AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಪಿಯಾನ್​ನಲ್ಲಿ ಲಷ್ಕರ್-ಎ-ತೊಯ್ಬಾದ ಇಬ್ಬರು ಉಗ್ರರ ಎನ್​ಕೌಂಟರ್; ಶಸ್ತ್ರಾಸ್ತ್ರಗಳು ವಶಕ್ಕೆ

Shopian Encounter: ಶೋಪಿಯಾನ್‌ನ ಚೌಗಮ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರನ್ನು ಸದೆಬಡಿಯಲಾಗಿದೆ.

ಶೋಪಿಯಾನ್​ನಲ್ಲಿ ಲಷ್ಕರ್-ಎ-ತೊಯ್ಬಾದ ಇಬ್ಬರು ಉಗ್ರರ ಎನ್​ಕೌಂಟರ್; ಶಸ್ತ್ರಾಸ್ತ್ರಗಳು ವಶಕ್ಕೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Dec 25, 2021 | 3:12 PM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಚೌಗಾಮ್ ಪ್ರದೇಶದಲ್ಲಿ ಇಂದು ಬೆಳಗ್ಗೆ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾಗೆ ಸೇರಿದ ಇಬ್ಬರು ಉಗ್ರರನ್ನು ಎನ್​ಕೌಂಟರ್ ಮಾಡಲಾಗಿದೆ. ಘಟನೆ ನಡೆದ ಸ್ಥಳದಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಸೇರಿದಂತೆ ಹಲವು ವಸ್ತುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸದ್ಯ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

“ಶೋಪಿಯಾನ್‌ನ ಚೌಗಾಮ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಅವರಲ್ಲಿ ಒಬ್ಬ ಭಯೋತ್ಪಾದಕ ಗ್ರೆನೇಡ್ ಗುಂಡು ಹಾರಿಸಿ ನಾಗರಿಕರ ಹತ್ಯೆಯಲ್ಲಿ ಭಾಗಿಯಾಗಿದ್ದ. ಇತ್ತೀಚೆಗೆ ಮತ್ತೊಬ್ಬ ಭಯೋತ್ಪಾದಕ ಕೂಡ ಅವರ ಗುಂಪಿಗೆ ಸೇರಿಕೊಂಡಿದ್ದ” ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಉಲ್ಲೇಖಿಸಿದ್ದಾರೆ.

ಶೋಪಿಯಾನ್‌ನ ಚೌಗಮ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರನ್ನು ಸದೆಬಡಿಯಲಾಗಿದೆ. ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಅಧಿಕಾರಿಯೊಬ್ಬರ ಪ್ರಕಾರ, ಪೊಲೀಸರು ಮತ್ತು ಭದ್ರತಾ ಪಡೆಗಳ ಜಂಟಿ ತಂಡವು ಪ್ರದೇಶವನ್ನು ಸುತ್ತುವರೆದಿರುವಾಗ ಗುಂಡಿನ ಚಕಮಕಿ ಪ್ರಾರಂಭವಾಯಿತು. ಆ ಸ್ಥಳದಲ್ಲಿ ಉಗ್ರರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಅಡಗಿದ್ದ ಉಗ್ರರು ಭದ್ರತಾ ಪಡೆಗಳ ಶೋಧನಾ ದಳದ ಮೇಲೆ ಗುಂಡು ಹಾರಿಸಿದ ನಂತರ ಶೋಧ ಕಾರ್ಯಾಚರಣೆಯು ಎನ್‌ಕೌಂಟರ್‌ಗೆ ತಿರುಗಿತು.

ಇದನ್ನೂ ಓದಿ: Terrorist Encounter: ಶ್ರೀನಗರದಲ್ಲಿ ಸೇನಾ ಪಡೆಯಿಂದ ಎನ್​ಕೌಂಟರ್; ಓರ್ವ ಉಗ್ರನ ಹತ್ಯೆ

ಕುಲಗಾಂವ್​​ನಲ್ಲಿ ಮುಂದುವರಿದ ಎನ್​ಕೌಂಟರ್​​; ಇಂದು ಇಬ್ಬರು ಭಯೋತ್ಪಾದಕರ ಹತ್ಯೆ

Follow Us
TV9 Web
TV9 Web

TV9 Kannada

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ