AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhya Pradesh: ಕಾಯಿಲೆ ಗುಣವಾಗಲೆಂದು ಕಾದ ಕಬ್ಬಿಣದಿಂದ 20 ಬಾರಿ ಚುಚ್ಚಿ ಹಸುಗೂಸು ಸಾವು

ಕಾಯಿಲೆಯನ್ನು ಗುಣಪಡಿಸಲೆಂದು ಕಾದ ಕಬ್ಬಿಣದಿಂದ 20 ಬಾರಿ ಚುಚ್ಚಿದ ಪರಿಣಾಮ 3 ತಿಂಗಳ ಹಸುಗೂಸು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

Madhya Pradesh: ಕಾಯಿಲೆ ಗುಣವಾಗಲೆಂದು ಕಾದ ಕಬ್ಬಿಣದಿಂದ 20 ಬಾರಿ ಚುಚ್ಚಿ ಹಸುಗೂಸು ಸಾವು
ಮಗು
ನಯನಾ ರಾಜೀವ್
|

Updated on: Feb 06, 2023 | 11:54 AM

Share

ಕಾಯಿಲೆಯನ್ನು ಗುಣಪಡಿಸಲೆಂದು ಕಾದ ಕಬ್ಬಿಣದಿಂದ 20 ಬಾರಿ ಚುಚ್ಚಿದ ಪರಿಣಾಮ 3 ತಿಂಗಳ ಹಸುಗೂಸು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಗುವನ್ನು ಸರ್ಕಾರಿ ಆಸ್ಪತ್ರೆ ದಾಖಲಿಸಲಾಯಿತು, ಬಳಿಕ ಖಾಸಗಿ ಆಸ್ಪತ್ರೆಗೆ ಮಗುವನ್ನು ದಾಖಲಿಸಲಾಗಿತ್ತು, ಆದರೂ ಮಗು ಕೊನೆಯುಸಿರೆಳೆಯಿತು. ಮಧ್ಯಪ್ರದೇಶದಲ್ಲಿ ನಡೆದ ಎರಡನೇ ಘಟನೆ ಇದಾಗಿದೆ.  ಈ ಹಿಂದೆ ನ್ಯೂಮೋನಿಯಾದಿಂದ ಬಳಲುತ್ತಿದ್ದ ಮೂರು ತಿಂಗಳ ಹಸುಳೆಗೆ ಚಿಕಿತ್ಸೆಯ ರೂಪದಲ್ಲಿ ಕಾದ ಕಬ್ಬಿಣದ ರಾಡ್ ನಿಂದ 51 ಬಾರಿ ಹೊಟ್ಟೆಗೆ ಚುಚ್ಚಿದ್ದ ಪರಿಣಾಮ ತೀವ್ರ ಉಸಿರಾಟದ ತೊಂದರೆಗೆ ಸಿಲುಕಿ 15 ದಿನಗಳ ಬಳಿಕ ಆಸ್ಪತ್ರೆಯಲ್ಲಿ ದುರಂತ ಅಂತ್ಯ ಕಂಡಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಶಾದೋಲ್ ನಲ್ಲಿ ನಡೆದಿತ್ತು.

ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ ಹೀಗೊಂದು ಅಮಾನವೀಯ ಘಟನೆ ನಡೆದಿದೆ. ಅವರು ಚಿಕಿತ್ಸೆಯ ಹೆಸರಲ್ಲಿ ಬಿಸಿಬಿಸಿಯಾದ ಕಬ್ಬಿಣದ ರಾಡ್​​ನಿಂದ ಮಗುವಿನ ಹೊಟ್ಟೆಯ ಮೇಲೆ 51 ಬಾರಿ ಚುಚ್ಚಿದ್ದರು. ಇದರಿಂದಾಗಿ ಶಿಶುವಿನ ಆರೋಗ್ಯ ಇನ್ನಷ್ಟು ಹದಗೆಟ್ಟು, ಮೃತಪಟ್ಟಿದ್ದಾಗಿ ವರದಿಯಾಗಿದೆ.

ಮತ್ತಷ್ಟು ಓದಿ: Metro Pillar collapsed ಮೆಟ್ರೋ ಕಂಬಿ ಕುಸಿದು ತಾಯಿ, ಮಗು ಸಾವು ಪ್ರಕರಣ: ಐವರ ವಿರುದ್ಧ ಕೇಸ್ ಬುಕ್

ಬುಡಕಟ್ಟು ಪ್ರಾಬಲ್ಯ ಹೊಂದಿರುವ ಶಾದೋಲ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮಗುವಿನ ಶವವನ್ನು ಹೂತಿದ್ದು, ಇದೀಗ ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಹೊರತೆಗೆಯಲಾಗಿದೆ ಎಂದು ವರದಿ ವಿವರಿಸಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಕುರುಡು ಮೂಢನಂಬಿಕೆಯ ಕರಾಳತೆ ಬೆಳಕಿಗೆ ಬಂದಿರುವುದಾಗಿ ತಿಳಿದು ಬಂದಿದೆ. ಮಗುವಿಗೆ ನ್ಯೂಮೋನಿಯಾಗೆ ಚಿಕಿತ್ಸೆ ನೀಡದೆ, ಕಾದ ಕಬ್ಬಿಣದ ಸರಳನ್ನು ಹೊಟ್ಟೆಗೆ ಚುಚ್ಚುವ ಮೂಲಕ ಮಗುವಿನ ಸ್ಥಿತಿ ಚಿಂತಾಜನಕವಾಗಲು ಕಾರಣವಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!