AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಪಿಯಾನ್​​ನಲ್ಲಿ ಇಬ್ಬರು ಎಲ್​ಇಟಿ ಉಗ್ರರ ಬಂಧನ; ಅವರ ಬಳಿಯಿದ್ದ ಚೈನೀಸ್​ ಪಿಸ್ತೂಲ್, ಗ್ರೆನೇಡ್​ ವಶ​

ಭದ್ರತಾ ಪಡೆಗಳು ತಮ್ಮನ್ನು ಸುತ್ತುವರಿದಿದ್ದಾರೆ ಎಂದು ತಿಳಿಯುತ್ತಿದ್ದಂತೆ ಉಗ್ರರು ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು. ಆದರೆ ರಕ್ಷಣಾ ಪಡೆಗಳು ಅದಕ್ಕೆ ಅವಕಾಶ ಕೊಡದೆ ಸೆರೆಹಿಡಿದಿದ್ದಾರೆ.

ಶೋಪಿಯಾನ್​​ನಲ್ಲಿ ಇಬ್ಬರು ಎಲ್​ಇಟಿ ಉಗ್ರರ ಬಂಧನ; ಅವರ ಬಳಿಯಿದ್ದ ಚೈನೀಸ್​ ಪಿಸ್ತೂಲ್, ಗ್ರೆನೇಡ್​ ವಶ​
ಸಾಂಕೇತಿಕ ಚಿತ್ರ
TV9 Web
| Edited By: |

Updated on: Dec 06, 2021 | 9:43 AM

Share

ಜಮ್ಮು-ಕಾಶ್ಮೀರದ ಶೋಪಿಯಾನ್​​ ಜಿಲ್ಲೆಯಲ್ಲಿ ಲಷ್ಕರ್​ ಇ ತೊಯ್ಬಾ (LeT)ಸಂಘಟನೆಯ ಇಬ್ಬರು ಉಗ್ರರನ್ನು ಭದ್ರತಾ ಪಡೆ ಸಿಬ್ಬಂದಿ ಬಂಧಿಸಿದ್ದಾರೆ. ಶೋಪಿಯಾನಾದ ರಂಬಿ ಅರಾ ಸಮೀಪದ ದೂಮ್​ವಾನಿ ಗ್ರಾಮದಲ್ಲಿ ಲಷ್ಕರ್​ ಇ ತೊಯ್ಬಾದ ಉಗ್ರ ಶಾಹೀದ್ ಅಹ್ಮದ್ ಗಯೆ ಮತ್ತು ಆತನ ಆಪ್ತ  ಅಡಗಿದ್ದಾರೆ ಎಂದು ಖಚಿತ ಮಾಹಿತಿ ಪಡೆದು ಭದ್ರತಾ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು ಎಂದು ಸೇನಾ ವಕ್ತಾರರೊಬ್ಬರು ತಿಳಿಸಿದ್ದಾರೆ.

ಭದ್ರತಾ ಪಡೆಗಳು ತಮ್ಮನ್ನು ಸುತ್ತುವರಿದಿದ್ದಾರೆ ಎಂದು ತಿಳಿಯುತ್ತಿದ್ದಂತೆ ಉಗ್ರರು ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು. ಆದರೆ ರಕ್ಷಣಾ ಪಡೆಗಳು ಅದಕ್ಕೆ ಅವಕಾಶ ಕೊಡದೆ ಸೆರೆಹಿಡಿದಿದ್ದಾರೆ ಎಂದು  ಹೇಳಿದ್ದಾರೆ. ಬಂಧಿತರಲ್ಲಿ ಶಾಹಿದ್ ಅಹ್ಮದ್ ಗಯೆ ದೂಮ್​ವಾನಿ ಕೀಗಮ್​ ನಿವಾಸಿಯಾಗಿದ್ದು, ಇನ್ನೊಬ್ಬಾತ ಕಿಫಾಯತ್​ ಅಯೋಬ್​ ಅಲಿ ಎಂಬುವನು ಪಿಂಜೀರಾ ಶೋಪಿಯಾನ್​ದ ನಿವಾಸಿಯಾಗಿದ್ದಾನೆ.  ಬಂಧಿತ ಭಯೋತ್ಪಾದಕರಿಂದ ಚೈನೀಸ್​ ಪಿಸ್ತೂಲ್​​, ಒಂದು ಪಿಸ್ತೂಲ್​ ಮ್ಯಾಗಜಿನ್​, ಎರಡು ಚೈನೀಸ್​ ಗ್ರೆನೇಡ್​​ ಸೇರಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ. ಹಾಗೇ, 2.9 ಲಕ್ಷ ರೂಪಾಯಿ ನಗದು ಕೂಡ ಸಿಕ್ಕಿದೆ ಎಂದು ವಕ್ತಾರ ಮಾಹಿತಿ ನೀಡಿದ್ದಾರೆ. ಇಬ್ಬರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಶುರುವಾಗಿದೆ.

ಇದನ್ನೂ ಓದಿ: ಮಳೆರಾಯನ ಆರ್ಭಟ; ಅಪಾಯದ ಸುಳಿಯಲ್ಲಿ ಸುವರ್ಣ ಮುಖಿ ನದಿ ಸೇತುವೆ, ಆತಂಕದಲ್ಲಿ ಸ್ಥಳೀಯ ರೈತರು

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ