Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾತಂತ್ರ್ಯ ದಿನದಂದು ರಾಷ್ಟ್ರಧ್ವಜಾರೋಹಣ ಮಾಡುವಾಗ ವೇಳೆ ವಿದ್ಯುತ್ ಸ್ಪರ್ಶದಿಂದ ಇಬ್ಬರು ಸಾವು!

ಜಾರ್ಖಂಡ್‌ನಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವಾಗ ಎರಡು ಕಡೆ ಇಬ್ಬರು ವ್ಯಕ್ತಿಗಳಿಗೆ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ, ಇದರ ಹಿಂದಿನ ದಿನವು ಇಂತಹ ಘಟನೆ ನಡೆದಿದ್ದು ಸಾವಿನ ಸಂಖ್ಯೆ ಐದಕ್ಕೆ ಏರಿದೆ. ಎಂದು ಪೊಲೀಸರು ತಿಳಿಸಿದ್ದಾರೆ.

ಸ್ವಾತಂತ್ರ್ಯ ದಿನದಂದು ರಾಷ್ಟ್ರಧ್ವಜಾರೋಹಣ ಮಾಡುವಾಗ ವೇಳೆ ವಿದ್ಯುತ್ ಸ್ಪರ್ಶದಿಂದ ಇಬ್ಬರು ಸಾವು!
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Aug 15, 2022 | 5:44 PM

ರಾಂಚಿ: 75ನೇ ಸ್ವಾತಂತ್ರ್ಯ ದಿನದಂದು ಜಾರ್ಖಂಡ್‌ನಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವಾಗ ಎರಡು ಕಡೆ ಇಬ್ಬರು ವ್ಯಕ್ತಿಗಳಿಗೆ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ, ಇದರ ಹಿಂದಿನ ದಿನವು ಇಂತಹ ಘಟನೆ ನಡೆದಿದ್ದು ಸಾವಿನ ಸಂಖ್ಯೆ ಐದಕ್ಕೆ ಏರಿದೆ. ಎಂದು ಪೊಲೀಸರು ತಿಳಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ಹಿಂದಿನ ದಿನ (ಭಾನುವಾರ) ರಾಂಚಿಯಲ್ಲಿ ಇಂತಹದೇ ಘಟನೆ ನಡೆದಿದೆ ಒಂದೇ ಕುಟುಂಬದ ಮೂವರು ಈ ಘಟನೆಯಿಂದ ಸಾವನ್ನಪ್ಪಿದ್ದಾರೆ. ಬೊಕಾರೊ ಮತ್ತು ಧನ್‌ಬಾದ್ ಜಿಲ್ಲೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವಾಗ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ.

ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್ (ಬಿಸಿಸಿಎಲ್) ಅಡಿಯಲ್ಲಿ ನ್ಯೂ ಆಕಾಶಕಿನಾರಿ ಕಾಲೇರಿಯ ಐವರು ಕಲ್ಲಿದ್ದಲು ಕಾರ್ಮಿಕರು ಧನ್‌ಬಾದ್ ಜಿಲ್ಲೆಯ ಕತ್ರಾಸ್ ಪೊಲೀಸ್ ಠಾಣಾ ಪ್ರದೇಶದಲ್ಲಿ ಧ್ವಜಾರೋಹಣಕ್ಕಾಗಿ ಕಂಬವನ್ನು ನಿರ್ಮಿಸುವಾಗ ಹೈಟೆನ್ಷನ್ ತಂತಿಯ ಸ್ಪರ್ಶಗೊಂಡು ಸಾವನ್ನಪ್ಪಿದ್ದಾರೆ. ಇದರಿಂದ 38 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದು, ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಷ್ಟ್ರಧ್ವಜ ಬಿಚ್ಚಲು ನಿರ್ಮಿಸುತ್ತಿದ್ದ ಕಂಬವೊಂದು ಹೈಟೆನ್ಷನ್ ತಂತಿಗೆ ತಗುಲಿ ಈ ಘಟನೆ ನಡೆದಿದೆ. ಕತ್ರಾಸ್ ಪೊಲೀಸ್ ಠಾಣೆ ಪ್ರಭಾರಿ ರಣಧೀರ್ ಕುಮಾರ್ ತಿಳಿಸಿದ್ದಾರೆ.

ಬೊಕಾರೊ ಪೊಲೀಸ್ ಲೈನ್‌ನಲ್ಲಿಯು ಇದೇ ರೀತಿಯ ಘಟನೆ ನಡೆದಿದ್ದು, ಧ್ವಜ ಹಾಕುವ ವೇಳೆ 40 ವರ್ಷದ ಕ್ಲೀನರ್ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ. ಪೋಲ್ ಹೈ-ಟೆನ್ಷನ್ ತಂತಿಯ ಸ್ಪರ್ಶದಿಂದ ವ್ಯಕ್ತಿ ಸಾವನ್ನಪ್ಪಿದ್ದಾನೆ, ಆದರೆ ಪೊಲೀಸ್ ಅಸೋಸಿಯೇಶನ್‌ನ ಕಾನ್‌ಸ್ಟೆಬಲ್ ಮತ್ತು ಅಧಿಕಾರಿಯೊಬ್ಬರು ಘಟನೆಯಲ್ಲಿ ಸಣ್ಣಪುಟ್ಟ ಗಾಯಗೊಂಡಿದ್ದಾರೆ ಎಂದು ಬೊಕಾರೊ ನಗರದ ಉಪ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ
Image
Independence Day 2022: 75 ಅಡಿ ಉದ್ದದ ಪರಿಸರ ಸ್ನೇಹಿ ತ್ರಿವರ್ಣ ಧ್ವಜ ರಚಿಸಿದ ವಿಕಲಚೇತನ ಯುವಕರು
Image
Independence Day 2022: ಭಾರತ ಪ್ರಜಾಪ್ರಭುತ್ವದ ತಾಯಿ, ವೈವಿಧ್ಯತೆಯೇ ಅದರ ಶಕ್ತಿ; ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ
Image
Independence Day 2022: ಆಗಸ್ಟ್ 15ರಂದೇ ಭಾರತ ಸ್ವತಂತ್ರ್ಯದಿನವನ್ನು ಆಚರಿಸುವುದೇಕೆ? ಈ ದಿನದ ಇತಿಹಾಸ, ಮಹತ್ವವೇನು?

ಹಿಂದಿನ ದಿನ ರಾಂಚಿ ಜಿಲ್ಲೆಯ ಕಾಂಕೆ ಬ್ಲಾಕ್‌ನ ಅರ್ಸಂಡೆ ಗ್ರಾಮದಲ್ಲಿ ತಮ್ಮ ಮನೆಯ ಮೇಲ್ಛಾವಣಿಯ ಮೇಲೆ ತ್ರಿವರ್ಣ ಧ್ವಜವನ್ನು ಸರಿಪಡಿಸುವ ಸಂದರ್ಭದಲ್ಲಿ ಒಂದೇ ಕುಟುಂಬದ ಮೂವರು ಸದಸ್ಯರು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದರು.

Published On - 5:44 pm, Mon, 15 August 22

ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್