AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂಂಚ್​​ನಲ್ಲಿ ನದಿಗೆ ಬಿದ್ದ ಬೆಂಗಾವಲು ವಾಹನ; ಇಬ್ಬರು ಪೊಲೀಸ್ ಸಿಬ್ಬಂದಿ ಮರಣ, ನಾಲ್ವರಿಗೆ ಗಾಯ

ವಿಭಾಗೀಯ ಪೊಲೀಸ್ ಆಯುಕ್ತ ರಾಘವ್​ ಲಾಂಗರ್​ ಜಮ್ಮುವಿಗೆ ಭೇಟಿ ನೀಡಿದ್ದರು. ಅವರಿಗೆ ಭದ್ರತೆ ನೀಡಲು ಪೂಂಚ್​ ಎಸ್​ಎಸ್​ಪಿ ವಿನೋದ್ ಕುಮಾರ್​ ನೇತೃತ್ವದ ತಂಡ ಅಲ್ಲಿಗೆ ಹೋಗಿತ್ತು.

ಪೂಂಚ್​​ನಲ್ಲಿ ನದಿಗೆ ಬಿದ್ದ ಬೆಂಗಾವಲು ವಾಹನ; ಇಬ್ಬರು ಪೊಲೀಸ್ ಸಿಬ್ಬಂದಿ ಮರಣ, ನಾಲ್ವರಿಗೆ ಗಾಯ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 17, 2021 | 9:03 AM

Share

ಜಮ್ಮು-ಕಾಶ್ಮೀರದ ಪೂಂಚ್​ ಜಿಲ್ಲೆಯಲ್ಲಿ ಪೊಲೀಸ್​ ವಾಹನ ಸ್ಕಿಡ್​ ಆಗಿ ನದಿಗೆ ಬಿದ್ದ ಪರಿಣಾಮ ಇಬ್ಬರು ಪೊಲೀಸ್ ಅಧಿಕಾರಿಗಳು ಮೃತಪಟ್ಟು, ಇನ್ನುಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೂಂಚ್​​ನ ಬಫ್ಲಿಯಾಜ್​ ಪ್ರದೇಶದಲ್ಲಿರುವ ಡ್ರೋಗ್ಜಿಯನ್ ಎಂಬ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಪೂಂಚ್‌ನ ಹಿರಿಯ ಪೊಲೀಸ್ ಅಧೀಕ್ಷಕರ ಬೆಂಗಾವಲು ವಾಹನ ಇದಾಗಿದ್ದು, ಚಾಲಕ ನಿಯಂತ್ರಣ ಕಳೆದುಕೊಂಡಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.  

ಈ ಪೊಲೀಸ್​ ವಾಹನದಲ್ಲಿ ಒಟ್ಟು ಆರು ಮಂದಿ ಸಿಬ್ಬಂದಿ ಇದ್ದು, ಎಲ್ಲರೂ ಗಾಯಗೊಂಡಿದ್ದರು. ಆರೂ ಜನರನ್ನು ಸುರನ್​ಕೋಟೆಯ ಉಪ-ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅದರಲ್ಲಿ ಒಬ್ಬ ಪೊಲೀಸ್​ ಆಸ್ಪತ್ರೆಗೆ ಹೋಗುವಾಗಲೇ ಮೃತಪಟ್ಟಿದ್ದು,  ಉಳಿದ ಐವರನ್ನು ರಾಜೌರಿ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಿ, ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.  ಹಾಗಿದ್ದಾಗ್ಯೂ ಇನ್ನೊಬ್ಬ ಸಿಬ್ಬಂದಿ ಚಿಕಿತ್ಸೆ ಪಡೆಯುತ್ತಲೇ ಮೃತರಾಗಿದ್ದಾರೆ.

ವಿಭಾಗೀಯ ಪೊಲೀಸ್ ಆಯುಕ್ತ ರಾಘವ್​ ಲಾಂಗರ್​ ಜಮ್ಮುವಿಗೆ ಭೇಟಿ ನೀಡಿದ್ದರು. ಅವರಿಗೆ ಭದ್ರತೆ ನೀಡಲು ಪೂಂಚ್​ ಎಸ್​ಎಸ್​ಪಿ ವಿನೋದ್ ಕುಮಾರ್​ ನೇತೃತ್ವದ ತಂಡ ಅಲ್ಲಿಗೆ ಹೋಗಿತ್ತು. ಅದಾದ ಬಳಿಕ ಪೀರ್​ ಕಿ ಗಲಿಯಿಂದ ಮೊಘಲ್​ ರಸ್ತೆಯಲ್ಲಿ ಈ ಬೆಂಗಾವಲು ವಾಹನಗಳೆಲ್ಲ ಬರುತ್ತಿದ್ದವು.  ಇನ್ನು ರಾಜೌರಿ ಆಸ್ಪತ್ರೆಗೆ ದಾಖಲಾದ ಪೊಲೀಸ್ ಸಿಬ್ಬಂದಿಯ ಆರೋಗ್ಯ ವಿಚಾರಣೆಗಾಗಿ ಹಲವು ಹಿರಿಯ ಅಧಿಕಾರಿಗಳು ಭೇಟಿಕೊಟ್ಟಿದ್ದರು.

ಇದನ್ನೂ ಓದಿ: Hair Care Tips: ಕೂದಲು ಬೆಳ್ಳಗಾಗುತ್ತಿದೆಯೇ? ಪರಿಹಾರಕ್ಕೆ ಈ ಕೆಲವು ಸರಳ ಮಾರ್ಗಗಳನ್ನು ಅನುಸರಿಸಿ

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ