ಸುಲಭವಾಗಿ ಹಣ ಮಾಡಲು 101 ಮದ್ಯ ಬಾಟಲಿಯನ್ನು ಹೇಗೆ? ಎಲ್ಲಿಗೆ ಸಾಗಿಸ್ತಿದ್ದರು ಗೊತ್ತಾ?

ವಿಜಯವಾಡ:ತೆಲಂಗಾಣದ ಇಬ್ಬರು ವ್ಯಕ್ತಿಗಳು ತಮ್ಮ ದೇಹಕ್ಕೆ 101 ಮದ್ಯದ ಬಾಟಲಿಗಳನ್ನು ಕಟ್ಟಿಕೊಂಡು ಆಂಧ್ರಪ್ರದೇಶಕ್ಕೆ ಸಾಗಿಸಲು ಯತ್ನಿಸಿದ್ದಾರೆ. ವಿಶೇಷ ಜಾರಿ ಬ್ಯೂರೋ (ಎಸ್‌ಇಬಿ), ಜಿಲ್ಲಾ ಪೊಲೀಸರು ಮತ್ತು ಅಬಕಾರಿ ಅಧಿಕಾರಿಗಳು ರಾಜ್ಯದ ಗಡಿಯಲ್ಲಿ ನಡೆಸಿದ ತಪಾಸಣೆಯಲ್ಲಿ ಇವರಿಬ್ಬರೂ ಸಿಕ್ಕಿಬಿದ್ದಿದ್ದಾರೆ. ಮಂಗಳವಾರ ಮುಂಜಾನೆ 5 ಗಂಟೆ ಸುಮಾರಿಗೆ ವಿಸ್ಸಾನಪೇಟೆ ಅಬಕಾರಿ ಪೊಲೀಸರು, ತೆಲಂಗಾಣ ರಾಜ್ಯ ಗಡಿ ಬಳಿಯ ಚತ್ರೈ ಮಂಡಲದ ಪೊಲವರಂ ಗ್ರಾಮದಲ್ಲಿ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಮೋಟಾರ್ ಸೈಕಲ್‌ನಲ್ಲಿ ಹೋಗುತ್ತಿದ್ದ ಇಬ್ಬರು ವ್ಯಕ್ತಿಗಳ ಚಲನವಲನ ಅನುಮಾನಾಸ್ಪದವಾಗಿ ಕಂಡಿದೆ. […]

ಸುಲಭವಾಗಿ ಹಣ ಮಾಡಲು 101 ಮದ್ಯ ಬಾಟಲಿಯನ್ನು ಹೇಗೆ? ಎಲ್ಲಿಗೆ ಸಾಗಿಸ್ತಿದ್ದರು ಗೊತ್ತಾ?
Follow us
|

Updated on:Sep 02, 2020 | 5:03 PM

ವಿಜಯವಾಡ:ತೆಲಂಗಾಣದ ಇಬ್ಬರು ವ್ಯಕ್ತಿಗಳು ತಮ್ಮ ದೇಹಕ್ಕೆ 101 ಮದ್ಯದ ಬಾಟಲಿಗಳನ್ನು ಕಟ್ಟಿಕೊಂಡು ಆಂಧ್ರಪ್ರದೇಶಕ್ಕೆ ಸಾಗಿಸಲು ಯತ್ನಿಸಿದ್ದಾರೆ. ವಿಶೇಷ ಜಾರಿ ಬ್ಯೂರೋ (ಎಸ್‌ಇಬಿ), ಜಿಲ್ಲಾ ಪೊಲೀಸರು ಮತ್ತು ಅಬಕಾರಿ ಅಧಿಕಾರಿಗಳು ರಾಜ್ಯದ ಗಡಿಯಲ್ಲಿ ನಡೆಸಿದ ತಪಾಸಣೆಯಲ್ಲಿ ಇವರಿಬ್ಬರೂ ಸಿಕ್ಕಿಬಿದ್ದಿದ್ದಾರೆ.

ಮಂಗಳವಾರ ಮುಂಜಾನೆ 5 ಗಂಟೆ ಸುಮಾರಿಗೆ ವಿಸ್ಸಾನಪೇಟೆ ಅಬಕಾರಿ ಪೊಲೀಸರು, ತೆಲಂಗಾಣ ರಾಜ್ಯ ಗಡಿ ಬಳಿಯ ಚತ್ರೈ ಮಂಡಲದ ಪೊಲವರಂ ಗ್ರಾಮದಲ್ಲಿ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಮೋಟಾರ್ ಸೈಕಲ್‌ನಲ್ಲಿ ಹೋಗುತ್ತಿದ್ದ ಇಬ್ಬರು ವ್ಯಕ್ತಿಗಳ ಚಲನವಲನ ಅನುಮಾನಾಸ್ಪದವಾಗಿ ಕಂಡಿದೆ.

ಇದನ್ನು ಗಮನಿಸಿದ ಅಧಿಕಾರಿಗಳು ಇವರಿಬ್ಬರ ಬೈಕ್​ ಅಡ್ಡಗಟ್ಟಿ ತಪಾಸಣೆ ಮಾಡಿದ್ದಾರೆ. ಈ ಇಬ್ಬರು ತಮ್ಮ ದೇಹದ ಸುತ್ತಲೂ 101 ಮದ್ಯ (ಎನ್‌ಡಿಪಿಎಲ್) ಬಾಟಲಿಗಳನ್ನು (ತಲಾ 180 ಮಿಲಿ) ಪ್ಲಾಸ್ಟರ್​ನಿಂದ ಕಟ್ಟಿಕೊಂಡಿರುವುದು ಬೆಳಕಿಗೆ ಬಂದಿದೆ. ಕೂಡಲೇ ಅಧಿಕಾರಿಗಳು ಈ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.

ಬಂಧಿತರನ್ನು ತೆಲಂಗಾಣದ ಖಮ್ಮಂ ಜಿಲ್ಲೆಯ ಅಶ್ವಾರೋಪೇಟದ ದೇವರಾಕೊಂಡ ಶ್ರೀನಿವಾಸ್ ರಾವ್ ಮತ್ತು ದೇವರಕೊಂಡ ರಾಜೇಶ್ ಎಂದು ಗುರುತಿಸಲಾಗಿದೆ. ಮದ್ಯದ ಬೆಲೆ ಆಂಧ್ರಪ್ರದೇಶದಲ್ಲಿ ಹೆಚ್ಚಿರುವುದರಿಂದ ಸುಲಭವಾಗಿ ಹಣ ಸಂಪಾದಿಸಲು ಅಲ್ಲಿ ಮದ್ಯ ಮಾರಾಟಕ್ಕೆ ನಿರ್ಧರಿಸಿದ್ದರು ಎಂದು ಮೂಲಗಳು ತಿಳಿಸಿವೆ. ಅಧಿಕಾರಿಗಳು ಮದ್ಯದ ಬಾಟಲಿಗಳು ಮತ್ತು ಬೈಕುಗಳನ್ನು ವಶಪಡಿಸಿಕೊಂಡಿದ್ದಾರೆ.

Published On - 5:01 pm, Wed, 2 September 20

ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್