AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Supreme Court: ಕನ್ನಡಿಗ ನ್ಯಾ| ಅರವಿಂದ್ ಕುಮಾರ್ ಸೇರಿ ಇಬ್ಬರು ನೂತನ ಸುಪ್ರೀಂ ನ್ಯಾಯಮೂರ್ತಿಗಳಿಗೆ ಪ್ರಮಾಣವಚನ

Two New Judges Take Oath: ಸುಪ್ರೀಂಕೋರ್ಟ್​ಗೆ ನೂತನ ಜಡ್ಜ್​ಗಳಾಗಿ ನೇಮಕವಾಗಿದ್ದ ನ್ಯಾ| ಅರವಿಂದ್ ಕುಮಾರ್ ಮತ್ತು ನ್ಯಾ| ರಾಜೇಶ್ ಬಿಂದಾಲ್ ಅವರಿಗೆ ಸಿಜೆಐ ಇಂದು ಪ್ರಮಾಣವಚನ ಬೋಧಿಸಿದ್ದಾರೆ. ನ್ಯಾ. ಅರವಿಂದ್ ಕುಮಾರ್ ಕರ್ನಾಟಕ ಮೂಲದವರಾಗಿದ್ದಾರೆ.

Supreme Court: ಕನ್ನಡಿಗ ನ್ಯಾ| ಅರವಿಂದ್ ಕುಮಾರ್ ಸೇರಿ ಇಬ್ಬರು ನೂತನ ಸುಪ್ರೀಂ ನ್ಯಾಯಮೂರ್ತಿಗಳಿಗೆ ಪ್ರಮಾಣವಚನ
ಸುಪ್ರೀಂ ಕೋರ್ಟ್​
TV9 Web
| Edited By: |

Updated on:Feb 13, 2023 | 12:29 PM

Share

ನವದೆಹಲಿ: ಸುಪ್ರೀಂಕೋರ್ಟ್​ಗೆ ನೂತನ ನ್ಯಾಯಮೂರ್ತಿಗಳಾಗಿ (New Supreme Court Judges) ನೇಮಕವಾಗಿದ್ದ ಕರ್ನಾಟಕ ಮೂಲದ ಅರವಿಂದ್ ಕುಮಾರ್ ಮತ್ತು ನ್ಯಾ| ರಾಜೇಶ್ ಬಿಂದಲ್ ಅವರಿಗೆ ಸಿಜೆಐ ಡಿ.ವೈ. ಚಂದ್ರಚೂಡ್ ಸೋಮವಾರ ಪ್ರಮಾಣವಚನ ಬೋಧಿಸಿದರು. ಈ ಇಬ್ಬರ ನೇಮಕದೊಂದಿಗೆ ಸುಪ್ರೀಂಕೋರ್ಟ್​ನಲ್ಲಿ ನ್ಯಾಯಮೂರ್ತಿಗಳ ಸಂಖ್ಯೆ 34 ಆಗಿದೆ. ಅಲ್ಲಿಗೆ ಸರ್ವೋಚ್ಚ ನ್ಯಾಯಾಲಯದಲ್ಲಿ ಪೂರ್ಣಪ್ರಮಾಣದಲ್ಲಿ ಜಡ್ಜ್​ಗಳ ನೇಮಕವಾದಂತಾಗಿದೆ. ಕಳೆದ ವಾರ ನ್ಯಾಯಮೂರ್ತಿಗಳಾದ ಪಂಕಜ್ ಮಿತ್ತಲ್, ಸಂಜಯ್ ಕರೋಲ್, ಪಿವಿ ಸಂಜಯ್ ಕುಮಾರ್, ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಮನೋಜ್ ಮಿಶ್ರಾ, ಈ ಐವರನ್ನು ಸುಪ್ರೀಂಕೋರ್ಟ್​ನ ನೂತನ ನ್ಯಾಯಮೂರ್ತಿಗಳಾಗಿ ನೇಮಿಸಲಾಗಿತ್ತು.

ಸುಪ್ರೀಂಕೋರ್ಟ್​ನ ಕೊಲೆಜಿಯಂ ಜನವರಿ 31ರಂದು ನ್ಯಾ| ರಾಜೇಶ್ ಬಿಂದಲ್ ಮತ್ತು ನ್ಯಾ| ಅರವಿಂದ್ ಕುಮಾರ್ ಅವರನ್ನು ಸರ್ವೋಚ್ಚ ನ್ಯಾಯಾಲಯಕ್ಕೆ ಬಡ್ತಿ ನೀಡಲು ಶಿಫಾರಸು ಮಾಡಿತ್ತು. ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗುವ ಮೊದಲು ನ್ಯಾ| ರಾಜೇಶ್ ಬಿಂದಲ್ ಅವರು ಅಲಹಾಬಾದ್ ಹೈಕೋರ್ಟ್​ನ ಮುಖ್ಯ ನ್ಯಾಯಾಧೀಶರಾಗಿದ್ದರು. ಇನ್ನು, ನ್ಯಾ| ಅರವಿಂದ್ ಕುಮಾರ್ ಅವರು ಕರ್ನಾಟಕದವರಾಗಿದ್ದು, ಗುಜರಾತ್ ಹೈಕೋರ್ಟ್​ನ ಮುಖ್ಯನ್ಯಾಯಮೂರ್ತಿಯಾಗಿ ಕೆಲಸ ಮಾಡುತ್ತಿದ್ದರು.

ಇದನ್ನೂ ಓದಿ: Oommen Chandy: ಮಾಜಿ ಸಿಎಂ ಉಮ್ಮನ್ ಚಾಂಡಿಗೆ ಅನಾರೋಗ್ಯ; ಬೆಂಗಳೂರಿನ ಆಸ್ಪತ್ರೆಗೆ ರವಾನೆ

ದೇಶಾದ್ಯಂತ ಉನ್ನತ ನ್ಯಾಯಾಲಯಗಳಲ್ಲಿ ಜಡ್ಜ್​ಗಳನ್ನು ನೇಮಿಸಲು ಇರುವ ಕೊಲೆಜಿಯಂ ವ್ಯವಸ್ಥೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮತ್ತು ಕೇಂದ್ರ ಸರ್ಕಾರದ ಮಧ್ಯೆ ಭಿನ್ನಾಭಿಪ್ರಾಯ ಇದೆ. ಕೊಲೆಜಿಯಂ ವ್ಯವಸ್ಥೆಯನ್ನು ರದ್ದು ಮಾಡಲು ಹೊರಟಿರುವ ಸರ್ಕಾರ, ಜಡ್ಜ್​ಗಳ ನೇಮಕಾತಿಗೆ ಹೊಸದಾದ ಎನ್​ಜೆಎಸಿ ಕಾನೂನು ರೂಪಿಸಲು ಹೊರಟಿದೆ.

ಇತ್ತೀಚೆಗೆ ಸುಪ್ರೀಂಕೋರ್ಟ್ ಜಡ್ಜ್ ಆಗಿ ನಿವೃತ್ತರಾಗಿದ್ದ ನ್ಯಾ| ನಜೀರ್ ಅವರನ್ನು ಕೇಂದ್ರ ಸರ್ಕಾರ ಆಂಧ್ರ ರಾಜ್ಯಪಾಲರನ್ನಾಗಿ ನೇಮಕ ಮಾಡಿತ್ತು.

Published On - 12:29 pm, Mon, 13 February 23

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ