AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂಂಚ್​​ನಲ್ಲಿ ನದಿಗೆ ಬಿದ್ದ ಬೆಂಗಾವಲು ವಾಹನ; ಇಬ್ಬರು ಪೊಲೀಸ್ ಸಿಬ್ಬಂದಿ ಮರಣ, ನಾಲ್ವರಿಗೆ ಗಾಯ

ವಿಭಾಗೀಯ ಪೊಲೀಸ್ ಆಯುಕ್ತ ರಾಘವ್​ ಲಾಂಗರ್​ ಜಮ್ಮುವಿಗೆ ಭೇಟಿ ನೀಡಿದ್ದರು. ಅವರಿಗೆ ಭದ್ರತೆ ನೀಡಲು ಪೂಂಚ್​ ಎಸ್​ಎಸ್​ಪಿ ವಿನೋದ್ ಕುಮಾರ್​ ನೇತೃತ್ವದ ತಂಡ ಅಲ್ಲಿಗೆ ಹೋಗಿತ್ತು.

ಪೂಂಚ್​​ನಲ್ಲಿ ನದಿಗೆ ಬಿದ್ದ ಬೆಂಗಾವಲು ವಾಹನ; ಇಬ್ಬರು ಪೊಲೀಸ್ ಸಿಬ್ಬಂದಿ ಮರಣ, ನಾಲ್ವರಿಗೆ ಗಾಯ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 17, 2021 | 9:03 AM

Share

ಜಮ್ಮು-ಕಾಶ್ಮೀರದ ಪೂಂಚ್​ ಜಿಲ್ಲೆಯಲ್ಲಿ ಪೊಲೀಸ್​ ವಾಹನ ಸ್ಕಿಡ್​ ಆಗಿ ನದಿಗೆ ಬಿದ್ದ ಪರಿಣಾಮ ಇಬ್ಬರು ಪೊಲೀಸ್ ಅಧಿಕಾರಿಗಳು ಮೃತಪಟ್ಟು, ಇನ್ನುಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೂಂಚ್​​ನ ಬಫ್ಲಿಯಾಜ್​ ಪ್ರದೇಶದಲ್ಲಿರುವ ಡ್ರೋಗ್ಜಿಯನ್ ಎಂಬ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಪೂಂಚ್‌ನ ಹಿರಿಯ ಪೊಲೀಸ್ ಅಧೀಕ್ಷಕರ ಬೆಂಗಾವಲು ವಾಹನ ಇದಾಗಿದ್ದು, ಚಾಲಕ ನಿಯಂತ್ರಣ ಕಳೆದುಕೊಂಡಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.  

ಈ ಪೊಲೀಸ್​ ವಾಹನದಲ್ಲಿ ಒಟ್ಟು ಆರು ಮಂದಿ ಸಿಬ್ಬಂದಿ ಇದ್ದು, ಎಲ್ಲರೂ ಗಾಯಗೊಂಡಿದ್ದರು. ಆರೂ ಜನರನ್ನು ಸುರನ್​ಕೋಟೆಯ ಉಪ-ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅದರಲ್ಲಿ ಒಬ್ಬ ಪೊಲೀಸ್​ ಆಸ್ಪತ್ರೆಗೆ ಹೋಗುವಾಗಲೇ ಮೃತಪಟ್ಟಿದ್ದು,  ಉಳಿದ ಐವರನ್ನು ರಾಜೌರಿ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಿ, ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.  ಹಾಗಿದ್ದಾಗ್ಯೂ ಇನ್ನೊಬ್ಬ ಸಿಬ್ಬಂದಿ ಚಿಕಿತ್ಸೆ ಪಡೆಯುತ್ತಲೇ ಮೃತರಾಗಿದ್ದಾರೆ.

ವಿಭಾಗೀಯ ಪೊಲೀಸ್ ಆಯುಕ್ತ ರಾಘವ್​ ಲಾಂಗರ್​ ಜಮ್ಮುವಿಗೆ ಭೇಟಿ ನೀಡಿದ್ದರು. ಅವರಿಗೆ ಭದ್ರತೆ ನೀಡಲು ಪೂಂಚ್​ ಎಸ್​ಎಸ್​ಪಿ ವಿನೋದ್ ಕುಮಾರ್​ ನೇತೃತ್ವದ ತಂಡ ಅಲ್ಲಿಗೆ ಹೋಗಿತ್ತು. ಅದಾದ ಬಳಿಕ ಪೀರ್​ ಕಿ ಗಲಿಯಿಂದ ಮೊಘಲ್​ ರಸ್ತೆಯಲ್ಲಿ ಈ ಬೆಂಗಾವಲು ವಾಹನಗಳೆಲ್ಲ ಬರುತ್ತಿದ್ದವು.  ಇನ್ನು ರಾಜೌರಿ ಆಸ್ಪತ್ರೆಗೆ ದಾಖಲಾದ ಪೊಲೀಸ್ ಸಿಬ್ಬಂದಿಯ ಆರೋಗ್ಯ ವಿಚಾರಣೆಗಾಗಿ ಹಲವು ಹಿರಿಯ ಅಧಿಕಾರಿಗಳು ಭೇಟಿಕೊಟ್ಟಿದ್ದರು.

ಇದನ್ನೂ ಓದಿ: Hair Care Tips: ಕೂದಲು ಬೆಳ್ಳಗಾಗುತ್ತಿದೆಯೇ? ಪರಿಹಾರಕ್ಕೆ ಈ ಕೆಲವು ಸರಳ ಮಾರ್ಗಗಳನ್ನು ಅನುಸರಿಸಿ

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​