AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhya Pradesh: ಕಾಯಿಲೆ ಗುಣವಾಗಲೆಂದು ಕಾದ ಕಬ್ಬಿಣದಿಂದ 20 ಬಾರಿ ಚುಚ್ಚಿ ಹಸುಗೂಸು ಸಾವು

ಕಾಯಿಲೆಯನ್ನು ಗುಣಪಡಿಸಲೆಂದು ಕಾದ ಕಬ್ಬಿಣದಿಂದ 20 ಬಾರಿ ಚುಚ್ಚಿದ ಪರಿಣಾಮ 3 ತಿಂಗಳ ಹಸುಗೂಸು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

Madhya Pradesh: ಕಾಯಿಲೆ ಗುಣವಾಗಲೆಂದು ಕಾದ ಕಬ್ಬಿಣದಿಂದ 20 ಬಾರಿ ಚುಚ್ಚಿ ಹಸುಗೂಸು ಸಾವು
ಮಗು
ನಯನಾ ರಾಜೀವ್
|

Updated on: Feb 06, 2023 | 11:54 AM

Share

ಕಾಯಿಲೆಯನ್ನು ಗುಣಪಡಿಸಲೆಂದು ಕಾದ ಕಬ್ಬಿಣದಿಂದ 20 ಬಾರಿ ಚುಚ್ಚಿದ ಪರಿಣಾಮ 3 ತಿಂಗಳ ಹಸುಗೂಸು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಗುವನ್ನು ಸರ್ಕಾರಿ ಆಸ್ಪತ್ರೆ ದಾಖಲಿಸಲಾಯಿತು, ಬಳಿಕ ಖಾಸಗಿ ಆಸ್ಪತ್ರೆಗೆ ಮಗುವನ್ನು ದಾಖಲಿಸಲಾಗಿತ್ತು, ಆದರೂ ಮಗು ಕೊನೆಯುಸಿರೆಳೆಯಿತು. ಮಧ್ಯಪ್ರದೇಶದಲ್ಲಿ ನಡೆದ ಎರಡನೇ ಘಟನೆ ಇದಾಗಿದೆ.  ಈ ಹಿಂದೆ ನ್ಯೂಮೋನಿಯಾದಿಂದ ಬಳಲುತ್ತಿದ್ದ ಮೂರು ತಿಂಗಳ ಹಸುಳೆಗೆ ಚಿಕಿತ್ಸೆಯ ರೂಪದಲ್ಲಿ ಕಾದ ಕಬ್ಬಿಣದ ರಾಡ್ ನಿಂದ 51 ಬಾರಿ ಹೊಟ್ಟೆಗೆ ಚುಚ್ಚಿದ್ದ ಪರಿಣಾಮ ತೀವ್ರ ಉಸಿರಾಟದ ತೊಂದರೆಗೆ ಸಿಲುಕಿ 15 ದಿನಗಳ ಬಳಿಕ ಆಸ್ಪತ್ರೆಯಲ್ಲಿ ದುರಂತ ಅಂತ್ಯ ಕಂಡಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಶಾದೋಲ್ ನಲ್ಲಿ ನಡೆದಿತ್ತು.

ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ ಹೀಗೊಂದು ಅಮಾನವೀಯ ಘಟನೆ ನಡೆದಿದೆ. ಅವರು ಚಿಕಿತ್ಸೆಯ ಹೆಸರಲ್ಲಿ ಬಿಸಿಬಿಸಿಯಾದ ಕಬ್ಬಿಣದ ರಾಡ್​​ನಿಂದ ಮಗುವಿನ ಹೊಟ್ಟೆಯ ಮೇಲೆ 51 ಬಾರಿ ಚುಚ್ಚಿದ್ದರು. ಇದರಿಂದಾಗಿ ಶಿಶುವಿನ ಆರೋಗ್ಯ ಇನ್ನಷ್ಟು ಹದಗೆಟ್ಟು, ಮೃತಪಟ್ಟಿದ್ದಾಗಿ ವರದಿಯಾಗಿದೆ.

ಮತ್ತಷ್ಟು ಓದಿ: Metro Pillar collapsed ಮೆಟ್ರೋ ಕಂಬಿ ಕುಸಿದು ತಾಯಿ, ಮಗು ಸಾವು ಪ್ರಕರಣ: ಐವರ ವಿರುದ್ಧ ಕೇಸ್ ಬುಕ್

ಬುಡಕಟ್ಟು ಪ್ರಾಬಲ್ಯ ಹೊಂದಿರುವ ಶಾದೋಲ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮಗುವಿನ ಶವವನ್ನು ಹೂತಿದ್ದು, ಇದೀಗ ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಹೊರತೆಗೆಯಲಾಗಿದೆ ಎಂದು ವರದಿ ವಿವರಿಸಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಕುರುಡು ಮೂಢನಂಬಿಕೆಯ ಕರಾಳತೆ ಬೆಳಕಿಗೆ ಬಂದಿರುವುದಾಗಿ ತಿಳಿದು ಬಂದಿದೆ. ಮಗುವಿಗೆ ನ್ಯೂಮೋನಿಯಾಗೆ ಚಿಕಿತ್ಸೆ ನೀಡದೆ, ಕಾದ ಕಬ್ಬಿಣದ ಸರಳನ್ನು ಹೊಟ್ಟೆಗೆ ಚುಚ್ಚುವ ಮೂಲಕ ಮಗುವಿನ ಸ್ಥಿತಿ ಚಿಂತಾಜನಕವಾಗಲು ಕಾರಣವಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ