AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್‌ಗಢದ ಮೇಲ್ಸೇತುವೆಯಿಂದ ಬಸ್ ಉರುಳಿ ಬಿದ್ದು ಇಬ್ಬರು ಸಾವು, 40 ಮಂದಿಗೆ ಗಾಯ

ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಖಾಸಗಿ ಬಸ್‌ನೊಂದು ಫ್ಲೈಓವರ್‌ನಿಂದ ಬಿದ್ದು ಇಬ್ಬರು ಸಾವನ್ನಪ್ಪಿದ್ದು, 40 ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಈ ಬಸ್​​ ಶಿವಪುರಿ ಜಿಲ್ಲೆಯ ಪಿಚೋರ್ ಪಟ್ಟಣಕ್ಕೆ ತೆರಳುತ್ತಿದ್ದಾಗ ವೇಳೆ ಚಾಲಕನ ನಿಯಂತ್ರಣ ತಪ್ಪಿ ಫ್ಲೈಓವರ್‌ನಿಂದ ಕೆಳಗೆ ಬಿದ್ದಿದೆ.

ರಾಜ್‌ಗಢದ ಮೇಲ್ಸೇತುವೆಯಿಂದ ಬಸ್ ಉರುಳಿ ಬಿದ್ದು ಇಬ್ಬರು ಸಾವು, 40 ಮಂದಿಗೆ ಗಾಯ
ಅಕ್ಷಯ್​ ಪಲ್ಲಮಜಲು​​
|

Updated on: May 21, 2024 | 4:06 PM

Share

ರಾಜ್‌ಗಢ ಮೇ.21: ಇಂದು ಬೆಳಿಗ್ಗೆ ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯಲ್ಲಿ ಖಾಸಗಿ ಬಸ್‌ನೊಂದು ಫ್ಲೈಓವರ್‌ನಿಂದ ಬಿದ್ದು ಇಬ್ಬರು ಸಾವನ್ನಪ್ಪಿದ್ದು, 40 ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಬಸ್ ಶಿವಪುರಿ ಜಿಲ್ಲೆಯ ಪಿಚೋರ್ ಪಟ್ಟಣಕ್ಕೆ ತೆರಳುತ್ತಿದ್ದಾಗ ಮಧ್ಯರಾತ್ರಿ 1.30 ರ ಸುಮಾರಿಗೆ ಪಚೋರ್ ಪಟ್ಟಣದ ಬಳಿ ಚಾಲಕನ ನಿಯಂತ್ರಣ ತಪ್ಪಿ ಫ್ಲೈಓವರ್‌ನಿಂದ ಕೆಳಗೆ ಬಿದ್ದಿದೆ ಎಂದು ಪಚೋರ್ ಪೊಲೀಸ್ ಠಾಣೆಯ ಉಸ್ತುವಾರಿ ಆಕಾಂಶಾ ಶರ್ಮಾ ಹೇಳಿದ್ದಾರೆ.

ಮೃತರಲ್ಲಿ ಒಬ್ಬನನ್ನು ಹರ್ಜತ್ ಸಿಂಗ್ (28) ಎಂದು ಗುರುತಿಸಲಾಗಿದೆ. ಇನ್ನೊಬ್ಬನ್ನು ಇನ್ನು ಪತ್ತೆ ಮಾಡಿಲ್ಲ ಎಂದು ಹೇಳಲಾಗಿದೆ. ಗಾಯಗೊಂಡವರಲ್ಲಿ 19 ಜನರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಇಂದೋರ್‌ನ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಉಳಿದವರು ಶಾಜಾಪುರ, ಬಯೋರಾ ಮತ್ತು ಪಚೋರ್‌ನ ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್​​​ ಅಧಿಕಾರಿಗಳು ಹೇಳಿದ್ದಾರೆ.

ಇನ್ನು ಈ ಘಟನೆ ನಡೆದ ಸಮಯದಲ್ಲಿ ಚಾಲಕ ಮತ್ತು ಕಂಡಕ್ಟರ್‌ ಸ್ಥಳದಿಂದ ಪರಾರಿಯಾಗಿದ್ದಾರೆ. ಅವರನ್ನು ಪತ್ತೆ ಮಾಡಲು ಶೋಧ ಕಾರ್ಯ ನಡೆಯುತ್ತಿದೆ ಎಂದು ಹೇಳಲಾಗಿದೆ. ಇಬ್ಬರ ವಿರುದ್ಧವು ದೂರ ದಾಖಲಿಸಲಾಗಿದೆ.

ಇದನ್ನೂ ಓದಿ: ಅಪ್ರಾಪ್ತ ಚಾಲಕನಿಂದ ಪ್ರಮಾದ, ಕಾರು ಅಪಘಾತ, ಇಬ್ಬರು ಸಾವು, ಬಾಲಕನ ತಂದೆಯ ಬಂಧನ

ಇನ್ನು ಇಂತಹದೇ ಘಟನೆಯೊಂದು ಮಧ್ಯಪ್ರದೇಶದ ಸಿಯೋನಿಯಲ್ಲಿ ಭದ್ರತಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ ಕಾರಿಗೆ ಡಿಕ್ಕಿ ಹೊಡೆದು 26 ವಿಶೇಷ ಸಶಸ್ತ್ರ ಪಡೆ (ಎಸ್‌ಎಎಫ್) ಸಿಬ್ಬಂದಿ ಸೇರಿದಂತೆ 28 ಮಂದಿ ಗಾಯಗೊಂಡಿದ್ದು, ಮೂರು ಜನ ಸಾವನ್ನಪ್ಪಿದರು. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಸಿಯೋನಿ ಮಂಡ್ಲಾ ರಾಜ್ಯ ಹೆದ್ದಾರಿಯ ಕಿಯೋಲಾರಿಯ ಧನಗಡ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. 31 ಯೋಧರಿದ್ದ ಬಸ್ ಮಾಂಡ್ಲಾ ಬೆಟಾಲಿಯನ್ ಕ್ಯಾಂಪ್‌ನಿಂದ ಪಾಂಡುರ್ನಾ (ಚಿಂದ್ವಾರ)ಕ್ಕೆ ಹೋಗುತ್ತಿತ್ತು ಎಂದು ಪೊಲೀಸರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ