AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಎರಡು ಚೀತಾ ಮರಿಗಳು ಸಾವು, 2 ದಿನಗಳಲ್ಲಿ ಸಾವಿಗೀಡಾಗಿದ್ದು ಮೂರು ಚೀತಾ

Kuno National Park: ಈ ಹಿಂದೆ ಸಿಯಾಯಾ ಎಂದು ಕರೆಯಲ್ಪಡುತ್ತಿದ್ದ ಜ್ವಾಲಾ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನಮೀಬಿಯಾದಿಂದ ಕೆಎನ್‌ಪಿಗೆ ಸ್ಥಳಾಂತರಗೊಂಡ ನಂತರ ಮಾರ್ಚ್ ಕೊನೆಯ ವಾರದಲ್ಲಿ ನಾಲ್ಕು ಮರಿಗಳಿಗೆ ಜನ್ಮ ನೀಡಿತು

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಎರಡು ಚೀತಾ ಮರಿಗಳು ಸಾವು, 2 ದಿನಗಳಲ್ಲಿ ಸಾವಿಗೀಡಾಗಿದ್ದು ಮೂರು ಚೀತಾ
ಚೀತಾ ಮರಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: May 25, 2023 | 6:10 PM

Share

ಮುಖ್ಯಾಂಶಗಳು

  • ಮೇ 23 ರಂದು ಮಧ್ಯಾಹ್ನ ಎರಡು ಮರಿಗಳು ಸಾವಿಗೀಡಾಗಿದ್ದು, ಅವುಗಳ ಸಾವು ಗುರುವಾರ ವರದಿಯಾಗಿದೆ
  • ಒಂದೇ ದಿನ ಈ ಎರಡು ಮರಿಗಳು ಸಾವನ್ನಪ್ಪಿರುವ ಬಗ್ಗೆ ಮಾಹಿತಿ ನೀಡದಿರುವ ಕಾರಣವನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ.
  • ನಾಲ್ಕನೇ ಮರಿಯ ಸ್ಥಿತಿ ಸ್ಥಿರವಾಗಿದೆ, ಆದರೆ ಅದು ಕೂಡ ತೀವ್ರ ಚಿಕಿತ್ಸೆಯಲ್ಲಿದೆ ಎಂದು ಅದು ಹೇಳಿದೆ.

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ (Kuno National Park) ಎರಡು ಚೀತಾ ಮರಿಗಳು (cheetah Cubs) ಸಾವನ್ನಪ್ಪಿವೆ ಎಂದು ಅರಣ್ಯಾಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. ಕಳೆದ ಮೂರು ದಿನಗಳಲ್ಲಿ ಕೆಎನ್‌ಪಿಯಲ್ಲಿ ಸಾವನ್ನಪ್ಪಿದ ಚೀತಾ ಮರಿಗಳ ಸಂಖ್ಯೆ ಮೂರಕ್ಕೆ ಏರಿದೆ. ಮೇ 23ರಂದು ಒಂದು ಚೀತಾ ಮರಿ ಸಾವನ್ನಪ್ಪಿತ್ತು. ಮೇ 23 ರಂದು ಮಧ್ಯಾಹ್ನ ಎರಡು ಮರಿಗಳು ಸಾವಿಗೀಡಾಗಿದ್ದು, ಅವುಗಳ ಸಾವು ಗುರುವಾರ ವರದಿಯಾಗಿದೆ. ಒಂದೇ ದಿನ ಈ ಎರಡು ಮರಿಗಳು ಸಾವನ್ನಪ್ಪಿರುವ ಬಗ್ಗೆ ಮಾಹಿತಿ ನೀಡದಿರುವ ಕಾರಣವನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ.

ಭಾರತದಲ್ಲಿ ಚೀತಾಗಳ ಸಂಖ್ಯೆ ಪುನರುಜ್ಜೀವನಗೊಳಿಸುವ ಮಹತ್ವಾಕಾಂಕ್ಷೆಯ ಯೋಜನೆಯ ಭಾಗವಾಗಿ ಕೆಎನ್‌ಪಿ ಚೀತಾಗಳನ್ನು ಆಫ್ರಿಕಾದಿಂದ ಸ್ಥಳಾಂತರಿಸಲಾಗಿದೆ.ಅಧಿಕೃತ ಪ್ರಕಟಣೆಯ ಪ್ರಕಾರ, ಮೇ 23 ರಂದು ಚೀತಾ ಮರಿ ಸಾವನ್ನಪ್ಪಿದ ನಂತರ, ಮೇಲ್ವಿಚಾರಣಾ ತಂಡವು ಹೆಣ್ಣು ಚೀತಾ ಜ್ವಾಲಾ ಮತ್ತು ಅದರ ಉಳಿದ ಮೂರು ಮರಿಗಳ ಚಲನವಲನಗಳ ಮೇಲೆ ಕಣ್ಣಿಟ್ಟಿದೆ.

ಈ ಹಿಂದೆ ಸಿಯಾಯಾ ಎಂದು ಕರೆಯಲ್ಪಡುತ್ತಿದ್ದ ಜ್ವಾಲಾ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನಮೀಬಿಯಾದಿಂದ ಕೆಎನ್‌ಪಿಗೆ ಸ್ಥಳಾಂತರಗೊಂಡ ನಂತರ ಮಾರ್ಚ್ ಕೊನೆಯ ವಾರದಲ್ಲಿ ನಾಲ್ಕು ಮರಿಗಳಿಗೆ ಜನ್ಮ ನೀಡಿತು.ಮೇ 23ರಂದು ಮೂರು ಮರಿಗಳ ಸ್ಥಿತಿ ಚೆನ್ನಾಗಿಲ್ಲ ಎಂಬುದನ್ನು ಪತ್ತೆ ಹಚ್ಚಿದ ನಿಗಾ ತಂಡ ಚಿಕಿತ್ಸೆನೀಡಲು ಶುರು ಮಾಡಿತ್ತು. ಹಗಲಿನ ತಾಪಮಾನವು 46-47 ಡಿಗ್ರಿ ಸೆಲ್ಸಿಯಸ್ ಆಗಿತ್ತು ಎಂದು ಪ್ರಕಟಣೆ ತಿಳಿಸಿದೆ.

ಚಿಕಿತ್ಸೆ ನೀಡಿದರೂ ಎರಡು ಮರಿಗಳನ್ನು ಉಳಿಸಲಾಗಲಿಲ್ಲ ಎಂದು ಅದು ಹೇಳಿದೆ. ನಾಲ್ಕನೇ ಮರಿಯ ಸ್ಥಿತಿ ಸ್ಥಿರವಾಗಿದೆ, ಆದರೆ ಅದು ಕೂಡ ತೀವ್ರ ಚಿಕಿತ್ಸೆಯಲ್ಲಿದೆ ಎಂದು ಅದು ಹೇಳಿದೆ.

ಚೀತಾ ಅಳಿವಿನ 70 ವರ್ಷಗಳ ನಂತರ ಕಳೆದ ವರ್ಷ ಭಾರತದಲ್ಲಿ ಚೀತಾಗಳನ್ನು ಮರು ಪರಿಚಯಿಸಲಾಯಿತು. ನಮೀಬಿಯಾದ ಚೀತಾಗಳಲ್ಲಿ ಒಂದಾದ ಸಾಶಾ ಮಾರ್ಚ್ 27 ರಂದು ಕಿಡ್ನಿ ಸಂಬಂಧಿ ಕಾಯಿಲೆಯಿಂದ ಸಾವನ್ನಪ್ಪಿದ್ದರೆ, ದಕ್ಷಿಣ ಆಫ್ರಿಕಾದ ಉದಯ್ ಎಂಬ ಮತ್ತೊಂದು ಚೀತಾ ಏಪ್ರಿಲ್ 13 ರಂದು ಸಾವನ್ನಪ್ಪಿತು.

ಇದನ್ನೂ ಓದಿ: Cheetah Death: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚೀತಾ ಸಾವು, 3 ತಿಂಗಳಲ್ಲಿ ಮೂರನೇ ಘಟನೆ

ದಕ್ಷಿಣ ಆಫ್ರಿಕಾದಿಂದ ತರಲಾದ ದಕ್ಷ ಎಂಬ ಚೀತಾ, ಈ ವರ್ಷ ಮೇ 9 ರಂದು ಗಂಡು ಚೀತಾ ಜತೆ ಕಾದಾಟ ನಡೆಸಿ ಸಾವಿಗೀಡಾಗಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!