AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಮಾಂಸ ಮಾರಾಟ ಆರೋಪ: ಛತ್ತೀಸ್‌ಗಡದಲ್ಲಿ ಇಬ್ಬರು ವ್ಯಕ್ತಿಗಳನ್ನು ಬಟ್ಟೆ ಬಿಚ್ಚಿಸಿ ಮೆರವಣಿಗೆ

ಆರೋಪಿಗಳಿಂದ 33.5 ಕೆಜಿ ದನದ ಮಾಂಸವನ್ನು ವಶಪಡಿಸಿಕೊಂಡಿದ್ದು ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಗೋಮಾಂಸ ಮಾರಾಟ ಆರೋಪ: ಛತ್ತೀಸ್‌ಗಡದಲ್ಲಿ ಇಬ್ಬರು ವ್ಯಕ್ತಿಗಳನ್ನು ಬಟ್ಟೆ ಬಿಚ್ಚಿಸಿ ಮೆರವಣಿಗೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 02, 2022 | 8:17 PM

Share

ಭೋಪಾಲ್: ಛತ್ತೀಸ್‌ಗಡದ(Chhattisgarh) ಬಿಲಾಸ್‌ಪುರ ಜಿಲ್ಲೆಯಲ್ಲಿ ಗೋಮಾಂಸ (Beef) ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿ ಬೆಲ್ಟ್‌ನಿಂದ ಥಳಿಸಿದ ಆಘಾತಕಾರಿ ಘಟನೆ ನಡೆದಿದೆ. ಈಗ ವೈರಲ್ ಆಗಿರುವ ವಿಡಿಯೊವೊಂದರಲ್ಲಿ ಬಟ್ಟ ಬಿಚ್ಚಿ ಒಳ ಉಡುಪಿನಲ್ಲಿರುವ ಇಬ್ಬರು ವ್ಯಕ್ತಿಗಳನ್ನು ಜನರ ಗುಂಪು ಹಿಂಬಾಲಿಸುತ್ತಿರುವಂತೆ ಬೀದಿಯಲ್ಲಿ ಮೆರವಣಿಗೆ ಮಾಡುವುದನ್ನು ತೋರಿಸುತ್ತದೆ. ಇತರರು ತಮ್ಮ ಫೋನ್‌ಗಳಲ್ಲಿ ಇದನ್ನು ರೆಕಾರ್ಡ್ ಮಾಡುತ್ತಿದ್ದಾರೆ. ಗುಂಪಿನಲ್ಲಿದ್ದ ವ್ಯಕ್ತಿಯೊಬ್ಬ ಆರೋಪಿಗಳಲ್ಲಿ ಒಬ್ಬನಿಗೆ ಬೆಲ್ಟ್ ನಲ್ಲಿ ಹೊಡೆಯುತ್ತಿರುವುದು ಕಾಣುತ್ತದೆ. ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ 33 ಕೆಜಿಗೂ ಅಧಿಕ ಗೋಮಾಂಸ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ನರಸಿಂಗ್ ದಾಸ್ (50) ಮತ್ತು ರಾಮನಿವಾಸ್ ಮೆಹರ್ (52) ಅವರು ಬಿಳಿ ಗೋಣಿಚೀಲವೊಂದರಲ್ಲಿ ಏನನ್ನೊ ತುಂಬಿಕೊಂಡು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದರು ಎಂದು ಆರೋಪಿಸಿ ಸುಮಿತ್ ನಾಯಕ್ ಎಂಬವರು ನಿನ್ನೆ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಗೋಣಿಚೀಲದಲ್ಲಿ ಏನಿದೆ ಎಂದು ದೂರುದಾರರು ಮತ್ತು ಇತರರು ಕೇಳಿದಾಗ ಅದರಲ್ಲಿ ಗೋಮಾಂಸವಿದೆ ಎಂದು ಉತ್ತರಿಸಿದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ನಂತರ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ಇಬ್ಬರನ್ನು ವಶಕ್ಕೆ ತೆಗೆದುಕೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳಿಂದ 33.5 ಕೆಜಿ ದನದ ಮಾಂಸವನ್ನು ವಶಪಡಿಸಿಕೊಂಡಿದ್ದು ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಇಂದು ಇಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಪತ್ತೆಯಾದ ಮಾಂಸವನ್ನು ಪಶುವೈದ್ಯರು ಪರೀಕ್ಷಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ, ಆದರೆ ಈ ಪರೀಕ್ಷೆಯ ವರದಿಯ ಬಗ್ಗೆ ಯಾವುದೇ ವಿವರಗಳಿಲ್ಲ.

ಎನ್‌ಡಿಟಿವಿ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿದ್ದು ಅವರಿಂದಆದರೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆರೋಪಿಗಳನ್ನು ವಿವಸ್ತ್ರವಾಗಿಸಿ ರಸ್ತೆಯಲ್ಲಿ ಮೆರವಣಿಗೆ ನಡೆಸಿದ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆಯೇ ಎಂಬ ಬಗ್ಗೆಯೂ ಮಾಹಿತಿ ಇಲ್ಲ.

Follow Us
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್