AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೃಹತ್​ ಭ್ರಷ್ಟಾಚಾರ: ಇಬ್ಬರು IPS ಅಧಿಕಾರಿಗಳ ತಲೆದಂಡ, ಎಲ್ಲಿ?

ಲಕ್ನೋ: ಬೃಹತ್​ ಭ್ರಷ್ಟಾಚಾರ ನಡೆಸಿರೋ ಆರೋಪದಲ್ಲಿ ಉತ್ತರ ಪ್ರದೇಶ ಸರ್ಕಾರವು ಇಬ್ಬರು IPS ಅಧಿಕಾರಿಗಳನ್ನು ಅಮಾನತು ಮಾಡಿದೆ. DIG ದಿನೇಶ್​ ಚಂದ್ರ ದುಬೇ ಮತ್ತು DIG ಅರವಿಂದ್​ ಸೇನ್ ಅಮಾನತುಗೊಂಡಿರುವ IPS ಅಧಿಕಾರಿಗಳು. ಉತ್ತರ ಪ್ರದೇಶ ಸರ್ಕಾರ ನೇಮಿಸಿದ್ದ ವಿಶೇಷ ತನಿಖಾ ತಂಡವು ನೀಡಿರುವ ವರದಿಯ ಬೆನ್ನಲ್ಲೇ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಗೃಹ ಇಲಾಖೆ ನೀಡಿರುವ ಮಾಹಿತಿ ಪ್ರಕಾರ DIG ದಿನೇಶ್​ ಚಂದ್ರ ದುಬೇ ತಮ್ಮ ಪ್ರಭಾವ ಬಳಸಿ ಸರ್ಕಾರಿ ಇಲಾಖೆಗಳಲ್ಲಿ ಕಾಮಗಾರಿಯ ಟೆಂಡರ್​ಗಳನ್ನು ಕೊಡಿಸುವ ಆಶ್ವಾಸನೆ […]

ಬೃಹತ್​ ಭ್ರಷ್ಟಾಚಾರ: ಇಬ್ಬರು IPS ಅಧಿಕಾರಿಗಳ ತಲೆದಂಡ, ಎಲ್ಲಿ?
KUSHAL V
| Edited By: ಸಾಧು ಶ್ರೀನಾಥ್​|

Updated on:Aug 25, 2020 | 5:03 PM

Share

ಲಕ್ನೋ: ಬೃಹತ್​ ಭ್ರಷ್ಟಾಚಾರ ನಡೆಸಿರೋ ಆರೋಪದಲ್ಲಿ ಉತ್ತರ ಪ್ರದೇಶ ಸರ್ಕಾರವು ಇಬ್ಬರು IPS ಅಧಿಕಾರಿಗಳನ್ನು ಅಮಾನತು ಮಾಡಿದೆ. DIG ದಿನೇಶ್​ ಚಂದ್ರ ದುಬೇ ಮತ್ತು DIG ಅರವಿಂದ್​ ಸೇನ್ ಅಮಾನತುಗೊಂಡಿರುವ IPS ಅಧಿಕಾರಿಗಳು. ಉತ್ತರ ಪ್ರದೇಶ ಸರ್ಕಾರ ನೇಮಿಸಿದ್ದ ವಿಶೇಷ ತನಿಖಾ ತಂಡವು ನೀಡಿರುವ ವರದಿಯ ಬೆನ್ನಲ್ಲೇ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಗೃಹ ಇಲಾಖೆ ನೀಡಿರುವ ಮಾಹಿತಿ ಪ್ರಕಾರ DIG ದಿನೇಶ್​ ಚಂದ್ರ ದುಬೇ ತಮ್ಮ ಪ್ರಭಾವ ಬಳಸಿ ಸರ್ಕಾರಿ ಇಲಾಖೆಗಳಲ್ಲಿ ಕಾಮಗಾರಿಯ ಟೆಂಡರ್​ಗಳನ್ನು ಕೊಡಿಸುವ ಆಶ್ವಾಸನೆ ನೀಡಿದ್ದರಂತೆ. ಆದರೆ, ಇವರು ಹಣ ಪಡೆದ ಯಾವುದೇ ವ್ಯಕ್ತಿಗೂ ಗುತ್ತಿಗೆ ಸಿಗಲೇ ಇಲ್ಲ ಎಂಬ ಆರೋಪ ಕೇಳಿಬಂದಿದೆ.

ಇತ್ತ DIG ಅರವಿಂದ್​ ಸೇನ್ ರಾಜ್ಯ ಸರ್ಕಾರದ ಪಶು ಸಂಗೋಪನೆ ಇಲಾಖೆಯಲ್ಲಿ ತಮ್ಮ ಪ್ರಭಾವ ಬಳಸಿ ಉದ್ಯಮಿಯೊಬ್ಬರಿಗೆ ಟೆಂಡರ್​ ಕೊಡಿಸುವುದಾಗಿ ಮೋಸ ಮಾಡಿದ್ದ ತಂಡವೊಂದರ ಜೊತೆ ಶಾಮೀಲಾಗಿದ್ದರಂತೆ.

ಈ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿ ತನಿಖೆ ನಡೆಸಲಾಗಿತ್ತು. ಇದೀಗ, ತನಿಖಾ ವರದಿ ಹೊರಬಿದ್ದಿದ್ದು ಅಧಿಕಾರಿಗಳಿಬ್ಬರೂ ಭ್ರಷ್ಟಾಚಾರ ಮತ್ತು ದುರ್ನಡತೆಯ ಆರೋಪದಡಿ ಸಸ್ಪೆಂಡ್​ ಆಗಿದ್ದಾರೆ.

Published On - 4:59 pm, Tue, 25 August 20

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!