Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಷಕರ ಕಣ್ತಪ್ಪಿಸಿ ಕಾರಿನೊಳಗೆ ಹೋಗಿ ಕುಳಿತಿದ್ದ ಇಬ್ಬರು ಸಹೋದರಿಯರು ಉಸಿರುಗಟ್ಟಿ ಸಾವು

ಪೋಷಕರ ಕಣ್ಣು ತಪ್ಪಿಸಿ ಕಾರಿನೊಳಗೆ ಹೋಗಿ ಕುಳಿತಿದ್ದ ಇಬ್ಬರು ಸಹೋದರಿಯರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಎರಡರಿಂದ ಏಳು ವರ್ಷದೊಳಗಿನ ಮಕ್ಕಳು ಹತ್ತಿರದಲ್ಲಿ ಆಟವಾಡುತ್ತಿದ್ದಾಗ ಕಾರಿನ ಕೀಲಿಗಳು ಸಿಕ್ಕಿದ್ದು ವಾಹನಕ್ಕೆ ಪ್ರವೇಶಿಸಿದ್ದವು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಬಾಗಿಲು ತೆರೆಯಲು ಸಾಧ್ಯವಾಗದೆ, ಅವರ ಪೋಷಕರು ಕೆಲಸದಿಂದ ಹಿಂತಿರುಗಿ ಬಂದು ದುರಂತವನ್ನು ಕಂಡುಕೊಳ್ಳುವವರೆಗೂ ಅವರು ಒಳಗೆ ಸಿಲುಕಿಕೊಂಡಿದ್ದರು.

ಪೋಷಕರ ಕಣ್ತಪ್ಪಿಸಿ ಕಾರಿನೊಳಗೆ ಹೋಗಿ ಕುಳಿತಿದ್ದ ಇಬ್ಬರು ಸಹೋದರಿಯರು ಉಸಿರುಗಟ್ಟಿ ಸಾವು
ಕಾರು-ಸಾಂದರ್ಭಿಕ ಚಿತ್ರ
Follow us
ನಯನಾ ರಾಜೀವ್
|

Updated on: Apr 15, 2025 | 9:34 AM

ತೆಲಂಗಾಣ, ಏಪ್ರಿಲ್ 15: ಇಬ್ಬರು ಸಹೋದರಿಯರು ಕಾರಿನಲ್ಲಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ರಂಗಾರೆಡ್ಡಿಯಲ್ಲಿ ನಡೆದಿದೆ. ಅವರಿಬ್ಬರು ಕಾರು ಹತ್ತಿ ಕುಳಿತು ಒಂದು ಗಂಟೆಗಳೇ ಕಳೆದಿದ್ದರೂ ಯಾರೂ ಕೂಡ ಅದನ್ನು ಗಮನಿಸಿರಲಿಲ್ಲ. ತೆಲಂಗಾಣ(Telangana)ದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ದಮರಗಿರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ತಿಳಿಸಿದೆ.

ತನುಶ್ರೀ, ಅಭಿನೇತ್ರಿ ಮೃತರು, ಪೋಷಕರು ಸಂಬಂಧಿಕರೊಬ್ಬರ ವಿವಾಹದ ಬಗ್ಗೆ ಚರ್ಚಿಸಲು ಮಕ್ಕಳನ್ನು ಕರೆದುಕೊಂಡು ಅಜ್ಜಿಯ ಮನೆಗೆ ಹೋಗಿದ್ದರು. ಚರ್ಚೆ ನಡೆಯುತ್ತಿರುವಾಗ ತನುಶ್ರೀ ಮತ್ತು ಅಭಿನೇತ್ರಿ ಹೊರಗೆ ಹೋಗಿ, ಕಾರಿನ ಬಾಗಿಲು ತೆರೆದು, ವಾಹನದೊಳಗೆ ಯಾರಿಗೂ ತಿಳಿಯದಂತೆ ಕುಳಿತಿದ್ದರು.

ಅವರು ಒಂದು ಗಂಟೆಗೂ ಹೆಚ್ಚು ಕಾಲ ಕಾರಿನಲ್ಲೇ ಇದ್ದರು, ಉಸಿರುಗಟ್ಟುವಿಕೆಯಿಂದಾಗಿ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಪೋಷಕರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಕ್ಕಳನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು ಎಂದು ವರದಿಯಾಗಿದೆ, ಆದರೆ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ, ಇದುವರೆಗೆ ಯಾವುದೇ ಔಪಚಾರಿಕ ದೂರು ದಾಖಲಾಗಿಲ್ಲ.

ಇದನ್ನೂ ಓದಿ
Image
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
Image
ಹೊರ ರಾಜ್ಯಗಳಿಂದ ಬಂದವರಿಂದಲೇ ಹೆಚ್ಚು ಅಪರಾಧ ಕೃತ್ಯ: ಗೃಹ ಸಚಿವ ಪರಮೇಶ್ವರ್
Image
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ
Image
ಬಾಲಕಿ ಹತ್ಯೆಗೈದಿದ್ದ ಆರೋಪಿ ಪೊಲೀಸ್​ ಗುಂಡೇಗೆ ಬಲಿ: ಕಮಿಷನರ್​ಗೆ ಜೈಕಾರ

ಮತ್ತಷ್ಟು ಓದಿ: ಕೌಟುಂಬಿಕ ಕಲಹ: ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಕಳೆದ ವರ್ಷ ನವೆಂಬರ್‌ನಲ್ಲಿ, ಗುಜರಾತ್‌ನ ಅಮ್ರೇಲಿ ಜಿಲ್ಲೆಯ ರಾಂಧಿಯಾ ಗ್ರಾಮದಲ್ಲಿ ಮಧ್ಯಪ್ರದೇಶದ ವಲಸೆ ಕುಟುಂಬದ ನಾಲ್ವರು ಮಕ್ಕಳು ಆಕಸ್ಮಿಕವಾಗಿ ನಿಲ್ಲಿಸಿದ್ದ ಕಾರಿನೊಳಗೆ ಕುಳಿತುಕೊಂಡು ಉಸಿರುಗಟ್ಟಿ ಸಾವನ್ನಪ್ಪಿದ್ದರು .

ಎರಡರಿಂದ ಏಳು ವರ್ಷದೊಳಗಿನ ಮಕ್ಕಳು ಹತ್ತಿರದಲ್ಲಿ ಆಟವಾಡುತ್ತಿದ್ದಾಗ ಕಾರಿನ ಕೀಲಿಗಳು ಸಿಕ್ಕಿದ್ದು ಕೂಡಲೇ ಕಾರು ಹತ್ತಿ ಕುಳಿತಿದ್ದರು. ಬಾಗಿಲು ತೆರೆಯಲು ಸಾಧ್ಯವಾಗದೆ, ಅವರ ಪೋಷಕರು ಕೆಲಸದಿಂದ ಹಿಂತಿರುಗಿ ಬರುವಷ್ಟರಲ್ಲಿ ದುರಂತ ಸಾವು ಕಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ