AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ಮೇಲೆ ಹಲ್ಲೆ ನಡೆಸಿ ಬಾಲಾಪರಾಧಿ ಗೃಹದಿಂದ ಪಾಕ್ ಕೈದಿಗಳು ಪರಾರಿ

ಜಮ್ಮುವಿನ ಬಾಲಾಪರಾಧಿ ಗೃಹದಿಂದ ಇಬ್ಬರು ಪಾಕಿಸ್ತಾನಿ ಸೇರಿದಂತೆ ಮೂವರು ಕೈದಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಗಾಯಗೊಂಡ ಇಬ್ಬರು ಪೊಲೀಸರು ಆಸ್ಪತ್ರೆ ಸೇರಿದ್ದಾರೆ. ಈ ಘಟನೆ ಭಾರತದ ಜೈಲುಗಳಲ್ಲಿನ ತೀವ್ರ ಜನದಟ್ಟಣೆ ಮತ್ತು ಕಳಪೆ ಮೂಲಸೌಕರ್ಯದ ಸಮಸ್ಯೆಯನ್ನು ಎತ್ತಿ ಹಿಡಿಯುತ್ತದೆ. ದೇಶಾದ್ಯಂತ ಜೈಲುಗಳು ತಮ್ಮ ಸಾಮರ್ಥ್ಯಕ್ಕಿಂತ ಹೆಚ್ಚಾಗಿ ಕಾರ್ಯನಿರ್ವಹಿಸುತ್ತಿದ್ದು, ವಿಚಾರಣಾಧೀನ ಕೈದಿಗಳ ಸಂಖ್ಯೆ ಅಧಿಕವಾಗಿದೆ. ತನಿಖೆ ಮುಂದುವರೆದಿದೆ.

ಪೊಲೀಸರ ಮೇಲೆ ಹಲ್ಲೆ ನಡೆಸಿ ಬಾಲಾಪರಾಧಿ ಗೃಹದಿಂದ ಪಾಕ್ ಕೈದಿಗಳು ಪರಾರಿ
ಕೈದಿ-ಸಾಂದರ್ಭಿಕ ಚಿತ್ರImage Credit source: Telegraph India
ನಯನಾ ರಾಜೀವ್
|

Updated on: Feb 17, 2026 | 7:28 AM

Share

ಶ್ರೀನಗರ, ಫೆಬ್ರವರಿ 17: ಜಮ್ಮು ಮತ್ತು ಕಾಶ್ಮೀರದ ಬಾಲಾಪರಾಧಿ ಗೃಹದಿಂದ ಪಾಕಿಸ್ತಾನಿ ಕೈದಿ(Prisoner)ಗಳು ಪರಾರಿಯಾಗಿರುವ ಘಟನೆ ನಡೆದಿದೆ. ಪೊಲೀಸರ ಮೇಲೆ ಹಲ್ಲೆ ನಡೆಸಿ ಇಬ್ಬರು ಪಾಕಿಸ್ತಾನಿಗಳು ಸೇರಿ ಮೂವರು ಕೈದಿಗಳು ಜೈಲಿಂದ ಓಡಿ ಹೋಗಿದ್ದಾರೆ. ಮೂಲಗಳ ಪ್ರಕಾರ ಸಂಜೆ 5.05ರ ಸುಮಾರಿಗೆ ಜಮ್ಮುವಿನ ಆರ್​​ಎಸ್​ ಪುರದಲ್ಲಿರುವ ಜೈಲಿನಲ್ಲಿ ನಿಯೋಜಿಸಲಾಗಿದ್ದ ಪೊಲೀಸರ ಮೇಲೆ ದಾಳಿ ಮಾಡಿ ಮೂವರು ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗಳಾದ ಎಸ್‌ಪಿಒ ವಿನಯ್ ಕುಮಾರ್ ಮತ್ತು ಹೆಡ್ ಕಾನ್‌ಸ್ಟೆಬಲ್ ಪರ್ವೀನ್ ಕುಮಾರ್ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗೆಂದು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.ತಪ್ಪಿಸಿಕೊಂಡ ಕೈದಿಗಳನ್ನು ಅಹ್ಸಾನ್ ಅನ್ವರ್ ಮತ್ತು ಮೊಹಮ್ಮದ್ ಸನಾವುಲ್ಲಾ (ಇಬ್ಬರೂ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನಿವಾಸಿಗಳು) ಮತ್ತು ಜಮ್ಮುವಿನ ನಿವಾಸಿ ಕರಣ್‌ಜಿತ್ ಸಿಂಗ್ ಅಲಿಯಾಸ್ ಗುಗ್ಗಾ ಎಂದು ಗುರುತಿಸಲಾಗಿದೆ.

ಗುಪ್ತಚರ ಮೂಲಗಳ ಪ್ರಕಾರ, ಇಬ್ಬರು ಪಾಕಿಸ್ತಾನಿ ಹುಡುಗರು ಭಾರತದ ಗಡಿಯೊಳಗೆ ಗೊತ್ತಿಲ್ಲದೆ ಬಂದಿದ್ದಾರೆ ಮತ್ತು ಅವರಿಗೆ ಹಾಗೂ ಉಗ್ರರ ಜತೆ ಯಾವುದೇ ನಂಟಿಲ್ಲ. ಬಾಲಕರ ಪತ್ತೆಗೆ ಪೊಲೀಸರು ಶೋಧ ಆರಂಭಿಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಮತ್ತಷ್ಟು ಓದಿ: ಜೈಲಿನಲ್ಲಿರುವ ಮಗನಿಗೆ ಖಾಸಗಿ ಭಾಗದಲ್ಲಿ ಮೊಬೈಲ್​ ಕೊಂಡೊಯ್ದು ಸಿಕ್ಕಿಬಿದ್ದ ತಾಯಿ

ಭಾರತದಾದ್ಯಂತ 300 ಕ್ಕೂ ಹೆಚ್ಚು ಜೈಲುಗಳು ಅವುಗಳ ಸಾಮರ್ಥ್ಯಕ್ಕಿಂತ ಎರಡು ಪಟ್ಟು ಹೆಚ್ಚು ಕಾರ್ಯನಿರ್ವಹಿಸುತ್ತಿವೆ, ಮಲಗುವ ಸ್ಥಳ, ಆರೋಗ್ಯ ರಕ್ಷಣೆ ಮತ್ತು ಮೇಲ್ವಿಚಾರಣೆಯಂತಹ ಮೂಲಭೂತ ವಿಷಯಗಳು ಸಹ ಕಷ್ಟಕರವಾಗುತ್ತಿವೆ. ದೆಹಲಿಯ ಕೇಂದ್ರ ಜೈಲು ಸಂಖ್ಯೆ 4 ರಲ್ಲಿ, 2020 ರಿಂದ ಜನದಟ್ಟಣೆ ಸ್ಥಿರವಾಗಿ ಏರಿದೆ, 2023 ರಲ್ಲಿ 550% ತಲುಪಿದೆ.

ಬಿಹಾರದ ದಾನಾಪುರ್ ಉಪ-ಜೈಲು ಮತ್ತು ಜಾರ್ಖಂಡ್‌ನ ಗುಮ್ಲಾ ಜಿಲ್ಲಾ ಜೈಲು 300% ಕ್ಕಿಂತ ಹೆಚ್ಚುಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ, ಪಶ್ಚಿಮ ಬಂಗಾಳದ ಕಂಡಿ ಉಪ-ಜೈಲು 2022 ರಲ್ಲಿ 450% ಕ್ಕೆ ತಲುಪಿದೆ.ಜೈಲುಗಳು ಇಷ್ಟೊಂದು ಜನದಟ್ಟಣೆಯಿಂದ ಇರುವುದಕ್ಕೆ ದೊಡ್ಡ ಕಾರಣ ಶಿಕ್ಷೆಯ ಹೆಚ್ಚಳವಲ್ಲ, ಬದಲಾಗಿ ವಿಳಂಬ. ಭಾರತದ ಜೈಲು ಜನಸಂಖ್ಯೆಯ ಸುಮಾರು 76% ರಷ್ಟು ವಿಚಾರಣಾಧೀನ ಕೈದಿಗಳಾಗಿದ್ದು, ಅವರಲ್ಲಿ ಹಲವರು ಯಾವುದೇ ಅಪರಾಧದಲ್ಲಿ ತಪ್ಪಿತಸ್ಥರೆಂದು ಕಂಡುಬಂದಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕೋರ್ಟ್ ತೀರ್ಪಿನ ಬಳಿಕ ಖಡಕ್ ನಿರ್ಧಾರ ತೆಗೆದುಕೊಂಡ ಯಶ್ ತಾಯಿ ಪುಷ್ಪಾ
ಕೋರ್ಟ್ ತೀರ್ಪಿನ ಬಳಿಕ ಖಡಕ್ ನಿರ್ಧಾರ ತೆಗೆದುಕೊಂಡ ಯಶ್ ತಾಯಿ ಪುಷ್ಪಾ
ದಾರಿ ಬಿಡುವ ವಿಚಾರಕ್ಕೆ ಬಸ್- ಆಟೋ ಚಾಲಕ ಹೊಡೆದಾಟ, ವಿಡಿಯೋ ನೋಡಿ
ದಾರಿ ಬಿಡುವ ವಿಚಾರಕ್ಕೆ ಬಸ್- ಆಟೋ ಚಾಲಕ ಹೊಡೆದಾಟ, ವಿಡಿಯೋ ನೋಡಿ
ಬಾಲ್ಕನಿಯಲ್ಲಿ ಬಟ್ಟೆ ಒಣಗಿಸುವಾಗ ಕಾಲು ಜಾರಿ ಕೆಳಗೆ ಬಿದ್ದ ಮಹಿಳೆ
ಬಾಲ್ಕನಿಯಲ್ಲಿ ಬಟ್ಟೆ ಒಣಗಿಸುವಾಗ ಕಾಲು ಜಾರಿ ಕೆಳಗೆ ಬಿದ್ದ ಮಹಿಳೆ
ನಾಳೆ ವರ್ಷದ ಮೊದಲ ಸೂರ್ಯಗ್ರಹಣ: ಯಾವ ರಾಶಿಗೆ ಶುಭ? ಯಾರಿಗೆ ಅಶುಭ?
ನಾಳೆ ವರ್ಷದ ಮೊದಲ ಸೂರ್ಯಗ್ರಹಣ: ಯಾವ ರಾಶಿಗೆ ಶುಭ? ಯಾರಿಗೆ ಅಶುಭ?
‘ಬಿಲ್ಲ ರಂಗ ಬಾಷ’ ತಡ ಆಗ್ತಿರೋದಕ್ಕೆ ರಿಯಲ್ ಕಾರಣ ತಿಳಿಸಿದ ಕಿಚ್ಚ ಸುದೀಪ್
‘ಬಿಲ್ಲ ರಂಗ ಬಾಷ’ ತಡ ಆಗ್ತಿರೋದಕ್ಕೆ ರಿಯಲ್ ಕಾರಣ ತಿಳಿಸಿದ ಕಿಚ್ಚ ಸುದೀಪ್
ಜೈಲಿನಲ್ಲಿ ದರ್ಶನ್ ನೋಡಿ ಖುಷಿಯಿಂದ ವಾಪಸ್ ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ನೋಡಿ ಖುಷಿಯಿಂದ ವಾಪಸ್ ಹೊರಟ ವಿಜಯಲಕ್ಷ್ಮಿ
ಮಗಳ ಮದುವೆ ಸಾಲ ತೀರಿಸೋಕೆ ದುಡಿಯುತ್ತಿದ್ದ ಅಪ್ಪ-ಮಗ ಒಟ್ಟಿಗೆ ಸಾವು
ಮಗಳ ಮದುವೆ ಸಾಲ ತೀರಿಸೋಕೆ ದುಡಿಯುತ್ತಿದ್ದ ಅಪ್ಪ-ಮಗ ಒಟ್ಟಿಗೆ ಸಾವು
ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್
ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್
ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ
ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ
ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್
ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್