂದ ಗಲೀಜಾದರೂ ಸಹ ಎಚ್ಚರವಿರಲಿಲ್ಲ. ಹೊಡೆದಾಟವನ್ನು ನೋಡಿ ಕೆಲವರು ಬಿಡಿಸಲು ಹೋದರೂ ಗುದ್ದಾಟವನ್ನು ನಿಲ್ಲಿಸಲಿಲ್ಲ. ಕಪ್ಪಾದ ನೀರು, ಮುಖಕ್ಕೆಲ್ಲ ಎರಚಿದ್ದರೂ ಅದ್ಯಾವುದೂ ಲೆಕ್ಕಕ್ಕೆ ಬರಲಿಲ್ಲ. ಕೈಯಿ, ಮುಖವನ್ನೆಲ್ಲ ಗಲೀಜು ಮಾಡಿಕೊಂಡೇ ಹೊಡೆದಾಟ ನಡೆಸಿದ್ದಾರೆ.

ಇತ್ತೀಚೆಗೆ ಮಧ್ಯಪ್ರದೇಶದ ಪನ್ನಾದ ಮಲಾಘನ್ ಗ್ರಾಮದಲ್ಲಿ ಕೂಡ ಇಂಥದ್ದೇ ಘಟನೆ ನಡೆದಿತ್ತು. ಕುಡಿಯುವ ನೀರನ್ನು ಹಿಡಿಯಲು ನಿಂತಿದ್ದ ಮಹಿಳೆಯರು ಸಿಕ್ಕಾಪಟೆ ಹೊಡೆದಾಡಿಕಕೊಂಡಿದ್ದರು. ಈ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವಿಪರೀತ ವೈರಲ್ ಆಗಿತ್ತು.

ಇದನ್ನೂ ಓದಿ: ಸಾರಿಗೆ ಮುಷ್ಕರ; ಕೋಡಿಹಳ್ಳಿ ಚಂದ್ರಶೇಖರ್​ಗೆ 10 ಲಕ್ಷ ರೂ. ಪರಿಹಾರ ಕೇಳಿ ಲೀಗಲ್ ನೋಟಿಸ್ ನೀಡಿದ ವಿದ್ಯಾರ್ಥಿನಿ

ಕೊರೊನಾ ನಿಯಮಾವಳಿ ಪಾಲಿಸದವರ ಮೇಲೆ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ದೂರು ದಾಖಲು

(Two Girls Fight Violently in Middle of The Road)

ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ