Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀನಗರದಲ್ಲಿ ಹಾಡಹಗಲೇ ಉಗ್ರನ ದಾಳಿ; ಇಬ್ಬರು ಪೊಲೀಸ್ ಸಿಬ್ಬಂದಿ ಬಲಿ

ಉಗ್ರ ದಾಳಿಗೆ ಬಲಿಯಾದ ಪೊಲೀಸ್ ಸಿಬ್ಬಂದಿಗಳನ್ನು ಸುಹೇಲ್ ಮತ್ತು ಮೊಹಮದ್ ಯೂಸುಫ್ ಎಂದು ಗುರುತಿಸಲಾಗಿದ್ದು, ಈ ಪೈಕಿ ಸುಹೇಲ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಶ್ರೀನಗರದಲ್ಲಿ ಹಾಡಹಗಲೇ ಉಗ್ರನ ದಾಳಿ; ಇಬ್ಬರು ಪೊಲೀಸ್ ಸಿಬ್ಬಂದಿ ಬಲಿ
ಸಿಸಿಟಿವಿಯಲ್ಲಿ ದಾಖಲಾಗಿರುವ ಉಗ್ರನ ಚಿತ್ರ
Follow us
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Feb 19, 2021 | 5:30 PM

ಶ್ರೀನಗರ: ಕಣಿವೆ ರಾಜ್ಯದಲ್ಲಿ ನಿರಾಯುಧರಾಗಿದ್ದ ಇಬ್ಬರು ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಹಾಡಹಗಲೇ ಉಗ್ರನೋರ್ವನ ದಾಳಿಗೆ ಬಲಿಯಾಗಿದ್ದಾರೆ. ಜನನಿಬಿಡ ಪ್ರದೇಶದಲ್ಲೇ ನಡೆದಿರುವ ದಾಳಿ ಸಿಸಿಟಿವಿಯಲ್ಲೂ ದಾಖಲಾಗಿದ್ದು ಉಗ್ರನನ್ನು ಸಾಕಿಬ್ ಎಂದು ಗುರುತಿಸಲಾಗಿದೆ. ಉಗ್ರನ ದಾಳಿಗೆ ಬಲಿಯಾದ ಪೊಲೀಸ್ ಸಿಬ್ಬಂದಿಯನ್ನು ಸುಹೇಲ್ ಮತ್ತು ಮೊಹಮದ್ ಯೂಸುಫ್ ಎಂದು ಗುರುತಿಸಲಾಗಿದ್ದು, ಈ ಪೈಕಿ ಸುಹೇಲ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಚಳಿಯಿಂದ ರಕ್ಷಣೆ ಪಡೆಯಲು ಬಳಸುವಂತಹ ದಪ್ಪನೆಯ ಉಡುಗೆಯ ಒಳಗೆ ಪಿಸ್ತೂಲನ್ನು ಅಡಗಿಸಿಟ್ಟುಕೊಂಡಿದ್ದ ಉಗ್ರ ದಿಢೀರ್​ ದಾಳಿ ನಡೆಸಿದ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಎರಡು ದಿನಗಳ ಹಿಂದಷ್ಟೇ ಇಂತಹದೇ ದಾಳಿ ಶ್ರೀನಗರದ ವರ್ತಕರೋರ್ವರ ಮಗನ ಮೇಲೆ ನಡೆದಿತ್ತು ಎಂದು ಪ್ರತ್ಯಕ್ಷದರ್ಶಿಗಳು ನೆನೆಸಿಕೊಂಡಿದ್ದಾರೆ. ಎರಡೇ ದಿನಗಳ ತರುವಾಯ ಮತ್ತೊಮ್ಮೆ ಉಗ್ರರು ಏಕಾಕಿ ದಾಳಿ ನಡೆಸಿರುವುದು ಸಾರ್ವಜನಿಕ ಪ್ರದೇಶಗಳಲ್ಲಿ ಸಂಚರಿಸುವದರ ಕುರಿತು ಭೀತಿ ಹುಟ್ಟಿಸಿದೆ.

‘ದಾಳಿ ನಡೆಸಿದ ಉಗ್ರನನ್ನು ಗುರುತಿಸಿದ್ದು, ಶೀಘ್ರದಲ್ಲಿ ಬಂಧಿಸುತ್ತೇವೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ನಿರ್ದೇಶಕ ದಿಲ್​ಬಾಗ್ ಸಿಂಗ್ ತಿಳಿಸಿದ್ದಾರೆ. ಉಗ್ರ ದಾಳಿಗೆ ಬಲಿಯಾದ ಪೊಲೀಸ್ ಸಿಬ್ಬಂದಿಗಳನ್ನು ಸುಹೇಲ್ ಮತ್ತು ಮೊಹಮದ್ ಯೂಸುಫ್ ಎಂದು ಗುರುತಿಸಲಾಗಿದ್ದು, ಈ ಪೈಕಿ ಸುಹೇಲ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೊಹಮದ್ ಯೂಸುಫ್ ಅವರನ್ನು ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಲಾಯಿತಾದರೂ ಮಾರ್ಗಮಧ್ಯೆಯೇ ಅವರು ಅಸುನೀಗಿದರು ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಜಮ್ಮು ಮತ್ತು ಕಾಶ್ಮೀರದ ವಾಸ್ತವ ಪರಿಸ್ಥಿತಿ ಪರಿಶೀಲಿಸಲು 24 ವಿದೇಶಿ ಪ್ರತಿನಿಧಿಗಳು ಭೇಟಿ ನೀಡಿದ ಕೆಲ ದಿನಗಳ ಬೆನ್ನಲ್ಲೇ ಎರಡು ಗುಂಡಿನ ದಾಳಿ ನಡೆದಿದೆ ಎಂದು ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ: Two Years of Pulwama Attack: ಫೆಬ್ರವರಿ14ರಂದು ಏನಾಗಿತ್ತು? ಉಗ್ರರ ದಾಳಿಗೆ ಭಾರತ ಹೇಗೆ ಪ್ರತ್ಯುತ್ತರ ನೀಡಿತು?

ಜಮ್ಮು-ಕಾಶ್ಮೀರಕ್ಕೆ ಸೂಕ್ತ ಸಮಯದಲ್ಲಿ ರಾಜ್ಯ ಸ್ಥಾನಮಾನ ಸಿಗುತ್ತದೆ: ಲೋಕಸಭೆಯಲ್ಲಿ ಅಮಿತ್ ಶಾ ಪ್ರತ್ಯುತ್ತರ

Published On - 5:29 pm, Fri, 19 February 21

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ