AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಪಿಯಾನ್​​ನಲ್ಲಿ ಇಬ್ಬರು ಎಲ್​ಇಟಿ ಉಗ್ರರ ಬಂಧನ; ಅವರ ಬಳಿಯಿದ್ದ ಚೈನೀಸ್​ ಪಿಸ್ತೂಲ್, ಗ್ರೆನೇಡ್​ ವಶ​

ಭದ್ರತಾ ಪಡೆಗಳು ತಮ್ಮನ್ನು ಸುತ್ತುವರಿದಿದ್ದಾರೆ ಎಂದು ತಿಳಿಯುತ್ತಿದ್ದಂತೆ ಉಗ್ರರು ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು. ಆದರೆ ರಕ್ಷಣಾ ಪಡೆಗಳು ಅದಕ್ಕೆ ಅವಕಾಶ ಕೊಡದೆ ಸೆರೆಹಿಡಿದಿದ್ದಾರೆ.

ಶೋಪಿಯಾನ್​​ನಲ್ಲಿ ಇಬ್ಬರು ಎಲ್​ಇಟಿ ಉಗ್ರರ ಬಂಧನ; ಅವರ ಬಳಿಯಿದ್ದ ಚೈನೀಸ್​ ಪಿಸ್ತೂಲ್, ಗ್ರೆನೇಡ್​ ವಶ​
ಸಾಂಕೇತಿಕ ಚಿತ್ರ
TV9 Web
| Edited By: |

Updated on: Dec 06, 2021 | 9:43 AM

Share

ಜಮ್ಮು-ಕಾಶ್ಮೀರದ ಶೋಪಿಯಾನ್​​ ಜಿಲ್ಲೆಯಲ್ಲಿ ಲಷ್ಕರ್​ ಇ ತೊಯ್ಬಾ (LeT)ಸಂಘಟನೆಯ ಇಬ್ಬರು ಉಗ್ರರನ್ನು ಭದ್ರತಾ ಪಡೆ ಸಿಬ್ಬಂದಿ ಬಂಧಿಸಿದ್ದಾರೆ. ಶೋಪಿಯಾನಾದ ರಂಬಿ ಅರಾ ಸಮೀಪದ ದೂಮ್​ವಾನಿ ಗ್ರಾಮದಲ್ಲಿ ಲಷ್ಕರ್​ ಇ ತೊಯ್ಬಾದ ಉಗ್ರ ಶಾಹೀದ್ ಅಹ್ಮದ್ ಗಯೆ ಮತ್ತು ಆತನ ಆಪ್ತ  ಅಡಗಿದ್ದಾರೆ ಎಂದು ಖಚಿತ ಮಾಹಿತಿ ಪಡೆದು ಭದ್ರತಾ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು ಎಂದು ಸೇನಾ ವಕ್ತಾರರೊಬ್ಬರು ತಿಳಿಸಿದ್ದಾರೆ.

ಭದ್ರತಾ ಪಡೆಗಳು ತಮ್ಮನ್ನು ಸುತ್ತುವರಿದಿದ್ದಾರೆ ಎಂದು ತಿಳಿಯುತ್ತಿದ್ದಂತೆ ಉಗ್ರರು ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು. ಆದರೆ ರಕ್ಷಣಾ ಪಡೆಗಳು ಅದಕ್ಕೆ ಅವಕಾಶ ಕೊಡದೆ ಸೆರೆಹಿಡಿದಿದ್ದಾರೆ ಎಂದು  ಹೇಳಿದ್ದಾರೆ. ಬಂಧಿತರಲ್ಲಿ ಶಾಹಿದ್ ಅಹ್ಮದ್ ಗಯೆ ದೂಮ್​ವಾನಿ ಕೀಗಮ್​ ನಿವಾಸಿಯಾಗಿದ್ದು, ಇನ್ನೊಬ್ಬಾತ ಕಿಫಾಯತ್​ ಅಯೋಬ್​ ಅಲಿ ಎಂಬುವನು ಪಿಂಜೀರಾ ಶೋಪಿಯಾನ್​ದ ನಿವಾಸಿಯಾಗಿದ್ದಾನೆ.  ಬಂಧಿತ ಭಯೋತ್ಪಾದಕರಿಂದ ಚೈನೀಸ್​ ಪಿಸ್ತೂಲ್​​, ಒಂದು ಪಿಸ್ತೂಲ್​ ಮ್ಯಾಗಜಿನ್​, ಎರಡು ಚೈನೀಸ್​ ಗ್ರೆನೇಡ್​​ ಸೇರಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ. ಹಾಗೇ, 2.9 ಲಕ್ಷ ರೂಪಾಯಿ ನಗದು ಕೂಡ ಸಿಕ್ಕಿದೆ ಎಂದು ವಕ್ತಾರ ಮಾಹಿತಿ ನೀಡಿದ್ದಾರೆ. ಇಬ್ಬರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಶುರುವಾಗಿದೆ.

ಇದನ್ನೂ ಓದಿ: ಮಳೆರಾಯನ ಆರ್ಭಟ; ಅಪಾಯದ ಸುಳಿಯಲ್ಲಿ ಸುವರ್ಣ ಮುಖಿ ನದಿ ಸೇತುವೆ, ಆತಂಕದಲ್ಲಿ ಸ್ಥಳೀಯ ರೈತರು

Follow Us
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್