AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಯುವಕರ ನಡುವೆ ಮಾರಾಮಾರಿ; ಇಬ್ಬರು ಸಾವು, ಹಲವರಿಗೆ ಗಂಭೀರ ಗಾಯ

ದೆಹಲಿಯಲ್ಲಿ ಯುವಕರ ನಡುವೆ ಗಲಾಟೆ ನಡೆದಿದ್ದು ಚಾಕು ಇರಿತದಿಂದ ಇಬ್ಬರು ಮೃತಪಟ್ಟಿದ್ದಾರೆ. ಹಾಗೂ ಕೆಲವರಿಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದೆಹಲಿಯಲ್ಲಿ ಯುವಕರ ನಡುವೆ ಮಾರಾಮಾರಿ; ಇಬ್ಬರು ಸಾವು, ಹಲವರಿಗೆ ಗಂಭೀರ ಗಾಯ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: Mar 09, 2023 | 7:48 AM

Share

ದೆಹಲಿ: ರಾಜ್ಯ ರಾಜಧಾನಿ ದೆಹಲಿಯ ಮುಂಡ್ಕಾ ಪ್ರದೇಶದಲ್ಲಿ ಬುಧವಾರ ಯುವಕರ ನಡುವೆ ಮಾರಾಮಾರಿಯಾಗಿದ್ದು ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಹಲವರಿಗೆ ಗಾಯಗಳಾಗಿರುವ ಭಯಾನಕ ಘಟನೆ ನಡೆದಿದೆ. ದೆಹಲಿ ಪೊಲೀಸರಿಗೆ ಬುಧವಾರ ಮಧ್ಯಾಹ್ನ 1:36, 1:42 ಮತ್ತು 1:47 ಗಂಟೆಗೆ ಗಲಾಟೆ ಸಂಬಂಧ ನಿರಂತರ ಕರೆಗಳು ಬಂದಿವೆ. ಜಗಳ, ಚೂರಿ ಇರಿತ ಮತ್ತು ವ್ಯಕ್ತಿಯ ಸಾವಿನ ಕುರಿತು ಸ್ಥಳೀಯರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮುಂಡ್ಕಾ ಪ್ರದೇಶದಿಂದ ಬಂದ ಕರೆಗಳನ್ನು ಆಧರಿಸಿ ಪೊಲೀಸರು ಸ್ಥಳಕ್ಕೆ ತೆರಳಿದ್ದು ಘಟನೆ ಬಯಲಾಗಿದೆ.

ಫ್ರೆಂಡ್ಸ್ ಎನ್‌ಕ್ಲೇವ್ ಮುಂಡ್ಕಾದ ಬೀದಿ ನಂ 14ರ ನಿವಾಸಿಗಳಾದ ಸೋನು ಮತ್ತು ಅಭಿಷೇಕ್ ಎಂಬುವವರ ನಡುವೆ ಜಗಳವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಭಿಷೇಕ್ ಮತ್ತು ಅವನ ಸ್ನೇಹಿತರು ಸೋನು ಮೇಲೆ ಹಲ್ಲೆ ನಡೆಸಿ ಚಾಕು ಇರಿದಿದ್ದಾರೆ. ಮತ್ತು ಹಲ್ಲೆಯನ್ನು ತಡೆಯಲು ಬಂದವರ ಮೇಲೂ ಹಲ್ಲೆ ನಡೆದಿದ್ದು ಕೆಲವರಿಗೆ ಗಾಯಗಳಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇನ್ನು ಇದೇ ವೇಳೆ ಅಭಿಷೇಕ್​ಗೂ ಚಾಕುವಿನಿಂದ ಇರಿಯಲಾಗಿದೆ.

ಇದನ್ನೂ ಓದಿ: Plane Emergency Exit: ವಿಮಾನದ ತುರ್ತು ನಿರ್ಗಮನ ಬಾಗಿಲು ತೆರೆಯಲು ಪ್ರಯತ್ನಿಸಿದ ಪ್ರಯಾಣಿಕ, ತಡೆಯಲು ಹೋದ ಸಿಬ್ಬಂದಿಗೆ ಚಾಕು ಇರಿತ

ಒಟ್ಟು ಏಳು ಜನರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆಯಲ್ಲಿ ಚಾಕು ಇರಿತಕ್ಕೊಳಗಾದ ಸೋನು ಮತ್ತು ನವೀನ್ ಎಂಬುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಇಬ್ಬರೂ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಮತ್ತೊಂದೆಡೆ ಅಭಿಷೇಕ್ ಮತ್ತು ಇನ್ನೊಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಫ್ದರ್‌ಜಂಗ್ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದ ಮೂವರು ಗಾಯಗೊಂಡಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಕ್ರೈಂ ಮತ್ತು ಎಫ್‌ಎಸ್‌ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಮಾರಾಮಾರಿ ಮಾಡಿಕೊಂಡು ಆಸ್ಪತ್ರೆ ಸೇರಿರುವ ಯುವಕರು ಮುಂಡ್ಕಾ ಪ್ರದೇಶದ ನಮ್ಕೀನ್ ಕಾರ್ಖಾನೆಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಇನ್ನೂ ಕೂಡ ಯುವಕರ ನಡುವೆ ಗಲಾಟೆಯಾಗಲು ಕಾರಣ ಇಳಿದು ಬಂದಿಲ್ಲ. ತನಿಖೆ ನಡೆಯುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ