AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಕ್ರೋವೇವ್ ಓವನ್‌ನಲ್ಲಿ ಹೆಣ್ಣು ಮಗುವಿನ ಶವ ಪತ್ತೆ; ತಾಯಿ ಬಗ್ಗೆ ಶಂಕೆ ವ್ಯಕ್ತ ಪಡಿಸಿದ ದೆಹಲಿ ಪೊಲೀಸರು

ಮಗುವಿನ ಪೋಷಕರಾದ ಗುಲ್ಶನ್ ಕೌಶಿಕ್ ಮತ್ತು ಡಿಂಪಲ್ ಕೌಶಿಕ್ ಅವರನ್ನು ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಜೈಕರ್ ಹೇಳಿದ್ದಾರೆ.

ಮೈಕ್ರೋವೇವ್ ಓವನ್‌ನಲ್ಲಿ ಹೆಣ್ಣು ಮಗುವಿನ ಶವ ಪತ್ತೆ; ತಾಯಿ ಬಗ್ಗೆ ಶಂಕೆ ವ್ಯಕ್ತ ಪಡಿಸಿದ ದೆಹಲಿ ಪೊಲೀಸರು
ದೆಹಲಿ ಪೊಲೀಸ್
TV9 Web
| Edited By: |

Updated on: Mar 22, 2022 | 3:57 PM

Share

ದೆಹಲಿ: ದಕ್ಷಿಣ ದಿಲ್ಲಿಯ ಚಿರಾಗ್ ದಿಲ್ಲಿ ಪ್ರದೇಶದಲ್ಲಿ(Chirag Dilli) ಸೋಮವಾರ ಎರಡು ತಿಂಗಳ ಹೆಣ್ಣು ಮಗು ಮೈಕ್ರೋವೇವ್ ಓವನ್‌ನ(microwave oven)ಲ್ಲಿ ಶವವಾಗಿ ಪತ್ತೆಯಾಗಿದೆ. ಮಧ್ಯಾಹ್ನ 3.15ರ ಸುಮಾರಿಗೆ ಮಗುವಿನ ಸಾವಿನ ಬಗ್ಗೆ ಮಾಹಿತಿ ಸಿಕ್ಕಿದ್ದು, ಸಾಧ್ಯವಿರುವ ಎಲ್ಲ ರೀತಿಯಲ್ಲಿ ಪರಿಶೀಲಿಸಲಾಗುತ್ತಿದೆ ಎಂದು ಉಪ ಪೊಲೀಸ್ ಆಯುಕ್ತ (ದಕ್ಷಿಣ) ಬೆನಿಟಾ ಮೇರಿ ಜೈಕರ್ (Benita Mary Jaiker) ಹೇಳಿದ್ದಾರೆ. ಅಪರಿಚಿತ ವ್ಯಕ್ತಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. “ಮಗುವಿನ ಪೋಷಕರಾದ ಗುಲ್ಶನ್ ಕೌಶಿಕ್ ಮತ್ತು ಡಿಂಪಲ್ ಕೌಶಿಕ್ ಅವರನ್ನು ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಜೈಕರ್ ಹೇಳಿದ್ದಾರೆ.  ಪ್ರಕರಣದ ಪ್ರಮುಖ ಶಂಕಿತರಾಗಿರುವ ಮಗುವಿನ ತಾಯಿ, ಹೆಣ್ಣು ಮಗುವಿನ ಜನನದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  “ಅನನ್ಯಾ ಈ ವರ್ಷದ ಜನವರಿಯಲ್ಲಿ ಜನಿಸಿದ್ದು ಅಂದಿನಿಂದ ಡಿಂಪಲ್ ಕೌಶಿಕ್ ಅಸಮಾಧಾನಗೊಂಡಿದ್ದರು. ಅವರು ಈ ವಿಷಯದ ಬಗ್ಗೆ ತಮ್ಮ ಪತಿಯೊಂದಿಗೆ ಜಗಳವಾಡಿದರು” ಎಂದು ಮೂಲಗಳು ಎನ್‌ಡಿಟಿವಿಗೆ ತಿಳಿಸಿವೆ. ಈ ದಂಪತಿಗೆ ನಾಲ್ಕು ವರ್ಷದ ಮಗನೂ ಇದ್ದಾನೆ. ಮಗುವಿನ ಸಾವಿನ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ನೆರೆಹೊರೆಯವರು ಡಿಂಪಲ್ ಮನೆಯೊಳಗೆ ಬೀಗ ಹಾಕಿಕೊಂಡಿದ್ದರು. ನಂತರ ಅವರ ಅತ್ತೆ ಬೊಬ್ಬೆ ಹಾಕಿದರು ಎಂದಿದ್ದಾರೆ. “ನಾವು ಗಾಜು ಒಡೆದು ಕೋಣೆಗೆ ಪ್ರವೇಶಿಸಿದ್ದೇವೆ. ಮಹಿಳೆ ತನ್ನ ಮಗನೊಂದಿಗೆ ಒಳಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ನಾವು ಕಂಡುಕೊಂಡಿದ್ದೇವೆ, ಆದರೆ ಎರಡು ತಿಂಗಳ ಮಗು ಅನನ್ಯಾ ಕಾಣೆಯಾಗಿತ್ತು ಎಂದು ಅವರು ಹೇಳಿದರು. ಅನನ್ಯಾಳ ಅಜ್ಜಿ ಮತ್ತು ಕೆಲವು ನೆರೆಹೊರೆಯವರು ನಂತರ ಮನೆಯೊಳಗೆ ಹುಡುಕಾಡಿದಾಗ ಮೈಕ್ರೋವೇವ್ ಓವನ್‌ನಲ್ಲಿ ಶಿಶು ಪತ್ತೆಯಾಗಿದೆ. ಮನೆಯ ಎರಡನೇ ಮಹಡಿಯ ಕೊಠಡಿಯಲ್ಲಿ ಒಲೆ ಇಡಲಾಗಿತ್ತು. ಘಟನೆಯ ಸಮಯದಲ್ಲಿ ಮಗುವಿನ ತಂದೆ ಅವರು ಹತ್ತಿರದ ಡಿಪಾರ್ಟ್‌ಮೆಂಟಲ್ ಸ್ಟೋರ್‌ನಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Worlds Most Polluted Capital City  ವಿಶ್ವದ ಅತ್ಯಂತ ಮಾಲಿನ್ಯಯುಕ್ತ ರಾಜಧಾನಿ ದೆಹಲಿ, ಟಾಪ್ 5 ಮಾಲಿನ್ಯಯುಕ್ತ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?