AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೃಹತ್​ ಭ್ರಷ್ಟಾಚಾರ: ಇಬ್ಬರು IPS ಅಧಿಕಾರಿಗಳ ತಲೆದಂಡ, ಎಲ್ಲಿ?

ಲಕ್ನೋ: ಬೃಹತ್​ ಭ್ರಷ್ಟಾಚಾರ ನಡೆಸಿರೋ ಆರೋಪದಲ್ಲಿ ಉತ್ತರ ಪ್ರದೇಶ ಸರ್ಕಾರವು ಇಬ್ಬರು IPS ಅಧಿಕಾರಿಗಳನ್ನು ಅಮಾನತು ಮಾಡಿದೆ. DIG ದಿನೇಶ್​ ಚಂದ್ರ ದುಬೇ ಮತ್ತು DIG ಅರವಿಂದ್​ ಸೇನ್ ಅಮಾನತುಗೊಂಡಿರುವ IPS ಅಧಿಕಾರಿಗಳು. ಉತ್ತರ ಪ್ರದೇಶ ಸರ್ಕಾರ ನೇಮಿಸಿದ್ದ ವಿಶೇಷ ತನಿಖಾ ತಂಡವು ನೀಡಿರುವ ವರದಿಯ ಬೆನ್ನಲ್ಲೇ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಗೃಹ ಇಲಾಖೆ ನೀಡಿರುವ ಮಾಹಿತಿ ಪ್ರಕಾರ DIG ದಿನೇಶ್​ ಚಂದ್ರ ದುಬೇ ತಮ್ಮ ಪ್ರಭಾವ ಬಳಸಿ ಸರ್ಕಾರಿ ಇಲಾಖೆಗಳಲ್ಲಿ ಕಾಮಗಾರಿಯ ಟೆಂಡರ್​ಗಳನ್ನು ಕೊಡಿಸುವ ಆಶ್ವಾಸನೆ […]

ಬೃಹತ್​ ಭ್ರಷ್ಟಾಚಾರ: ಇಬ್ಬರು IPS ಅಧಿಕಾರಿಗಳ ತಲೆದಂಡ, ಎಲ್ಲಿ?
KUSHAL V
| Edited By: |

Updated on:Aug 25, 2020 | 5:03 PM

Share

ಲಕ್ನೋ: ಬೃಹತ್​ ಭ್ರಷ್ಟಾಚಾರ ನಡೆಸಿರೋ ಆರೋಪದಲ್ಲಿ ಉತ್ತರ ಪ್ರದೇಶ ಸರ್ಕಾರವು ಇಬ್ಬರು IPS ಅಧಿಕಾರಿಗಳನ್ನು ಅಮಾನತು ಮಾಡಿದೆ. DIG ದಿನೇಶ್​ ಚಂದ್ರ ದುಬೇ ಮತ್ತು DIG ಅರವಿಂದ್​ ಸೇನ್ ಅಮಾನತುಗೊಂಡಿರುವ IPS ಅಧಿಕಾರಿಗಳು. ಉತ್ತರ ಪ್ರದೇಶ ಸರ್ಕಾರ ನೇಮಿಸಿದ್ದ ವಿಶೇಷ ತನಿಖಾ ತಂಡವು ನೀಡಿರುವ ವರದಿಯ ಬೆನ್ನಲ್ಲೇ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಗೃಹ ಇಲಾಖೆ ನೀಡಿರುವ ಮಾಹಿತಿ ಪ್ರಕಾರ DIG ದಿನೇಶ್​ ಚಂದ್ರ ದುಬೇ ತಮ್ಮ ಪ್ರಭಾವ ಬಳಸಿ ಸರ್ಕಾರಿ ಇಲಾಖೆಗಳಲ್ಲಿ ಕಾಮಗಾರಿಯ ಟೆಂಡರ್​ಗಳನ್ನು ಕೊಡಿಸುವ ಆಶ್ವಾಸನೆ ನೀಡಿದ್ದರಂತೆ. ಆದರೆ, ಇವರು ಹಣ ಪಡೆದ ಯಾವುದೇ ವ್ಯಕ್ತಿಗೂ ಗುತ್ತಿಗೆ ಸಿಗಲೇ ಇಲ್ಲ ಎಂಬ ಆರೋಪ ಕೇಳಿಬಂದಿದೆ.

ಇತ್ತ DIG ಅರವಿಂದ್​ ಸೇನ್ ರಾಜ್ಯ ಸರ್ಕಾರದ ಪಶು ಸಂಗೋಪನೆ ಇಲಾಖೆಯಲ್ಲಿ ತಮ್ಮ ಪ್ರಭಾವ ಬಳಸಿ ಉದ್ಯಮಿಯೊಬ್ಬರಿಗೆ ಟೆಂಡರ್​ ಕೊಡಿಸುವುದಾಗಿ ಮೋಸ ಮಾಡಿದ್ದ ತಂಡವೊಂದರ ಜೊತೆ ಶಾಮೀಲಾಗಿದ್ದರಂತೆ.

ಈ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿ ತನಿಖೆ ನಡೆಸಲಾಗಿತ್ತು. ಇದೀಗ, ತನಿಖಾ ವರದಿ ಹೊರಬಿದ್ದಿದ್ದು ಅಧಿಕಾರಿಗಳಿಬ್ಬರೂ ಭ್ರಷ್ಟಾಚಾರ ಮತ್ತು ದುರ್ನಡತೆಯ ಆರೋಪದಡಿ ಸಸ್ಪೆಂಡ್​ ಆಗಿದ್ದಾರೆ.

Published On - 4:59 pm, Tue, 25 August 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ