AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhya Pradesh: ಕಾಯಿಲೆ ಗುಣವಾಗಲೆಂದು ಕಾದ ಕಬ್ಬಿಣದಿಂದ 20 ಬಾರಿ ಚುಚ್ಚಿ ಹಸುಗೂಸು ಸಾವು

ಕಾಯಿಲೆಯನ್ನು ಗುಣಪಡಿಸಲೆಂದು ಕಾದ ಕಬ್ಬಿಣದಿಂದ 20 ಬಾರಿ ಚುಚ್ಚಿದ ಪರಿಣಾಮ 3 ತಿಂಗಳ ಹಸುಗೂಸು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

Madhya Pradesh: ಕಾಯಿಲೆ ಗುಣವಾಗಲೆಂದು ಕಾದ ಕಬ್ಬಿಣದಿಂದ 20 ಬಾರಿ ಚುಚ್ಚಿ ಹಸುಗೂಸು ಸಾವು
ಮಗು
ನಯನಾ ರಾಜೀವ್
|

Updated on: Feb 06, 2023 | 11:54 AM

Share

ಕಾಯಿಲೆಯನ್ನು ಗುಣಪಡಿಸಲೆಂದು ಕಾದ ಕಬ್ಬಿಣದಿಂದ 20 ಬಾರಿ ಚುಚ್ಚಿದ ಪರಿಣಾಮ 3 ತಿಂಗಳ ಹಸುಗೂಸು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಗುವನ್ನು ಸರ್ಕಾರಿ ಆಸ್ಪತ್ರೆ ದಾಖಲಿಸಲಾಯಿತು, ಬಳಿಕ ಖಾಸಗಿ ಆಸ್ಪತ್ರೆಗೆ ಮಗುವನ್ನು ದಾಖಲಿಸಲಾಗಿತ್ತು, ಆದರೂ ಮಗು ಕೊನೆಯುಸಿರೆಳೆಯಿತು. ಮಧ್ಯಪ್ರದೇಶದಲ್ಲಿ ನಡೆದ ಎರಡನೇ ಘಟನೆ ಇದಾಗಿದೆ.  ಈ ಹಿಂದೆ ನ್ಯೂಮೋನಿಯಾದಿಂದ ಬಳಲುತ್ತಿದ್ದ ಮೂರು ತಿಂಗಳ ಹಸುಳೆಗೆ ಚಿಕಿತ್ಸೆಯ ರೂಪದಲ್ಲಿ ಕಾದ ಕಬ್ಬಿಣದ ರಾಡ್ ನಿಂದ 51 ಬಾರಿ ಹೊಟ್ಟೆಗೆ ಚುಚ್ಚಿದ್ದ ಪರಿಣಾಮ ತೀವ್ರ ಉಸಿರಾಟದ ತೊಂದರೆಗೆ ಸಿಲುಕಿ 15 ದಿನಗಳ ಬಳಿಕ ಆಸ್ಪತ್ರೆಯಲ್ಲಿ ದುರಂತ ಅಂತ್ಯ ಕಂಡಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಶಾದೋಲ್ ನಲ್ಲಿ ನಡೆದಿತ್ತು.

ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ ಹೀಗೊಂದು ಅಮಾನವೀಯ ಘಟನೆ ನಡೆದಿದೆ. ಅವರು ಚಿಕಿತ್ಸೆಯ ಹೆಸರಲ್ಲಿ ಬಿಸಿಬಿಸಿಯಾದ ಕಬ್ಬಿಣದ ರಾಡ್​​ನಿಂದ ಮಗುವಿನ ಹೊಟ್ಟೆಯ ಮೇಲೆ 51 ಬಾರಿ ಚುಚ್ಚಿದ್ದರು. ಇದರಿಂದಾಗಿ ಶಿಶುವಿನ ಆರೋಗ್ಯ ಇನ್ನಷ್ಟು ಹದಗೆಟ್ಟು, ಮೃತಪಟ್ಟಿದ್ದಾಗಿ ವರದಿಯಾಗಿದೆ.

ಮತ್ತಷ್ಟು ಓದಿ: Metro Pillar collapsed ಮೆಟ್ರೋ ಕಂಬಿ ಕುಸಿದು ತಾಯಿ, ಮಗು ಸಾವು ಪ್ರಕರಣ: ಐವರ ವಿರುದ್ಧ ಕೇಸ್ ಬುಕ್

ಬುಡಕಟ್ಟು ಪ್ರಾಬಲ್ಯ ಹೊಂದಿರುವ ಶಾದೋಲ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮಗುವಿನ ಶವವನ್ನು ಹೂತಿದ್ದು, ಇದೀಗ ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಹೊರತೆಗೆಯಲಾಗಿದೆ ಎಂದು ವರದಿ ವಿವರಿಸಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಕುರುಡು ಮೂಢನಂಬಿಕೆಯ ಕರಾಳತೆ ಬೆಳಕಿಗೆ ಬಂದಿರುವುದಾಗಿ ತಿಳಿದು ಬಂದಿದೆ. ಮಗುವಿಗೆ ನ್ಯೂಮೋನಿಯಾಗೆ ಚಿಕಿತ್ಸೆ ನೀಡದೆ, ಕಾದ ಕಬ್ಬಿಣದ ಸರಳನ್ನು ಹೊಟ್ಟೆಗೆ ಚುಚ್ಚುವ ಮೂಲಕ ಮಗುವಿನ ಸ್ಥಿತಿ ಚಿಂತಾಜನಕವಾಗಲು ಕಾರಣವಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ