Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂಂಚ್​​ನಲ್ಲಿ ನದಿಗೆ ಬಿದ್ದ ಬೆಂಗಾವಲು ವಾಹನ; ಇಬ್ಬರು ಪೊಲೀಸ್ ಸಿಬ್ಬಂದಿ ಮರಣ, ನಾಲ್ವರಿಗೆ ಗಾಯ

ವಿಭಾಗೀಯ ಪೊಲೀಸ್ ಆಯುಕ್ತ ರಾಘವ್​ ಲಾಂಗರ್​ ಜಮ್ಮುವಿಗೆ ಭೇಟಿ ನೀಡಿದ್ದರು. ಅವರಿಗೆ ಭದ್ರತೆ ನೀಡಲು ಪೂಂಚ್​ ಎಸ್​ಎಸ್​ಪಿ ವಿನೋದ್ ಕುಮಾರ್​ ನೇತೃತ್ವದ ತಂಡ ಅಲ್ಲಿಗೆ ಹೋಗಿತ್ತು.

ಪೂಂಚ್​​ನಲ್ಲಿ ನದಿಗೆ ಬಿದ್ದ ಬೆಂಗಾವಲು ವಾಹನ; ಇಬ್ಬರು ಪೊಲೀಸ್ ಸಿಬ್ಬಂದಿ ಮರಣ, ನಾಲ್ವರಿಗೆ ಗಾಯ
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Nov 17, 2021 | 9:03 AM

ಜಮ್ಮು-ಕಾಶ್ಮೀರದ ಪೂಂಚ್​ ಜಿಲ್ಲೆಯಲ್ಲಿ ಪೊಲೀಸ್​ ವಾಹನ ಸ್ಕಿಡ್​ ಆಗಿ ನದಿಗೆ ಬಿದ್ದ ಪರಿಣಾಮ ಇಬ್ಬರು ಪೊಲೀಸ್ ಅಧಿಕಾರಿಗಳು ಮೃತಪಟ್ಟು, ಇನ್ನುಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೂಂಚ್​​ನ ಬಫ್ಲಿಯಾಜ್​ ಪ್ರದೇಶದಲ್ಲಿರುವ ಡ್ರೋಗ್ಜಿಯನ್ ಎಂಬ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಪೂಂಚ್‌ನ ಹಿರಿಯ ಪೊಲೀಸ್ ಅಧೀಕ್ಷಕರ ಬೆಂಗಾವಲು ವಾಹನ ಇದಾಗಿದ್ದು, ಚಾಲಕ ನಿಯಂತ್ರಣ ಕಳೆದುಕೊಂಡಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.  

ಈ ಪೊಲೀಸ್​ ವಾಹನದಲ್ಲಿ ಒಟ್ಟು ಆರು ಮಂದಿ ಸಿಬ್ಬಂದಿ ಇದ್ದು, ಎಲ್ಲರೂ ಗಾಯಗೊಂಡಿದ್ದರು. ಆರೂ ಜನರನ್ನು ಸುರನ್​ಕೋಟೆಯ ಉಪ-ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅದರಲ್ಲಿ ಒಬ್ಬ ಪೊಲೀಸ್​ ಆಸ್ಪತ್ರೆಗೆ ಹೋಗುವಾಗಲೇ ಮೃತಪಟ್ಟಿದ್ದು,  ಉಳಿದ ಐವರನ್ನು ರಾಜೌರಿ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಿ, ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.  ಹಾಗಿದ್ದಾಗ್ಯೂ ಇನ್ನೊಬ್ಬ ಸಿಬ್ಬಂದಿ ಚಿಕಿತ್ಸೆ ಪಡೆಯುತ್ತಲೇ ಮೃತರಾಗಿದ್ದಾರೆ.

ವಿಭಾಗೀಯ ಪೊಲೀಸ್ ಆಯುಕ್ತ ರಾಘವ್​ ಲಾಂಗರ್​ ಜಮ್ಮುವಿಗೆ ಭೇಟಿ ನೀಡಿದ್ದರು. ಅವರಿಗೆ ಭದ್ರತೆ ನೀಡಲು ಪೂಂಚ್​ ಎಸ್​ಎಸ್​ಪಿ ವಿನೋದ್ ಕುಮಾರ್​ ನೇತೃತ್ವದ ತಂಡ ಅಲ್ಲಿಗೆ ಹೋಗಿತ್ತು. ಅದಾದ ಬಳಿಕ ಪೀರ್​ ಕಿ ಗಲಿಯಿಂದ ಮೊಘಲ್​ ರಸ್ತೆಯಲ್ಲಿ ಈ ಬೆಂಗಾವಲು ವಾಹನಗಳೆಲ್ಲ ಬರುತ್ತಿದ್ದವು.  ಇನ್ನು ರಾಜೌರಿ ಆಸ್ಪತ್ರೆಗೆ ದಾಖಲಾದ ಪೊಲೀಸ್ ಸಿಬ್ಬಂದಿಯ ಆರೋಗ್ಯ ವಿಚಾರಣೆಗಾಗಿ ಹಲವು ಹಿರಿಯ ಅಧಿಕಾರಿಗಳು ಭೇಟಿಕೊಟ್ಟಿದ್ದರು.

ಇದನ್ನೂ ಓದಿ: Hair Care Tips: ಕೂದಲು ಬೆಳ್ಳಗಾಗುತ್ತಿದೆಯೇ? ಪರಿಹಾರಕ್ಕೆ ಈ ಕೆಲವು ಸರಳ ಮಾರ್ಗಗಳನ್ನು ಅನುಸರಿಸಿ

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್