AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಪಿಯಾನ್​ನಲ್ಲಿ ಲಷ್ಕರ್-ಎ-ತೊಯ್ಬಾದ ಇಬ್ಬರು ಉಗ್ರರ ಎನ್​ಕೌಂಟರ್; ಶಸ್ತ್ರಾಸ್ತ್ರಗಳು ವಶಕ್ಕೆ

Shopian Encounter: ಶೋಪಿಯಾನ್‌ನ ಚೌಗಮ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರನ್ನು ಸದೆಬಡಿಯಲಾಗಿದೆ.

ಶೋಪಿಯಾನ್​ನಲ್ಲಿ ಲಷ್ಕರ್-ಎ-ತೊಯ್ಬಾದ ಇಬ್ಬರು ಉಗ್ರರ ಎನ್​ಕೌಂಟರ್; ಶಸ್ತ್ರಾಸ್ತ್ರಗಳು ವಶಕ್ಕೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Dec 25, 2021 | 3:12 PM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಚೌಗಾಮ್ ಪ್ರದೇಶದಲ್ಲಿ ಇಂದು ಬೆಳಗ್ಗೆ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾಗೆ ಸೇರಿದ ಇಬ್ಬರು ಉಗ್ರರನ್ನು ಎನ್​ಕೌಂಟರ್ ಮಾಡಲಾಗಿದೆ. ಘಟನೆ ನಡೆದ ಸ್ಥಳದಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಸೇರಿದಂತೆ ಹಲವು ವಸ್ತುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸದ್ಯ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

“ಶೋಪಿಯಾನ್‌ನ ಚೌಗಾಮ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಅವರಲ್ಲಿ ಒಬ್ಬ ಭಯೋತ್ಪಾದಕ ಗ್ರೆನೇಡ್ ಗುಂಡು ಹಾರಿಸಿ ನಾಗರಿಕರ ಹತ್ಯೆಯಲ್ಲಿ ಭಾಗಿಯಾಗಿದ್ದ. ಇತ್ತೀಚೆಗೆ ಮತ್ತೊಬ್ಬ ಭಯೋತ್ಪಾದಕ ಕೂಡ ಅವರ ಗುಂಪಿಗೆ ಸೇರಿಕೊಂಡಿದ್ದ” ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಉಲ್ಲೇಖಿಸಿದ್ದಾರೆ.

ಶೋಪಿಯಾನ್‌ನ ಚೌಗಮ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರನ್ನು ಸದೆಬಡಿಯಲಾಗಿದೆ. ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಅಧಿಕಾರಿಯೊಬ್ಬರ ಪ್ರಕಾರ, ಪೊಲೀಸರು ಮತ್ತು ಭದ್ರತಾ ಪಡೆಗಳ ಜಂಟಿ ತಂಡವು ಪ್ರದೇಶವನ್ನು ಸುತ್ತುವರೆದಿರುವಾಗ ಗುಂಡಿನ ಚಕಮಕಿ ಪ್ರಾರಂಭವಾಯಿತು. ಆ ಸ್ಥಳದಲ್ಲಿ ಉಗ್ರರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಅಡಗಿದ್ದ ಉಗ್ರರು ಭದ್ರತಾ ಪಡೆಗಳ ಶೋಧನಾ ದಳದ ಮೇಲೆ ಗುಂಡು ಹಾರಿಸಿದ ನಂತರ ಶೋಧ ಕಾರ್ಯಾಚರಣೆಯು ಎನ್‌ಕೌಂಟರ್‌ಗೆ ತಿರುಗಿತು.

ಇದನ್ನೂ ಓದಿ: Terrorist Encounter: ಶ್ರೀನಗರದಲ್ಲಿ ಸೇನಾ ಪಡೆಯಿಂದ ಎನ್​ಕೌಂಟರ್; ಓರ್ವ ಉಗ್ರನ ಹತ್ಯೆ

ಕುಲಗಾಂವ್​​ನಲ್ಲಿ ಮುಂದುವರಿದ ಎನ್​ಕೌಂಟರ್​​; ಇಂದು ಇಬ್ಬರು ಭಯೋತ್ಪಾದಕರ ಹತ್ಯೆ

ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್