AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಪಿಯಾನ್​​ನಲ್ಲಿ ಇಬ್ಬರು ಎಲ್​ಇಟಿ ಉಗ್ರರ ಬಂಧನ; ಅವರ ಬಳಿಯಿದ್ದ ಚೈನೀಸ್​ ಪಿಸ್ತೂಲ್, ಗ್ರೆನೇಡ್​ ವಶ​

ಭದ್ರತಾ ಪಡೆಗಳು ತಮ್ಮನ್ನು ಸುತ್ತುವರಿದಿದ್ದಾರೆ ಎಂದು ತಿಳಿಯುತ್ತಿದ್ದಂತೆ ಉಗ್ರರು ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು. ಆದರೆ ರಕ್ಷಣಾ ಪಡೆಗಳು ಅದಕ್ಕೆ ಅವಕಾಶ ಕೊಡದೆ ಸೆರೆಹಿಡಿದಿದ್ದಾರೆ.

ಶೋಪಿಯಾನ್​​ನಲ್ಲಿ ಇಬ್ಬರು ಎಲ್​ಇಟಿ ಉಗ್ರರ ಬಂಧನ; ಅವರ ಬಳಿಯಿದ್ದ ಚೈನೀಸ್​ ಪಿಸ್ತೂಲ್, ಗ್ರೆನೇಡ್​ ವಶ​
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on: Dec 06, 2021 | 9:43 AM

Share

ಜಮ್ಮು-ಕಾಶ್ಮೀರದ ಶೋಪಿಯಾನ್​​ ಜಿಲ್ಲೆಯಲ್ಲಿ ಲಷ್ಕರ್​ ಇ ತೊಯ್ಬಾ (LeT)ಸಂಘಟನೆಯ ಇಬ್ಬರು ಉಗ್ರರನ್ನು ಭದ್ರತಾ ಪಡೆ ಸಿಬ್ಬಂದಿ ಬಂಧಿಸಿದ್ದಾರೆ. ಶೋಪಿಯಾನಾದ ರಂಬಿ ಅರಾ ಸಮೀಪದ ದೂಮ್​ವಾನಿ ಗ್ರಾಮದಲ್ಲಿ ಲಷ್ಕರ್​ ಇ ತೊಯ್ಬಾದ ಉಗ್ರ ಶಾಹೀದ್ ಅಹ್ಮದ್ ಗಯೆ ಮತ್ತು ಆತನ ಆಪ್ತ  ಅಡಗಿದ್ದಾರೆ ಎಂದು ಖಚಿತ ಮಾಹಿತಿ ಪಡೆದು ಭದ್ರತಾ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು ಎಂದು ಸೇನಾ ವಕ್ತಾರರೊಬ್ಬರು ತಿಳಿಸಿದ್ದಾರೆ.

ಭದ್ರತಾ ಪಡೆಗಳು ತಮ್ಮನ್ನು ಸುತ್ತುವರಿದಿದ್ದಾರೆ ಎಂದು ತಿಳಿಯುತ್ತಿದ್ದಂತೆ ಉಗ್ರರು ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು. ಆದರೆ ರಕ್ಷಣಾ ಪಡೆಗಳು ಅದಕ್ಕೆ ಅವಕಾಶ ಕೊಡದೆ ಸೆರೆಹಿಡಿದಿದ್ದಾರೆ ಎಂದು  ಹೇಳಿದ್ದಾರೆ. ಬಂಧಿತರಲ್ಲಿ ಶಾಹಿದ್ ಅಹ್ಮದ್ ಗಯೆ ದೂಮ್​ವಾನಿ ಕೀಗಮ್​ ನಿವಾಸಿಯಾಗಿದ್ದು, ಇನ್ನೊಬ್ಬಾತ ಕಿಫಾಯತ್​ ಅಯೋಬ್​ ಅಲಿ ಎಂಬುವನು ಪಿಂಜೀರಾ ಶೋಪಿಯಾನ್​ದ ನಿವಾಸಿಯಾಗಿದ್ದಾನೆ.  ಬಂಧಿತ ಭಯೋತ್ಪಾದಕರಿಂದ ಚೈನೀಸ್​ ಪಿಸ್ತೂಲ್​​, ಒಂದು ಪಿಸ್ತೂಲ್​ ಮ್ಯಾಗಜಿನ್​, ಎರಡು ಚೈನೀಸ್​ ಗ್ರೆನೇಡ್​​ ಸೇರಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ. ಹಾಗೇ, 2.9 ಲಕ್ಷ ರೂಪಾಯಿ ನಗದು ಕೂಡ ಸಿಕ್ಕಿದೆ ಎಂದು ವಕ್ತಾರ ಮಾಹಿತಿ ನೀಡಿದ್ದಾರೆ. ಇಬ್ಬರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಶುರುವಾಗಿದೆ.

ಇದನ್ನೂ ಓದಿ: ಮಳೆರಾಯನ ಆರ್ಭಟ; ಅಪಾಯದ ಸುಳಿಯಲ್ಲಿ ಸುವರ್ಣ ಮುಖಿ ನದಿ ಸೇತುವೆ, ಆತಂಕದಲ್ಲಿ ಸ್ಥಳೀಯ ರೈತರು

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ