AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ನೇಪಾಳ ಗಡಿಯಲ್ಲಿ ಇಬ್ಬರು ಪಾಕಿಸ್ತಾನಿ ಪ್ರಜೆಗಳನ್ನು ವಶಕ್ಕೆ ಪಡೆದ ಎಸ್‌ಎಸ್‌ಬಿ

ಪಾನಿ ಟ್ಯಾಂಕಿ ಬಿಒಪಿ (ಬಾರ್ಡರ್ ಔಟ್‌ಪೋಸ್ಟ್) ನಲ್ಲಿ ದಿನನಿತ್ಯದ ತಪಾಸಣೆಯ ಸಮಯದಲ್ಲಿ, ಎಸ್‌ಎಸ್‌ಬಿ ಸಿಬ್ಬಂದಿ ಮಹಿಳೆ ಮತ್ತು ಆಕೆಯ ಮಗನನ್ನು ತಡೆದು ದಾಖಲೆಗಳನ್ನು ಕೇಳಿದರು. ಅವರು ದಾಖಲೆಗಳನ್ನು ನೀಡಲು ವಿಫಲರಾದರು. ಅವರನ್ನು ಪರೀಕ್ಷಿಸಿದಾಗ ಅವರು ಪಾಕಿಸ್ತಾನದ ಪ್ರಜೆಗಳು ಎಂದು ತಿಳಿದುಬಂದಿದೆ.

ಭಾರತ-ನೇಪಾಳ ಗಡಿಯಲ್ಲಿ ಇಬ್ಬರು ಪಾಕಿಸ್ತಾನಿ ಪ್ರಜೆಗಳನ್ನು ವಶಕ್ಕೆ ಪಡೆದ ಎಸ್‌ಎಸ್‌ಬಿ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on: Nov 16, 2023 | 2:50 PM

Share

ದೆಹಲಿ ನವೆಂಬರ್ 16: ಬುಧವಾರ ಸಂಜೆ ಬಿಹಾರದ (Bihar) ಕಿಶನ್‌ಗಂಜ್‌ನಲ್ಲಿರುವ ಭಾರತ-ನೇಪಾಳ ಗಡಿಯ (India-Nepal border) ಮೂಲಕ ಭಾರತದ ಭೂಪ್ರದೇಶವನ್ನು ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾಗ ಮಹಿಳೆ ಮತ್ತು ಆಕೆಯ ಅಪ್ರಾಪ್ತ ಮಗ ಸೇರಿದಂತೆ ಇಬ್ಬರು ಪಾಕಿಸ್ತಾನಿ ಪ್ರಜೆಗಳನ್ನು ಸಶಸ್ತ್ರ ಸೀಮಾ ಬಲ್ (SSB) ಬಂಧಿಸಿದೆ. ಪ್ರಾಥಮಿಕ ತನಿಖೆಯ ನಂತರ, ಹೆಚ್ಚಿನ ತನಿಖೆಗಾಗಿ ಎಸ್‌ಎಸ್‌ಬಿ ಇಬ್ಬರನ್ನು ಕಿಶನ್‌ಗಂಜ್ ಪೊಲೀಸರಿಗೆ ಹಸ್ತಾಂತರಿಸಿದರು.

ಪಾನಿ ಟ್ಯಾಂಕಿ ಬಿಒಪಿ (ಬಾರ್ಡರ್ ಔಟ್‌ಪೋಸ್ಟ್) ನಲ್ಲಿ ದಿನನಿತ್ಯದ ತಪಾಸಣೆಯ ಸಮಯದಲ್ಲಿ, ಎಸ್‌ಎಸ್‌ಬಿ ಸಿಬ್ಬಂದಿ ಮಹಿಳೆ ಮತ್ತು ಆಕೆಯ ಮಗನನ್ನು ತಡೆದು ದಾಖಲೆಗಳನ್ನು ಕೇಳಿದರು. ಅವರು ದಾಖಲೆಗಳನ್ನು ನೀಡಲು ವಿಫಲರಾದರು. ಅವರನ್ನು ಪರೀಕ್ಷಿಸಿದಾಗ ಅವರು ಪಾಕಿಸ್ತಾನದ ಪ್ರಜೆಗಳು ಎಂದು ತಿಳಿದುಬಂದಿದೆ.

ಬಂಧಿತರನ್ನು ಪಾಕಿಸ್ತಾನದ ಸರಾಫಾ ಮಾರ್ಕೆಟ್ ಕರಾಚಿಯ ಗಹನ್ಮಾರ್ ಸ್ಟ್ರೀಟ್ ನಿವಾಸಿಗಳು ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯ ನಂತರ ನಾವು ಇಬ್ಬರನ್ನು ಕಿಶನ್‌ಗಂಜ್ ಪೊಲೀಸರಿಗೆ ಹಸ್ತಾಂತರಿಸಿದ್ದೇವೆ ಎಂದು ಹೆಸರು ಹೇಳಲು ಬಯಸದ ಎಸ್‌ಎಸ್‌ಬಿ ಅಧಿಕಾರಿಗಳು ಹೇಳಿದ್ದಾರೆ. ಅವರು ನೇಪಾಳದಿಂದ ಬರುತ್ತಿದ್ದರು ಮತ್ತು ನಾವು ಅವರನ್ನು ತಡೆದು ದಾಖಲೆಗಳನ್ನು ಕೇಳಿದ್ದೇವೆ. ನಾವು ಅವರನ್ನು ಬಂಧಿಸಿದ್ದೇವೆ ಎಂದಿದ್ದಾರೆ ಅವರು.

“ಪಾಕಿಸ್ತಾನದ ಪ್ರಜೆಗಳ ವಿಚಾರಣೆ ನಡೆಯುತ್ತಿದೆ. ಅವರು ಭಾರತಕ್ಕೆ ಪ್ರವೇಶಿಸಲು ಸಂಬಂಧಿಸಿದಂತೆ ಅವರ ನಿಜವಾದ ಉದ್ದೇಶವನ್ನು ನಾವು ಕಂಡುಕೊಂಡಿಲ್ಲ” ಎಂದು ಕಿಶನ್‌ಗಂಜ್‌ನ ಗಲ್ಗಾಲಿಯಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ರಾಹುಲ್ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನದ ಈ ಬ್ಯೂಟಿಫುಲ್ ಹೀರೋಯಿನ್​ಗಳ ಬಗ್ಗೆ ನಿಮಗೆಷ್ಟು ಗೊತ್ತು?

ಏತನ್ಮಧ್ಯೆ, ಅವರ ಅಕ್ರಮ ಪ್ರವೇಶಕ್ಕೆ ಸಂಬಂಧಿಸಿದಂತೆ ಎಸ್‌ಎಸ್‌ಬಿ ಅಧಿಕಾರಿಯ ಹೇಳಿಕೆಯ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ (ಪ್ರಥಮ ಮಾಹಿತಿ ವರದಿ) ದಾಖಲಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು