AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೃಹತ್​ ಭ್ರಷ್ಟಾಚಾರ: ಇಬ್ಬರು IPS ಅಧಿಕಾರಿಗಳ ತಲೆದಂಡ, ಎಲ್ಲಿ?

ಲಕ್ನೋ: ಬೃಹತ್​ ಭ್ರಷ್ಟಾಚಾರ ನಡೆಸಿರೋ ಆರೋಪದಲ್ಲಿ ಉತ್ತರ ಪ್ರದೇಶ ಸರ್ಕಾರವು ಇಬ್ಬರು IPS ಅಧಿಕಾರಿಗಳನ್ನು ಅಮಾನತು ಮಾಡಿದೆ. DIG ದಿನೇಶ್​ ಚಂದ್ರ ದುಬೇ ಮತ್ತು DIG ಅರವಿಂದ್​ ಸೇನ್ ಅಮಾನತುಗೊಂಡಿರುವ IPS ಅಧಿಕಾರಿಗಳು. ಉತ್ತರ ಪ್ರದೇಶ ಸರ್ಕಾರ ನೇಮಿಸಿದ್ದ ವಿಶೇಷ ತನಿಖಾ ತಂಡವು ನೀಡಿರುವ ವರದಿಯ ಬೆನ್ನಲ್ಲೇ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಗೃಹ ಇಲಾಖೆ ನೀಡಿರುವ ಮಾಹಿತಿ ಪ್ರಕಾರ DIG ದಿನೇಶ್​ ಚಂದ್ರ ದುಬೇ ತಮ್ಮ ಪ್ರಭಾವ ಬಳಸಿ ಸರ್ಕಾರಿ ಇಲಾಖೆಗಳಲ್ಲಿ ಕಾಮಗಾರಿಯ ಟೆಂಡರ್​ಗಳನ್ನು ಕೊಡಿಸುವ ಆಶ್ವಾಸನೆ […]

ಬೃಹತ್​ ಭ್ರಷ್ಟಾಚಾರ: ಇಬ್ಬರು IPS ಅಧಿಕಾರಿಗಳ ತಲೆದಂಡ, ಎಲ್ಲಿ?
KUSHAL V
| Edited By: ಸಾಧು ಶ್ರೀನಾಥ್​|

Updated on:Aug 25, 2020 | 5:03 PM

Share

ಲಕ್ನೋ: ಬೃಹತ್​ ಭ್ರಷ್ಟಾಚಾರ ನಡೆಸಿರೋ ಆರೋಪದಲ್ಲಿ ಉತ್ತರ ಪ್ರದೇಶ ಸರ್ಕಾರವು ಇಬ್ಬರು IPS ಅಧಿಕಾರಿಗಳನ್ನು ಅಮಾನತು ಮಾಡಿದೆ. DIG ದಿನೇಶ್​ ಚಂದ್ರ ದುಬೇ ಮತ್ತು DIG ಅರವಿಂದ್​ ಸೇನ್ ಅಮಾನತುಗೊಂಡಿರುವ IPS ಅಧಿಕಾರಿಗಳು. ಉತ್ತರ ಪ್ರದೇಶ ಸರ್ಕಾರ ನೇಮಿಸಿದ್ದ ವಿಶೇಷ ತನಿಖಾ ತಂಡವು ನೀಡಿರುವ ವರದಿಯ ಬೆನ್ನಲ್ಲೇ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಗೃಹ ಇಲಾಖೆ ನೀಡಿರುವ ಮಾಹಿತಿ ಪ್ರಕಾರ DIG ದಿನೇಶ್​ ಚಂದ್ರ ದುಬೇ ತಮ್ಮ ಪ್ರಭಾವ ಬಳಸಿ ಸರ್ಕಾರಿ ಇಲಾಖೆಗಳಲ್ಲಿ ಕಾಮಗಾರಿಯ ಟೆಂಡರ್​ಗಳನ್ನು ಕೊಡಿಸುವ ಆಶ್ವಾಸನೆ ನೀಡಿದ್ದರಂತೆ. ಆದರೆ, ಇವರು ಹಣ ಪಡೆದ ಯಾವುದೇ ವ್ಯಕ್ತಿಗೂ ಗುತ್ತಿಗೆ ಸಿಗಲೇ ಇಲ್ಲ ಎಂಬ ಆರೋಪ ಕೇಳಿಬಂದಿದೆ.

ಇತ್ತ DIG ಅರವಿಂದ್​ ಸೇನ್ ರಾಜ್ಯ ಸರ್ಕಾರದ ಪಶು ಸಂಗೋಪನೆ ಇಲಾಖೆಯಲ್ಲಿ ತಮ್ಮ ಪ್ರಭಾವ ಬಳಸಿ ಉದ್ಯಮಿಯೊಬ್ಬರಿಗೆ ಟೆಂಡರ್​ ಕೊಡಿಸುವುದಾಗಿ ಮೋಸ ಮಾಡಿದ್ದ ತಂಡವೊಂದರ ಜೊತೆ ಶಾಮೀಲಾಗಿದ್ದರಂತೆ.

ಈ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿ ತನಿಖೆ ನಡೆಸಲಾಗಿತ್ತು. ಇದೀಗ, ತನಿಖಾ ವರದಿ ಹೊರಬಿದ್ದಿದ್ದು ಅಧಿಕಾರಿಗಳಿಬ್ಬರೂ ಭ್ರಷ್ಟಾಚಾರ ಮತ್ತು ದುರ್ನಡತೆಯ ಆರೋಪದಡಿ ಸಸ್ಪೆಂಡ್​ ಆಗಿದ್ದಾರೆ.

Published On - 4:59 pm, Tue, 25 August 20

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು