AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Governors: ಮಹಾರಾಷ್ಟ್ರ ರಾಜ್ಯಪಾಲ ಕೋಶ್ಯಾರಿ ರಾಜೀನಾಮೆ; ರಾಷ್ಟ್ರಪತಿಗಳಿಂದ 12 ರಾಜ್ಯಪಾಲರ ನೇಮಕ; ಇಲ್ಲಿದೆ ಪಟ್ಟಿ

The President Appoints 12 New Governors: ಇಬ್ಬರು ರಾಜ್ಯಪಾಲರು ರಾಜೀನಾಮೆ ನೀಡಿದ್ದು, 12 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೂತನ ರಾಜ್ಯಪಾಲರನ್ನು ನೇಮಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದಾರೆ.

New Governors: ಮಹಾರಾಷ್ಟ್ರ ರಾಜ್ಯಪಾಲ ಕೋಶ್ಯಾರಿ ರಾಜೀನಾಮೆ; ರಾಷ್ಟ್ರಪತಿಗಳಿಂದ 12 ರಾಜ್ಯಪಾಲರ ನೇಮಕ; ಇಲ್ಲಿದೆ ಪಟ್ಟಿ
ದ್ರೌಪದಿ ಮುರ್ಮು
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Feb 12, 2023 | 10:05 AM

Share

ನವದೆಹಲಿ: ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ (Bhagat Singh Koshyari) ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ರಾಧಾಕೃಷ್ಣ ಮಾಥುರ್ ಅವರು ರಾಜೀನಾಮೆ ನೀಡಿದ್ದು, ಅದನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದಾರೆ. ಇದರ ಬೆನ್ನಲ್ಲೇ ರಾಷ್ಟ್ರಪತಿ ದ್ರೌಪದಿ ಮುರ್ಮು (The President Draupadi Murmu) ಅವರು 12 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ರಾಜ್ಯಪಾಲ ಮತ್ತು ಲೆಫ್ಟಿನೆಂಟ್ ಗವರ್ನರುಗಳ ನೇಮಕಾತಿ ಮಾಡಿದ್ದಾರೆ.

ಅದರಂತೆ ಮಹಾರಾಷ್ಟ್ರದಲ್ಲಿ ನಿರ್ಗಮಿತ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಸ್ಥಾನವನ್ನು ಮಾಜಿ ಕೇಂದ್ರ ಸಚಿವ ಹಾಗೂ ಜಾರ್ಖಂಡ್ ರಾಜ್ಯಪಾಲ ರಮೇಶ್ ಬೈಸ್ (Ramesh Bais) ತುಂಬಿದ್ದಾರೆ. ಜಾರ್ಖಂಡ್ ರಾಜ್ಯಪಾಲರಾಗಿ ಸಿ.ಪಿ. ರಾಧಾಕೃಷ್ಣನ್ ನೇಮಕವಾಗಿದೆ.

ಅರುಣಾಚಲಪ್ರದೇಶದ ರಾಜ್ಯಪಾಲರಾಗಿದ್ದ ಬಿ.ಡಿ. ಮಿಶ್ರಾ ಅವರನ್ನು ಲಡಾಖ್​ಗೆ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಲಾಗಿದೆ. ಅರುಣಾಚಲ ಪ್ರದೇಶಕ್ಕೆ ಹೊಸ ರಾಜ್ಯಪಾಲರಾಗಿ ಲೆಫ್ಟಿನೆಂಟ್ ಜನರಲ್ ಕೈವಲ್ಯ ತ್ರಿವಿಕ್ರಮ್ ಪರ್ನಾಯಕ್ ನೇಮಕವಾಗಿದ್ದಾರೆ. ಇನ್ನು, ಕರ್ನಾಟಕ ಮೂಲದ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಎಸ್ ಅಬ್ದುಲ್ ನಜೀರ್ ಅವರನ್ನು ಆಂಧ್ರದ ರಾಜ್ಯಪಾಲರಾಗಿ ನೇಮಿಸಲಾಗಿದೆ.

ಇದನ್ನೂ ಓದಿ: NHAI: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ತಮಿಳುನಾಡು ಸಹಕಾರ ನೀಡುತ್ತಿಲ್ಲ ಎಂಬುದು ಸರಿಯಲ್ಲ; ಗಡ್ಕರಿಗೆ ಸ್ಟಾಲಿನ್

ರಾಷ್ಟ್ರಪತಿಗಳಿಂದ ನೇಮಕವಾದ 12 ರಾಜ್ಯಪಾಲರು

ಅರುಣಾಚಲಪ್ರದೇಶ ರಾಜ್ಯಪಾಲ: ಲೆಫ್ಟಿನೆಂಟ್ ಜನರಲ್ ಕೈವಲ್ಯ ತ್ರಿವಿಕ್ರಮ್ ಪರ್ನಾಯಕ್ ನೇಮಕ

ಸಿಕ್ಕಿಂ ರಾಜ್ಯಪಾಲ: ಲಕ್ಷ್ಮಣ್ ಪ್ರಸಾದ್ ಆಚಾರ್ಯ

ಜಾರ್ಖಂಡ್ ರಾಜ್ಯಪಾಲ: ಸಿ.ಪಿ. ರಾಧಾಕೃಷ್ಣನ್

ಹಿಮಾಚಲಪ್ರದೇಶ ರಾಜ್ಯಪಾಲ: ಶಿವಪ್ರತಾಪ್ ಶುಕ್ಲಾ

ಅಸ್ಸಾಂ ರಾಜ್ಯಪಾಲ: ಗುಲಾಬ್ ಚಂದ್ ಕಟಾರಿಯಾ

ಛತ್ತೀಸ್​ಗಡ ರಾಜ್ಯಪಾಲ: ಬಿಸ್ವ ಭೂಸನ್ ಹರಿಚಂದನ್

ಮಣಿಪುರ ರಾಜ್ಯಪಾಲ: ಅನುಸೂಯ ಊಕ್ಯೆ

ನಾಗಾಲೆಂಡ್ ರಾಜ್ಯಪಾಲ: ಲಾ ಗಣೇಸನ್

ಮೇಘಾಲಯ ರಾಜ್ಯಪಾಲ: ಫಾಗು ಚೌಹಾಣ್

ಬಿಹಾರ ರಾಜ್ಯಪಾಲ: ರಾಜೇಂದ್ರ ವಿಶ್ವನಾಥ್ ಅರ್ಲೇಕರ್

ಮಹಾರಾಷ್ಟ್ರ ರಾಜ್ಯಪಾಲ: ರಮೇಶ್ ಬೈಸ್

ಅರುಣಾಚಲ ಕೇಂದ್ರಾಡಳಿತದ ಲೆಫ್ಟಿನೆಂಟ್ ಗವರ್ನರ್: ನಿವೃತ್ತ ಬ್ರಿಗೇಡಿಯರ್ ಬಿ.ಡಿ. ಮಿಶ್ರಾ

Published On - 10:00 am, Sun, 12 February 23

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!