AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂಂಚ್​​ನಲ್ಲಿ ನದಿಗೆ ಬಿದ್ದ ಬೆಂಗಾವಲು ವಾಹನ; ಇಬ್ಬರು ಪೊಲೀಸ್ ಸಿಬ್ಬಂದಿ ಮರಣ, ನಾಲ್ವರಿಗೆ ಗಾಯ

ವಿಭಾಗೀಯ ಪೊಲೀಸ್ ಆಯುಕ್ತ ರಾಘವ್​ ಲಾಂಗರ್​ ಜಮ್ಮುವಿಗೆ ಭೇಟಿ ನೀಡಿದ್ದರು. ಅವರಿಗೆ ಭದ್ರತೆ ನೀಡಲು ಪೂಂಚ್​ ಎಸ್​ಎಸ್​ಪಿ ವಿನೋದ್ ಕುಮಾರ್​ ನೇತೃತ್ವದ ತಂಡ ಅಲ್ಲಿಗೆ ಹೋಗಿತ್ತು.

ಪೂಂಚ್​​ನಲ್ಲಿ ನದಿಗೆ ಬಿದ್ದ ಬೆಂಗಾವಲು ವಾಹನ; ಇಬ್ಬರು ಪೊಲೀಸ್ ಸಿಬ್ಬಂದಿ ಮರಣ, ನಾಲ್ವರಿಗೆ ಗಾಯ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 17, 2021 | 9:03 AM

Share

ಜಮ್ಮು-ಕಾಶ್ಮೀರದ ಪೂಂಚ್​ ಜಿಲ್ಲೆಯಲ್ಲಿ ಪೊಲೀಸ್​ ವಾಹನ ಸ್ಕಿಡ್​ ಆಗಿ ನದಿಗೆ ಬಿದ್ದ ಪರಿಣಾಮ ಇಬ್ಬರು ಪೊಲೀಸ್ ಅಧಿಕಾರಿಗಳು ಮೃತಪಟ್ಟು, ಇನ್ನುಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೂಂಚ್​​ನ ಬಫ್ಲಿಯಾಜ್​ ಪ್ರದೇಶದಲ್ಲಿರುವ ಡ್ರೋಗ್ಜಿಯನ್ ಎಂಬ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಪೂಂಚ್‌ನ ಹಿರಿಯ ಪೊಲೀಸ್ ಅಧೀಕ್ಷಕರ ಬೆಂಗಾವಲು ವಾಹನ ಇದಾಗಿದ್ದು, ಚಾಲಕ ನಿಯಂತ್ರಣ ಕಳೆದುಕೊಂಡಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.  

ಈ ಪೊಲೀಸ್​ ವಾಹನದಲ್ಲಿ ಒಟ್ಟು ಆರು ಮಂದಿ ಸಿಬ್ಬಂದಿ ಇದ್ದು, ಎಲ್ಲರೂ ಗಾಯಗೊಂಡಿದ್ದರು. ಆರೂ ಜನರನ್ನು ಸುರನ್​ಕೋಟೆಯ ಉಪ-ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅದರಲ್ಲಿ ಒಬ್ಬ ಪೊಲೀಸ್​ ಆಸ್ಪತ್ರೆಗೆ ಹೋಗುವಾಗಲೇ ಮೃತಪಟ್ಟಿದ್ದು,  ಉಳಿದ ಐವರನ್ನು ರಾಜೌರಿ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಿ, ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.  ಹಾಗಿದ್ದಾಗ್ಯೂ ಇನ್ನೊಬ್ಬ ಸಿಬ್ಬಂದಿ ಚಿಕಿತ್ಸೆ ಪಡೆಯುತ್ತಲೇ ಮೃತರಾಗಿದ್ದಾರೆ.

ವಿಭಾಗೀಯ ಪೊಲೀಸ್ ಆಯುಕ್ತ ರಾಘವ್​ ಲಾಂಗರ್​ ಜಮ್ಮುವಿಗೆ ಭೇಟಿ ನೀಡಿದ್ದರು. ಅವರಿಗೆ ಭದ್ರತೆ ನೀಡಲು ಪೂಂಚ್​ ಎಸ್​ಎಸ್​ಪಿ ವಿನೋದ್ ಕುಮಾರ್​ ನೇತೃತ್ವದ ತಂಡ ಅಲ್ಲಿಗೆ ಹೋಗಿತ್ತು. ಅದಾದ ಬಳಿಕ ಪೀರ್​ ಕಿ ಗಲಿಯಿಂದ ಮೊಘಲ್​ ರಸ್ತೆಯಲ್ಲಿ ಈ ಬೆಂಗಾವಲು ವಾಹನಗಳೆಲ್ಲ ಬರುತ್ತಿದ್ದವು.  ಇನ್ನು ರಾಜೌರಿ ಆಸ್ಪತ್ರೆಗೆ ದಾಖಲಾದ ಪೊಲೀಸ್ ಸಿಬ್ಬಂದಿಯ ಆರೋಗ್ಯ ವಿಚಾರಣೆಗಾಗಿ ಹಲವು ಹಿರಿಯ ಅಧಿಕಾರಿಗಳು ಭೇಟಿಕೊಟ್ಟಿದ್ದರು.

ಇದನ್ನೂ ಓದಿ: Hair Care Tips: ಕೂದಲು ಬೆಳ್ಳಗಾಗುತ್ತಿದೆಯೇ? ಪರಿಹಾರಕ್ಕೆ ಈ ಕೆಲವು ಸರಳ ಮಾರ್ಗಗಳನ್ನು ಅನುಸರಿಸಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!