AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಮುಖಂಡನ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಉಗ್ರರನ್ನು ಕಾಶ್ಮೀರದಲ್ಲಿ ಹೊಡೆದುರುಳಿಸಿದ ಭದ್ರತಾ ಪಡೆಗಳು

ಹಕ್ಕಾನಿ ಲಷ್ಕರ್​ ಎ ತೊಯ್ಬಾದ ಉನ್ನತ ಕಮಾಂಡರ್​ ಆಗಿದ್ದಾನೆ. 2018ರಲ್ಲಿ ವಾಘ್​  ಗಡಿಯ ಮೂಲಕ ಪಾಕಿಸ್ತಾನಕ್ಕೆ ಹೋಗಿದ್ದ. ಅಲ್ಲಿ ತರಬೇತಿ ಪಡೆದ  ಬಳಿಕ 2019ರಲ್ಲಿ ಭಾರತಕ್ಕೆ ನುಸುಳಿದ್ದ.

ಬಿಜೆಪಿ ಮುಖಂಡನ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಉಗ್ರರನ್ನು ಕಾಶ್ಮೀರದಲ್ಲಿ ಹೊಡೆದುರುಳಿಸಿದ ಭದ್ರತಾ ಪಡೆಗಳು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Sep 27, 2021 | 10:33 AM

Share

ಕಾಶ್ಮೀರದ ಬಂಡಿಪೋರಾದಲ್ಲಿ ನಿನ್ನೆ (ಭಾನುವಾರ) ನಡೆದ ಎನ್​ಕೌಂಟರ್​​ನಲ್ಲಿ ಲಷ್ಕರ್ ಇ ತೊಯ್ಬಾ (Lashkar E Toiba-ಎಲ್​ಇಟಿ) ಸಂಘಟನೆಯ ಕಮಾಂಡರ್​ ಸೇರಿ ಇಬ್ಬರು ಉಗ್ರರನ್ನು ಪೊಲೀಸರು ಹತ್ಯೆಗೈದಿದ್ದಾರೆ. ಕಳೆದ ವರ್ಷ ಬಿಜೆಪಿ ಮುಖಂಡ ವಾಸೀಮ್​ ಬ್ಯಾರಿ (BJP Leader Waseem Bari )ಮತ್ತು ಅವರ ಕುಟುಂಬದ ಸದಸ್ಯರ ಹತ್ಯೆಯಲ್ಲಿ ಈ ಉಗ್ರರೂ ಭಾಗಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. 

ಶನಿವಾರ ಸಂಜೆ ಪೊಲೀಸರು, ಭಾರತೀಯ ಸೇನೆ ಮತ್ತು ಸಿಆರ್​ಪಿಎಫ್​ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿದ್ದರು. ಬಂಡಿಪೋರಾದ ವಾರ್ಟಿನಾ ಗ್ರಾಮದಲ್ಲಿ ಉಗ್ರರು ಅಡಗಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಆ ಪ್ರದೇಶವನ್ನು ಸುತ್ತುವರಿದಿದ್ದರು. ಭಾನುವಾರ ಮುಂಜಾನೆ ಇನ್ನಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿ ಅಲ್ಲಿ ಸೇರಿದ್ದರು.

ಅಲ್ಲಿ ಅಡಗಿದ್ದ ಉಗ್ರರಿಗೆ ಪೊಲೀಸರ ಎದುರು ಶರಣಾಗಲು ಅವಕಾಶ ನೀಡಲಾಯಿತು. ಆದರೆ ಅವರು ತಾವು ಶರಣಾಗುವುದಿಲ್ಲ ಎಂದು ಹೇಳಿದರು. ಅಷ್ಟೇ ಅಲ್ಲ, ಭದ್ರತಾ ಪಡೆಗಳ ಮೇಲೆ ಒಂದೇ ಸಮ ಗುಂಡಿನ ದಾಳಿ ನಡೆಸಲು ಶುರು ಮಾಡಿದರು. ಹೀಗಾಗಿ ಅವರನ್ನು ಹತ್ಯೆ ಮಾಡುವುದು ಅನಿವಾರ್ಯವಾಯಿತು ಎಂದು ಪೊಲೀಸರು ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಮೃತ ಉಗ್ರರನ್ನು ಅಬಿದ್​ ರಶೀದ್​ ದಾರ್​ ಅಲಿಯಾಸ್​ ಹಕ್ಕಾನಿ ಮತ್ತು ಅಹ್ಮದ್​ ಶಾ ಎಂದು ಗುರುತಿಸಲಾಗಿದೆ. ಇಬ್ಬರೂ ಪಾಕಿಸ್ತಾನದವರೇ ಆಗಿದ್ದಾರೆಂದೂ ತಿಳಿಸಿದ್ದಾರೆ.

ಇದರಲ್ಲಿ ಹಕ್ಕಾನಿ ಲಷ್ಕರ್​ ಎ ತೊಯ್ಬಾದ ಉನ್ನತ ಕಮಾಂಡರ್​ ಆಗಿದ್ದಾನೆ. 2018ರಲ್ಲಿ ವಾಘ್​  ಗಡಿಯ ಮೂಲಕ ಪಾಕಿಸ್ತಾನಕ್ಕೆ ಹೋಗಿದ್ದ. ಅಲ್ಲಿ ತರಬೇತಿ ಪಡೆದ  ಬಳಿಕ 2019ರಲ್ಲಿ ಭಾರತಕ್ಕೆ ನುಸುಳಿದ್ದ.  ಕಳೆದ ವರ್ಷ ಜುಲೈನಲ್ಲಿ ಹತ್ಯೆಗೀಡಾದ ಬಿಜೆಪಿ ಮುಖಂಡ ಶೇಖ್​ ವಾಸೀಮ್​ ಬ್ಯಾರಿ ಮತ್ತು ಅವರ ಸಹೋದರ, ತಂದೆಯ ಹತ್ಯೆಯಲ್ಲಿ ಪಾಲ್ಗೊಂಡ ಭಯೋತ್ಪಾದಕರು ಇವರಾಗಿದ್ದರು ಎಂದು ಮಾಹಿತಿ ನೀಡಿದ್ದಾರೆ. ಅದರಲ್ಲಿ ಈ ಹಕ್ಕಾನಿ ಯುವಕರನ್ನು ಉಗ್ರಸಂಘಟನೆಗೆ ಸೇರಿಸಿ, ತರಬೇತಿ ನೀಡುವ ಕೆಲಸವನ್ನೂ ಮಾಡುತ್ತಿದ್ದ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಂದ್ ಮಧ್ಯೆ ಸಿಎಂ ಬೊಮ್ಮಾಯಿ ಯಾವ ಕಾರ್ಯಕ್ರಮದಲ್ಲಿದ್ದಾರೆ? ಭಾರತ್ ಬಂದ್ ಬಗ್ಗೆ ಏನು ಹೇಳಿದರು?

Viral Video: ಆರ್ಡರ್ ಫುಡ್ ಹೊತ್ತೊಯ್ಯುತ್ತಿದ್ದ ಡ್ರೋನ್ ಮತ್ತು ಕಾಗೆ ನಡುವೆ ಜಗಳ; ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯ್ತು ವಿಡಿಯೋ

ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?