AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂಂಚ್​​ನಲ್ಲಿ ನದಿಗೆ ಬಿದ್ದ ಬೆಂಗಾವಲು ವಾಹನ; ಇಬ್ಬರು ಪೊಲೀಸ್ ಸಿಬ್ಬಂದಿ ಮರಣ, ನಾಲ್ವರಿಗೆ ಗಾಯ

ವಿಭಾಗೀಯ ಪೊಲೀಸ್ ಆಯುಕ್ತ ರಾಘವ್​ ಲಾಂಗರ್​ ಜಮ್ಮುವಿಗೆ ಭೇಟಿ ನೀಡಿದ್ದರು. ಅವರಿಗೆ ಭದ್ರತೆ ನೀಡಲು ಪೂಂಚ್​ ಎಸ್​ಎಸ್​ಪಿ ವಿನೋದ್ ಕುಮಾರ್​ ನೇತೃತ್ವದ ತಂಡ ಅಲ್ಲಿಗೆ ಹೋಗಿತ್ತು.

ಪೂಂಚ್​​ನಲ್ಲಿ ನದಿಗೆ ಬಿದ್ದ ಬೆಂಗಾವಲು ವಾಹನ; ಇಬ್ಬರು ಪೊಲೀಸ್ ಸಿಬ್ಬಂದಿ ಮರಣ, ನಾಲ್ವರಿಗೆ ಗಾಯ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 17, 2021 | 9:03 AM

Share

ಜಮ್ಮು-ಕಾಶ್ಮೀರದ ಪೂಂಚ್​ ಜಿಲ್ಲೆಯಲ್ಲಿ ಪೊಲೀಸ್​ ವಾಹನ ಸ್ಕಿಡ್​ ಆಗಿ ನದಿಗೆ ಬಿದ್ದ ಪರಿಣಾಮ ಇಬ್ಬರು ಪೊಲೀಸ್ ಅಧಿಕಾರಿಗಳು ಮೃತಪಟ್ಟು, ಇನ್ನುಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೂಂಚ್​​ನ ಬಫ್ಲಿಯಾಜ್​ ಪ್ರದೇಶದಲ್ಲಿರುವ ಡ್ರೋಗ್ಜಿಯನ್ ಎಂಬ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಪೂಂಚ್‌ನ ಹಿರಿಯ ಪೊಲೀಸ್ ಅಧೀಕ್ಷಕರ ಬೆಂಗಾವಲು ವಾಹನ ಇದಾಗಿದ್ದು, ಚಾಲಕ ನಿಯಂತ್ರಣ ಕಳೆದುಕೊಂಡಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.  

ಈ ಪೊಲೀಸ್​ ವಾಹನದಲ್ಲಿ ಒಟ್ಟು ಆರು ಮಂದಿ ಸಿಬ್ಬಂದಿ ಇದ್ದು, ಎಲ್ಲರೂ ಗಾಯಗೊಂಡಿದ್ದರು. ಆರೂ ಜನರನ್ನು ಸುರನ್​ಕೋಟೆಯ ಉಪ-ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅದರಲ್ಲಿ ಒಬ್ಬ ಪೊಲೀಸ್​ ಆಸ್ಪತ್ರೆಗೆ ಹೋಗುವಾಗಲೇ ಮೃತಪಟ್ಟಿದ್ದು,  ಉಳಿದ ಐವರನ್ನು ರಾಜೌರಿ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಿ, ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.  ಹಾಗಿದ್ದಾಗ್ಯೂ ಇನ್ನೊಬ್ಬ ಸಿಬ್ಬಂದಿ ಚಿಕಿತ್ಸೆ ಪಡೆಯುತ್ತಲೇ ಮೃತರಾಗಿದ್ದಾರೆ.

ವಿಭಾಗೀಯ ಪೊಲೀಸ್ ಆಯುಕ್ತ ರಾಘವ್​ ಲಾಂಗರ್​ ಜಮ್ಮುವಿಗೆ ಭೇಟಿ ನೀಡಿದ್ದರು. ಅವರಿಗೆ ಭದ್ರತೆ ನೀಡಲು ಪೂಂಚ್​ ಎಸ್​ಎಸ್​ಪಿ ವಿನೋದ್ ಕುಮಾರ್​ ನೇತೃತ್ವದ ತಂಡ ಅಲ್ಲಿಗೆ ಹೋಗಿತ್ತು. ಅದಾದ ಬಳಿಕ ಪೀರ್​ ಕಿ ಗಲಿಯಿಂದ ಮೊಘಲ್​ ರಸ್ತೆಯಲ್ಲಿ ಈ ಬೆಂಗಾವಲು ವಾಹನಗಳೆಲ್ಲ ಬರುತ್ತಿದ್ದವು.  ಇನ್ನು ರಾಜೌರಿ ಆಸ್ಪತ್ರೆಗೆ ದಾಖಲಾದ ಪೊಲೀಸ್ ಸಿಬ್ಬಂದಿಯ ಆರೋಗ್ಯ ವಿಚಾರಣೆಗಾಗಿ ಹಲವು ಹಿರಿಯ ಅಧಿಕಾರಿಗಳು ಭೇಟಿಕೊಟ್ಟಿದ್ದರು.

ಇದನ್ನೂ ಓದಿ: Hair Care Tips: ಕೂದಲು ಬೆಳ್ಳಗಾಗುತ್ತಿದೆಯೇ? ಪರಿಹಾರಕ್ಕೆ ಈ ಕೆಲವು ಸರಳ ಮಾರ್ಗಗಳನ್ನು ಅನುಸರಿಸಿ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!