AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನ: ಟ್ರಕ್​ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು, 7 ಮಂದಿ ಸಜೀವ ದಹನ

ಟ್ರಕ್​ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಡಲೇ ಬೆಂಕಿ ಕಾಣಿಸಿಕೊಂಡು ಕಾರಿನಲ್ಲಿದ್ದ 7 ಮಂದಿ ಸಜೀವದಹನವಾಗಿರುವ ಘಟನೆ ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ನಡೆದಿದೆ. ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಮಕ್ಕಳು ಮತ್ತು ಮೂವರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಏಳು ಜನರು ಸಜೀವ ದಹನವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಸ್ಥಾನ: ಟ್ರಕ್​ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು, 7 ಮಂದಿ ಸಜೀವ ದಹನ
ಕಾರು ಬೆಂಕಿImage Credit source: India TV
ನಯನಾ ರಾಜೀವ್
|

Updated on: Apr 15, 2024 | 9:48 AM

Share

ಟ್ರಕ್​ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಡಲೇ ಬೆಂಕಿ ಕಾಣಿಸಿಕೊಂಡು ಕಾರಿನಲ್ಲಿದ್ದ 7 ಮಂದಿ ಸಜೀವದಹನವಾಗಿರುವ ಘಟನೆ ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ನಡೆದಿದೆ. ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಮಕ್ಕಳು ಮತ್ತು ಮೂವರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಏಳು ಜನರು ಸಜೀವ ದಹನವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರು ಪ್ರಯಾಣಿಕರು, ಉತ್ತರ ಪ್ರದೇಶದ ಮೀರತ್ ನಿವಾಸಿಗಳಾಗಿದ್ದು, ರಾಜಸ್ಥಾನದ ಸಲಾಸರ್‌ನಲ್ಲಿರುವ ಸಲಾಸರ್ ಬಾಲಾಜಿ ದೇವಸ್ಥಾನದಿಂದ ಹಿಂತಿರುಗುತ್ತಿದ್ದರು. ಚುರು ಕಡೆಗೆ ಹೋಗುತ್ತಿದ್ದ ಕಾರು ಚಾಲಕ ಟ್ರಕ್ ಅನ್ನು ಹಿಂದಿಕ್ಕಲು ಯತ್ನಿಸಿದಾಗ ಈ ಘಟನೆ ಸಂಭವಿಸಿದೆ. ಎದುರಿನಿಂದ ಇನ್ನೊಂದು ವಾಹನ ಬಂದಾಗ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಪ್ರಯತ್ನದಲ್ಲಿ ನಿಯಂತ್ರಣ ತಪ್ಪಿ ಟ್ರಕ್‌ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಎಲ್‌ಪಿಜಿ ಕಿಟ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಟ್ರಕ್‌ನಲ್ಲಿ ತುಂಬಿದ್ದ ಹತ್ತಿ ಬೆಂಕಿಯನ್ನು ಮತ್ತಷ್ಟು ಹೆಚ್ಚಿಸಿತ್ತು. ಅಲ್ಲಿದ್ದವರು ಹರಸಾಹಸ ಮಾಡಿದರೂ ಬೆಂಕಿಯ ರಭಸಕ್ಕೆ ಕಾರು ಪ್ರಯಾಣಿಕರು ಬೀಗ ಹಾಕಿದ್ದ ಬಾಗಿಲು ತೆರೆಯಲು ಸಾಧ್ಯವಾಗದೆ ಸಜೀವ ದಹನವಾಗಿದ್ದಾರೆ.

ಅಪಘಾತದ ಪ್ರತ್ಯಕ್ಷದರ್ಶಿ ರಾಮ್ನಿವಾಸ್ ಸೈನಿ, ಪ್ರಯಾಣಿಕರು ಸಹಾಯಕ್ಕಾಗಿ ಕಿರುಚುತ್ತಿದ್ದರು ಆದರೆ ಬೆಂಕಿಯಿಂದಾಗಿ ಅವರಿಗೆ ಸಹಾಯ ಮಾಡಲು ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಓದಿ: ಯುಗಾದಿ ಅಮಾವಾಸ್ಯೆಯಂದೇ ಹಲವೆಡೆ ಅಗ್ನಿ ಅವಘಡ: ಹೊತ್ತಿ ಉರಿದ ಕಾರು

ಅಗ್ನಿಶಾಮಕ ದಳದ ವಾಹನಗಳನ್ನು ನಿಯೋಜಿಸಲಾಗಿತ್ತು, ಆದರೆ ಬೆಂಕಿಯನ್ನು ನಿಯಂತ್ರಣಕ್ಕೆ ತರುವಷ್ಟರಲ್ಲಿ ಕಾರಿನಲ್ಲಿದ್ದವರು ಸಾವನ್ನಪ್ಪಿದ್ದಾರೆ.

ಮೃತರನ್ನು ನೀಲಂ ಗೋಯಲ್ (55), ಅವರ ಮಗ ಅಶುತೋಷ್ ಗೋಯಲ್ (35), ಮಂಜು ಬಿಂದಾಲ್ (58), ಅವರ ಮಗ ಹಾರ್ದಿಕ್ ಬಿಂದಾಲ್ (37), ಅವರ ಪತ್ನಿ ಸ್ವಾತಿ ಬಿಂದಾಲ್ (32) ಮತ್ತು ಅವರ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳು ಎಂದು ಗುರುತಿಸಲಾಗಿದೆ.

ಕಾರಿನ ಮಾಲೀಕ ಅಶುತೋಷ್ ಒಂದೂವರೆ ವರ್ಷದ ಹಿಂದೆ ಕಾರನ್ನು ಮಾರಾಟ ಮಾಡಿದ್ದರು. ಪೊಲೀಸರು ಕಾರನ್ನು ಮಾರಾಟ ಮಾಡಿದ ಏಜೆಂಟ್ ಅನ್ನು ಸಂಪರ್ಕಿಸಿದರು ಮತ್ತು ಅವರ ಮೂಲಕ ಕುಟುಂಬವನ್ನು ಗುರುತಿಸಲು ಸಾಧ್ಯವಾಯಿತು ಎಂದು ಪೊಲೀಸರು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!