AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾತಂತ್ರ್ಯ ದಿನದಂದು ರಾಷ್ಟ್ರಧ್ವಜಾರೋಹಣ ಮಾಡುವಾಗ ವೇಳೆ ವಿದ್ಯುತ್ ಸ್ಪರ್ಶದಿಂದ ಇಬ್ಬರು ಸಾವು!

ಜಾರ್ಖಂಡ್‌ನಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವಾಗ ಎರಡು ಕಡೆ ಇಬ್ಬರು ವ್ಯಕ್ತಿಗಳಿಗೆ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ, ಇದರ ಹಿಂದಿನ ದಿನವು ಇಂತಹ ಘಟನೆ ನಡೆದಿದ್ದು ಸಾವಿನ ಸಂಖ್ಯೆ ಐದಕ್ಕೆ ಏರಿದೆ. ಎಂದು ಪೊಲೀಸರು ತಿಳಿಸಿದ್ದಾರೆ.

ಸ್ವಾತಂತ್ರ್ಯ ದಿನದಂದು ರಾಷ್ಟ್ರಧ್ವಜಾರೋಹಣ ಮಾಡುವಾಗ ವೇಳೆ ವಿದ್ಯುತ್ ಸ್ಪರ್ಶದಿಂದ ಇಬ್ಬರು ಸಾವು!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 15, 2022 | 5:44 PM

Share

ರಾಂಚಿ: 75ನೇ ಸ್ವಾತಂತ್ರ್ಯ ದಿನದಂದು ಜಾರ್ಖಂಡ್‌ನಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವಾಗ ಎರಡು ಕಡೆ ಇಬ್ಬರು ವ್ಯಕ್ತಿಗಳಿಗೆ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ, ಇದರ ಹಿಂದಿನ ದಿನವು ಇಂತಹ ಘಟನೆ ನಡೆದಿದ್ದು ಸಾವಿನ ಸಂಖ್ಯೆ ಐದಕ್ಕೆ ಏರಿದೆ. ಎಂದು ಪೊಲೀಸರು ತಿಳಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ಹಿಂದಿನ ದಿನ (ಭಾನುವಾರ) ರಾಂಚಿಯಲ್ಲಿ ಇಂತಹದೇ ಘಟನೆ ನಡೆದಿದೆ ಒಂದೇ ಕುಟುಂಬದ ಮೂವರು ಈ ಘಟನೆಯಿಂದ ಸಾವನ್ನಪ್ಪಿದ್ದಾರೆ. ಬೊಕಾರೊ ಮತ್ತು ಧನ್‌ಬಾದ್ ಜಿಲ್ಲೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವಾಗ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ.

ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್ (ಬಿಸಿಸಿಎಲ್) ಅಡಿಯಲ್ಲಿ ನ್ಯೂ ಆಕಾಶಕಿನಾರಿ ಕಾಲೇರಿಯ ಐವರು ಕಲ್ಲಿದ್ದಲು ಕಾರ್ಮಿಕರು ಧನ್‌ಬಾದ್ ಜಿಲ್ಲೆಯ ಕತ್ರಾಸ್ ಪೊಲೀಸ್ ಠಾಣಾ ಪ್ರದೇಶದಲ್ಲಿ ಧ್ವಜಾರೋಹಣಕ್ಕಾಗಿ ಕಂಬವನ್ನು ನಿರ್ಮಿಸುವಾಗ ಹೈಟೆನ್ಷನ್ ತಂತಿಯ ಸ್ಪರ್ಶಗೊಂಡು ಸಾವನ್ನಪ್ಪಿದ್ದಾರೆ. ಇದರಿಂದ 38 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದು, ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಷ್ಟ್ರಧ್ವಜ ಬಿಚ್ಚಲು ನಿರ್ಮಿಸುತ್ತಿದ್ದ ಕಂಬವೊಂದು ಹೈಟೆನ್ಷನ್ ತಂತಿಗೆ ತಗುಲಿ ಈ ಘಟನೆ ನಡೆದಿದೆ. ಕತ್ರಾಸ್ ಪೊಲೀಸ್ ಠಾಣೆ ಪ್ರಭಾರಿ ರಣಧೀರ್ ಕುಮಾರ್ ತಿಳಿಸಿದ್ದಾರೆ.

ಬೊಕಾರೊ ಪೊಲೀಸ್ ಲೈನ್‌ನಲ್ಲಿಯು ಇದೇ ರೀತಿಯ ಘಟನೆ ನಡೆದಿದ್ದು, ಧ್ವಜ ಹಾಕುವ ವೇಳೆ 40 ವರ್ಷದ ಕ್ಲೀನರ್ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ. ಪೋಲ್ ಹೈ-ಟೆನ್ಷನ್ ತಂತಿಯ ಸ್ಪರ್ಶದಿಂದ ವ್ಯಕ್ತಿ ಸಾವನ್ನಪ್ಪಿದ್ದಾನೆ, ಆದರೆ ಪೊಲೀಸ್ ಅಸೋಸಿಯೇಶನ್‌ನ ಕಾನ್‌ಸ್ಟೆಬಲ್ ಮತ್ತು ಅಧಿಕಾರಿಯೊಬ್ಬರು ಘಟನೆಯಲ್ಲಿ ಸಣ್ಣಪುಟ್ಟ ಗಾಯಗೊಂಡಿದ್ದಾರೆ ಎಂದು ಬೊಕಾರೊ ನಗರದ ಉಪ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ
Image
Independence Day 2022: 75 ಅಡಿ ಉದ್ದದ ಪರಿಸರ ಸ್ನೇಹಿ ತ್ರಿವರ್ಣ ಧ್ವಜ ರಚಿಸಿದ ವಿಕಲಚೇತನ ಯುವಕರು
Image
Independence Day 2022: ಭಾರತ ಪ್ರಜಾಪ್ರಭುತ್ವದ ತಾಯಿ, ವೈವಿಧ್ಯತೆಯೇ ಅದರ ಶಕ್ತಿ; ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ
Image
Independence Day 2022: ಆಗಸ್ಟ್ 15ರಂದೇ ಭಾರತ ಸ್ವತಂತ್ರ್ಯದಿನವನ್ನು ಆಚರಿಸುವುದೇಕೆ? ಈ ದಿನದ ಇತಿಹಾಸ, ಮಹತ್ವವೇನು?

ಹಿಂದಿನ ದಿನ ರಾಂಚಿ ಜಿಲ್ಲೆಯ ಕಾಂಕೆ ಬ್ಲಾಕ್‌ನ ಅರ್ಸಂಡೆ ಗ್ರಾಮದಲ್ಲಿ ತಮ್ಮ ಮನೆಯ ಮೇಲ್ಛಾವಣಿಯ ಮೇಲೆ ತ್ರಿವರ್ಣ ಧ್ವಜವನ್ನು ಸರಿಪಡಿಸುವ ಸಂದರ್ಭದಲ್ಲಿ ಒಂದೇ ಕುಟುಂಬದ ಮೂವರು ಸದಸ್ಯರು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದರು.

Published On - 5:44 pm, Mon, 15 August 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ