AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​ ವಿಮಾನ ನಿಲ್ದಾಣದಲ್ಲಿ ಬರೋಬ್ಬರಿ 14 ಕೆಜಿ ಜಿನ್ನ ಜಪ್ತಿ!

ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 14 ಕೆಜಿ ಚಿನ್ನವನ್ನು ಡಿಆರ್‌ಐ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಬ್ಬರು ಪ್ರಯಾಣಿಕರಿಂದ ಬರೋಬ್ಬರಿ 14 ಕೆಜಿ ಚಿನ್ನವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ ವಶಪಡಿಸಿಕೊಂಡಿದೆ. ಕಲ್ಲು ದಂಧೆಕೋರರ ಪುಂಡಾಟ: ರಾಜಸ್ಥಾನದ ಟೋಂಕ್‌ ಎಂಬಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನ ನಡೆದಿದೆ. ಅಕ್ರಮವಾಗಿ ಕಲ್ಲು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ನನ್ನ ಅರಣ್ಯ ಅಧಿಕಾರಿಗಳು ಅಡ್ಡಗಟ್ಟಿದ್ದಾರೆ. ಈ ವೇಳೆ ದಂಧೆಕೋರರು ಸೈಲೆನ್ಸರ್ ಪೈಪ್‌ನಿಂದ ಅಧಿಕಾರಿಗಳಿಗೆ ಹೊಡೆಯಲು ಯತ್ನಿಸಿದ್ದಾರೆ. […]

ಹೈದರಾಬಾದ್​ ವಿಮಾನ ನಿಲ್ದಾಣದಲ್ಲಿ ಬರೋಬ್ಬರಿ 14 ಕೆಜಿ ಜಿನ್ನ ಜಪ್ತಿ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 13, 2019 | 11:45 AM

Share

ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 14 ಕೆಜಿ ಚಿನ್ನವನ್ನು ಡಿಆರ್‌ಐ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಬ್ಬರು ಪ್ರಯಾಣಿಕರಿಂದ ಬರೋಬ್ಬರಿ 14 ಕೆಜಿ ಚಿನ್ನವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ ವಶಪಡಿಸಿಕೊಂಡಿದೆ.

ಕಲ್ಲು ದಂಧೆಕೋರರ ಪುಂಡಾಟ: ರಾಜಸ್ಥಾನದ ಟೋಂಕ್‌ ಎಂಬಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನ ನಡೆದಿದೆ. ಅಕ್ರಮವಾಗಿ ಕಲ್ಲು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ನನ್ನ ಅರಣ್ಯ ಅಧಿಕಾರಿಗಳು ಅಡ್ಡಗಟ್ಟಿದ್ದಾರೆ. ಈ ವೇಳೆ ದಂಧೆಕೋರರು ಸೈಲೆನ್ಸರ್ ಪೈಪ್‌ನಿಂದ ಅಧಿಕಾರಿಗಳಿಗೆ ಹೊಡೆಯಲು ಯತ್ನಿಸಿದ್ದಾರೆ. ಅಲ್ಲದೇ ಟ್ರ್ಯಾಕ್ಟರ್‌ನಲ್ಲಿದ್ದ ಕಲ್ಲನ್ನ ರೋಡ್‌ನಲ್ಲೇ ಖಾಲಿ ಮಾಡಿ ಎಸ್ಕೇಪ್ ಆಗಿದ್ದಾರೆ.

ಬೈಕ್ ಮೇಲೆ ಕಾಡಾನೆ ದಾಳಿ: ಒಡಿಶಾದ ಮಯೂರಬಂಜ್‌ನಲ್ಲಿ ಕಾಡಾನೆಯೊಂದು ಬೈಕ್‌ ಮೇಲೆ ಅಟ್ಯಾಕ್‌ ಮಾಡಿದೆ. ಮಣ್ಣಿನ ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ಬೈಕ್ ಮೇಲೆ ಅಟ್ಯಾಕ್ ಮಾಡಿದ್ದು, ಬೈಕನ್ನ ಪುಡಿಗಟ್ಟಿದೆ. ಆದ್ರೆ ಬೈಕ್‌ ಸವಾರ ಇದ್ದನ ಅಥವಾ ಬೈಕ್ ಬಿಟ್ಟು ಎಸ್ಕೇಪ್ ಆಗಿದ್ದಾನಾ ಅನ್ನೋದು ತಿಳಿದು ಬಂದಿಲ್ಲ.

ಎಟಿಎಂಗೆ ನುಗ್ಗಿದ್ದ ಖದೀಮ ಸೆರೆ: ಉತ್ತರ ಪ್ರದೇಶದ ಬರೇಲಿಯಲ್ಲಿ ಎಟಿಎಂ ದರೋಡೆಗೆ ಯತ್ನಿಸಿದ್ದ ಖದೀಮ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಮೊನ್ನೆ ರಾತ್ರಿ ಬ್ಯಾಂಕ್ ಆಫ್ ಬರೋಡಾ ಎಟಿಎಂಗೆ ನುಗ್ಗಿದ್ದ ಖದೀಮ, ಎಟಿಎಂ ಒಡೆದು ಹಣ ದೋಚಲು ಯತ್ನಿಸಿದ್ದ. ಈ ಕೇಸ್ ಬೆನ್ನುಬಿದ್ದಿದ್ದ ಪೊಲೀಸರು ಸಿಸಿಟಿವಿ ಆಧರಿಸಿ ಕಿರಾತಕನನ್ನು ಖೆಡ್ಡಾಗೆ ಕೆಡವಿದ್ದಾರೆ.

ರಾಶಿ ರಾಶಿ ಆಲಿಕಲ್ಲು ನಗೌರ್, ರಾಜಸ್ಥಾನ: ರಾಜಸ್ಥಾನದ ನಗೌರ್​ನಲ್ಲಿ ಭಾರಿ ಆಲಿಕಲ್ಲು ಮಳೆ ಸುರಿದಿದೆ. ಇದ್ರಿಂದಾಗಿ ರಸ್ತೆ, ಮನೆಗಳು ಸೇರಿದಂತೆ ಎಲ್ಲೆಂದ್ರಲ್ಲಿ ಆಲಿಕಲ್ಲುಗಳ ರಾಶಿ ಬಿದ್ದು ಜನ ಪರದಾಡಿದ್ರು. ಅದ್ರಲ್ಲೂ ಮನೆ ಮೇಲೆ ಬಿದ್ದಿದ್ದ ಆಲಿಕಲ್ಲು ರಾಶಿಯನ್ನ ಹೊರಹಾಕಿ ಜನ ಸುಸ್ತಾದ್ರು.

‘ಆಲಿಕಲ್ಲು’ ಅವತಾರ ಶಾಜಾಪುರ, ಮಧ್ಯಪ್ರದೇಶ ಮಧ್ಯಪ್ರದೇಶದ ಶಾಜಾಪುರದಲ್ಲೂ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ. ಇದ್ರಿಂದಾಗಿ ಎಲ್ಲೆಂದ್ರಲ್ಲಿ ಆಲಿಕಲ್ಲಿನ ರಾಶಿ ಉಂಟಾಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಅಲ್ದೆ, ರಸ್ತೆಯಲ್ಲಿ ಆಲಿಕಲ್ಲು ರಾಶಿ ಬಿದ್ದಿದ್ರಿಂದ ವಾಹನ ಸವಾರರು ಪರದಾಡಿದ್ರು.

ಪ್ಯಾನ್‌ಗೆ ಆಧಾರ್‌ ಲಿಂಕ್‌ಗೆ ಡಿ.31 ಲಾಸ್ಟ್‌: ಆಧಾರ್‌ ಮತ್ತು ಪ್ಯಾನ್‌ ಕಾರ್ಡ್‌ ಜೋಡಣೆಗೆ ಕೇಂದ್ರ ಸರ್ಕಾರ ನೀಡಿದ್ದ ಗಡುವು ಇದೇ ಡಿಸೆಂಬರ್​ 31ಕ್ಕೆ ಕೊನೆಯಾಗಲಿದೆ. ಈ ಮೊದಲು ಸೆಪ್ಟೆಂಬರ್‌ 30ರೊಳಗೆ ಆಧಾರ್-ಪ್ಯಾನ್‌ ಲಿಂಕ್‌ ಮಾಡಿಸಲು ಸೂಚಿಸಿತ್ತು. ನಿರೀಕ್ಷಿತ ಪ್ರಮಾಣದಲ್ಲಿ ಜನರು ಸ್ಪಂದಿಸದ ಕಾರಣ ಅಂತಿಮ ದಿನಾಂಕವನ್ನು ಮತ್ತೆ 2019ರ ಡಿಸೆಂಬರ್ 31ಕ್ಕೆ ಮುಂದೂಡಿತ್ತು.

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!