AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಬೃಹತ್ ಎನ್‌ಕೌಂಟರ್; ಪಾಕ್​ ಮೂಲದ ಇಬ್ಬರು ಜೈಶ್ ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಇಂದು ನಡೆದ ಮಹತ್ವದ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಮೂಲದ 'ಜೈಶ್-ಎ-ಮೊಹಮ್ಮದ್' ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಇದೇ ವೇಳೆ ಕಾರ್ಯಾಚರಣೆಯ ಸ್ಥಳದಲ್ಲಿ ಉಗ್ರರಿಗೆ ನೆರವು ನೀಡುತ್ತಿದ್ದ ಶಂಕಿತ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆಯಲಾಗಿದೆ. ಭಾರತೀಯ ಸೇನೆ, ಜಮ್ಮು-ಕಾಶ್ಮೀರ ಪೊಲೀಸ್ ಮತ್ತು ಸಿಆರ್‌ಪಿಎಫ್ ಜಂಟಿಯಾಗಿ ಉಗ್ರ ನಿಗ್ರಹ ಕಾರ್ಯಾಚರಣೆಯನ್ನು ನಡೆಸಿವೆ.

ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಬೃಹತ್ ಎನ್‌ಕೌಂಟರ್; ಪಾಕ್​ ಮೂಲದ ಇಬ್ಬರು ಜೈಶ್ ಉಗ್ರರ ಹತ್ಯೆ
ಉಧಂಪುರದಲ್ಲಿ ಬೃಹತ್ ಎನ್‌ಕೌಂಟರ್Image Credit source: TV9
ಸುಷ್ಮಾ ಚಕ್ರೆ
|

Updated on: Sep 17, 2026 | 6:21 PM

Share

ಜಮ್ಮು, ಸೆಪ್ಟೆಂಬರ್ 17: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ನಡೆದ ‘ಆಪರೇಷನ್ ಸೋಹನ್’ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳಿಂದ ಹತ್ಯೆಯಾದ ಇಬ್ಬರು ಭಯೋತ್ಪಾದಕರು ಪಾಕಿಸ್ತಾನ ಮೂಲದ ‘ಜೈಶ್-ಎ-ಮೊಹಮ್ಮದ್’ ಸಂಘಟನೆಗೆ ಸೇರಿದವರೆಂದು ಗುರುತಿಸಲಾಗಿದೆ. ಹತ್ಯೆಯಾದ ಉಗ್ರರನ್ನು ಸದ್ದಾಂ ಮತ್ತು ಮುಸ್ತಫಾ ಎಂದು ಗುರುತಿಸಲಾಗಿದ್ದು, ಇವರಿಬ್ಬರೂ ಪಾಕಿಸ್ತಾನಿ ಪ್ರಜೆಗಳು ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ದೃಢಪಡಿಸಿದ್ದಾರೆ.

ಮಾರಕಾಸ್ತ್ರಗಳ ಬೃಹತ್ ಸಂಗ್ರಹ ವಶಕ್ಕೆ:

ಎನ್‌ಕೌಂಟರ್ ನಡೆದ ಸ್ಥಳದಿಂದ ಭದ್ರತಾ ಪಡೆಗಳು ಭಾರಿ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ. ವಶಪಡಿಸಿಕೊಂಡ ವಸ್ತುಗಳಲ್ಲಿ 4 ಮ್ಯಾಗಜೀನ್‌ಗಳನ್ನೊಳಗೊಂಡ 1 ಎಕೆ ಅಸಲ್ಟ್ ರೈಫಲ್, 3 ಮ್ಯಾಗಜೀನ್‌ಗಳನ್ನೊಳಗೊಂಡ 1 ಎಂ4 ಕಾರ್ಬೈನ್, 2 ಮ್ಯಾಗಜೀನ್‌ಗಳನ್ನೊಳಗೊಂಡ 1 ಗ್ಲಾಕ್ ಪಿಸ್ತೂಲ್, 4 ಹ್ಯಾಂಡ್ ಗ್ರೆನೇಡ್ ಕೂಡ ಸೇರಿವೆ.

ಇದನ್ನೂ ಓದಿ: ಭಾರತದ ನಿಷೇಧಿತ ಉಗ್ರ ಸಂಘಟನೆಯ ಪಟ್ಟಿಗೆ ಸೇರಿದ ಪಾಕಿಸ್ತಾನದ ಶಹಜಾದ್ ಭಟ್ಟಿ ನೆಟ್‌ವರ್ಕ್; ಸರ್ಕಾರ ಘೋಷಣೆ

ತೀವ್ರ ಶೋಧ ಕಾರ್ಯಾಚರಣೆ:

ಉಗ್ರರ ಇರುವಿಕೆಯ ಕುರಿತು ನಿಖರ ಮಾಹಿತಿ ಲಭ್ಯವಾದ ನಂತರ ರಾತ್ರಿಯೇ ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದು ಶೋಧ ನಡೆಸಿದಾಗ ಈ ಕಾರ್ಯಾಚರಣೆಯು ಎನ್‌ಕೌಂಟರ್‌ಗೆ ತಿರುಗಿತ್ತು. ಈ ಉಗ್ರರ ಚಲನವಲನಗಳು ಮತ್ತು ಅವರು ನಡೆಸಲು ಯೋಜಿಸಿದ್ದ ದಾಳಿಗಳ ಕುರಿತು ಮತ್ತಷ್ಟು ತನಿಖೆ ಮುಂದುವರಿದಿದೆ. ಈ ಪ್ರದೇಶದಲ್ಲಿ ಇನ್ನುಳಿದ ಉಗ್ರರು ಅಥವಾ ಬೆಂಬಲಿಗರು ಅಡಗಿದ್ದಾರೆಯೇ ಎಂದು ಪತ್ತೆಹಚ್ಚಲು ಡ್ರೋನ್ ಮತ್ತು ಹೆಲಿಕಾಪ್ಟರ್ ತಂತ್ರಜ್ಞಾನ ಬಳಸಿ ಕೂಂಬಿಂಗ್ ಕಾರ್ಯಚರಣೆಯನ್ನು ತೀವ್ರಗೊಳಿಸಲಾಗಿದೆ.

ಇದನ್ನೂ ಓದಿ: ಜಾಗತಿಕ ಸಮುದಾಯವನ್ನು ಮತ್ತೊಮ್ಮೆ ದಾರಿತಪ್ಪಿಸಲು ಪಾಕಿಸ್ತಾನ ಯತ್ನ: ಉಗ್ರ ಮಸೂದ್ ಅಜರ್‌ ತಲೆಗೆ 70 ಲಕ್ಷ ಬಹುಮಾನ ಘೋಷಣೆ

ಸುರಿಯುವ ಮಳೆಯಲ್ಲೂ ಕಾರ್ಯಾಚರಣೆ:

ದಟ್ಟ ಕತ್ತಲು, ಸುರಿಯುವ ಮಳೆ ಮತ್ತು ಕಡಿದಾದ ಗುಡ್ಡಗಾಡು ಪ್ರದೇಶದ ನಡುವೆಯೂ ಸಶಸ್ತ್ರ ಪಡೆಗಳು ಉಗ್ರರಿದ್ದ ಅಡಗುದಾಣವನ್ನು ಯಶಸ್ವಿಯಾಗಿ ಸುತ್ತುವರಿದವು. ತಪ್ಪಿಸಿಕೊಳ್ಳಲು ಯತ್ನಿಸಿದ ಉಗ್ರರು ತೀವ್ರ ಗುಂಡಿನ ದಾಳಿ ನಡೆಸಿದಾಗ, ಪಡೆಗಳು ಪ್ರತ್ಯುತ್ತರ ನೀಡಿ ಇಬ್ಬರನ್ನೂ ಹತ್ಯೆ ಮಾಡಿದವು. ಜಮ್ಮು-ಕಾಶ್ಮೀರದಲ್ಲಿ ಸಕ್ರಿಯವಾಗಿರುವ ಭಯೋತ್ಪಾದನಾ ಜಾಲಗಳನ್ನು ಸಂಪೂರ್ಣವಾಗಿ ಮಟ್ಟಹಾಕಲು ಭದ್ರತಾ ಪಡೆಗಳು ಸತತ ನಿಗ್ರಹ ಕಾರ್ಯಾಚರಣೆಗಳನ್ನು ಕಟ್ಟುನಿಟ್ಟಾಗಿ ಮುಂದುವರಿಸಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್