AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Noida: ಕೋಣೆಯಲ್ಲಿ ಕಾಯಿಲ್ ಹೀಟರ್ ಹಾಕಿ ಮಲಗಿದ್ದ ಇಬ್ಬರು ಉಸಿರುಗಟ್ಟಿ ಸಾವು

ಉತ್ತರ ಪ್ರದೇಶದ ನೋಯ್ಡಾದಲ್ಲಿ ಭಾರೀ ಚಳಿ ಹಿನ್ನೆಲೆ ರಾತ್ರಿ ವೇಳೆ ಕೊಠಡಿಯಲ್ಲಿ ಕಾಯಿಲ್ ಹೀಟರ್ ಹಾಕಿ ಕುಟುಂಬದ ಮೂವರು ನಿದ್ರಿಸಿದ್ದರು. ಆದರೆ, ತಂದೆ ಮತ್ತು ಮಗ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮಗಳು ಉಸಿರಾಟದ ಸಮಸ್ಯೆಯಿಂದ ಎದುರಿಸುತ್ತಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನೋಯ್ಡಾದ ಸೆಕ್ಟರ್ -63 ರ ಮನೆಯಲ್ಲಿ ಈ ಘಟನೆ ನಡೆದಿದೆ.

Noida: ಕೋಣೆಯಲ್ಲಿ ಕಾಯಿಲ್ ಹೀಟರ್ ಹಾಕಿ ಮಲಗಿದ್ದ ಇಬ್ಬರು ಉಸಿರುಗಟ್ಟಿ ಸಾವು
ಕೋಣೆಯಲ್ಲಿ ಕಾಯಿಲ್ ಹೀಟರ್ ಹಾಕಿ ಮಲಗಿದ್ದ ಇಬ್ಬರು ಉಸಿರುಗಟ್ಟಿ ಸಾವು
TV9 Web
| Edited By: Rakesh Nayak Manchi|

Updated on: Jan 26, 2024 | 8:32 PM

Share

ನೋಯ್ಡಾ, ಜ.26: ರಾತ್ರಿಯ ಚಳಿಯನ್ನು ನಿಗ್ರಹಿಸಲು ಬೆಡ್​ರೂಮ್​ನಲ್ಲಿ ಕಾಯಿಲ್ ಹೀಟರ್ ಹಾಕಿಕೊಂಡು ನಿದ್ರಿಸಿದ್ದ ತಂದೆ ಮತ್ತು ಮಗ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶ ರಾಜ್ಯದ ನೋಯ್ಡಾದ (Noida) ಸೆಕ್ಟರ್ -63 ರ ಮನೆಯೊಂದರಲ್ಲಿ ನಡೆದಿದೆ. ಘಟನೆಯಲ್ಲಿ ಮಗಳು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಛಿಜಾರ್ಸಿ ಪ್ರದೇಶದಲ್ಲಿನ ಮನೆಯೊಂದರಲ್ಲಿ ಮೂವರು ತಮ್ಮ ಕೋಣೆಯಲ್ಲಿ ಕಾಯಿಲ್ ಹೀಟರ್ ಹಾಕಿಕೊಂಡು ಮಲಗಿದ್ದರು. ಈ ಹೀಟರ್​ನಿಂದ ಕಾರ್ಬನ್ ಮಾನಾಕ್ಸೈಡ್ ಹೊಗೆ ಬಿಡುಗಡೆಯಾಗಿ ಉಸಿರುಗಟ್ಟಿಸಿ ಇಬ್ಬರು ಸಾವನ್ನಪ್ಪಿದ್ದಾರೆ.

ಶುಕ್ರವಾರ ಬೆಳಗ್ಗೆ ಮನೆಯವರಿಗೆ ಯಾವುದೇ ಚಟುವಟಿಕೆ ಕಂಡು ಬರದ ಹಿನ್ನೆಲೆ ನೆರೆಹೊರೆಯವರು ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ವ್ಯಕ್ತಿ, ಅವನ ಮಗ ಹಾಗೂ ಮಗಳು ಕೋಣೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಿದ್ದನ್ನು ನೀಡಿದ ನೆರೆಹೊರೆಯವು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಸಿದ್ದಾರೆ. ಆದರೆ ಇಬ್ಬರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದು, ಯುವತಿಗೆ ಚಿಕಿತ್ಸೆ ಮುಂದುವರಿಸಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಜ್ಯುವೆಲರಿ ಮಾಲೀಕನ ಮೇಲೆ ಗುಂಡಿನ ದಾಳಿ, ಚಿನ್ನಾಭರಣ, ಹಣ ತುಂಬಿದ ಬ್ಯಾಗ್ ದೋಚಿ ಪರಾರಿ

ಚಳಿಗಾಲದಲ್ಲಿ ಕಾಯಿಲ್ ಹೀಟರ್ ಬಳಸದಂತೆ ವೈದ್ಯರು ಸಲಹೆ ನೀಡಿದ್ದಾರೆ. ಏಕೆಂದರೆ ಅದು ಇಂಗಾಲದ ಮಾನಾಕ್ಸೈಡ್ ಹೊರಸೂಸುವಿಕೆಯನ್ನು ಉಂಟುಮಾಡುತ್ತವೆ, ಅದು ಮಾರಕವಾಗಬಹುದು. ಅಂತಹ ಹೀಟರ್ ಅನ್ನು ಬಳಸಬೇಕಾದರೆ, ಕೋಣೆಯ ಕಿಟಕಿ ಬಾಗಿಲುಗಳನ್ನು ತೆರೆದಿಡುವಂತೆ ಸಲಹೆ ನೀಡಿದರು.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್