AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂ: ಅಲ್​​ಖೈದಾ ಸಂಘಟನೆ ಜತೆ ನಂಟಿದೆ ಎಂದು ಶಂಕಿಸಲಾಗುವ ಇಬ್ಬರು ಉಗ್ರರ ಬಂಧನ

ಬಂಧಿತರನ್ನು ಅಬ್ಬಾಸ್ ಸುಬಾನ್ ಮತ್ತು ಜಲಾಲುದ್ದೀಮ್ ಶೇಖ್ ಎಂದು ಗುರುತಿಸಲಾಗಿದೆ. ಇವರಿಬ್ಬರ ಗೋಲ್​​ಪಾರಾ ಮಸೀದಿಯ ಇಮಾಮ್ ಆಗಿದ್ದಾರೆ.

ಅಸ್ಸಾಂ: ಅಲ್​​ಖೈದಾ ಸಂಘಟನೆ ಜತೆ  ನಂಟಿದೆ ಎಂದು ಶಂಕಿಸಲಾಗುವ ಇಬ್ಬರು ಉಗ್ರರ ಬಂಧನ
ಬಂಧಿತ ಆರೋಪಿಗಳು
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Aug 21, 2022 | 1:49 PM

Share

ಅಲ್ ಖೈದಾ ಇಂಡಿಯನ್ ಸಬ್ ಕಾಂಟಿನೆಂಟ್ (AQIS) ಮತ್ತು ಬಾಂಗ್ಲಾದೇಶ ಮೂಲದ ಉಗ್ರ ಸಂಘಟನೆಯಾದ ಅನ್ಸರುಲ್ಲಾ ಬಾಂಗ್ಲಾ ಟೀಂ(ABT) ಜತೆ ನಂಟು ಹೊಂದಿದ್ದಾರೆ ಎಂದು ಶಂಕಿಸಲಾ ಇಬ್ಬರು ಉಗ್ರನರನ್ನು ಅಸ್ಸಾಂನ ಗೋಲ್ ಪಾರಾ ಜಿಲ್ಲೆಯಲ್ಲಿ ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಶಂಕಿತ ಉಗ್ರರು ಬಾಂಗ್ಲಾದೇಶದಿಂದ ಬೂಂದ ಜಿಹಾದಿಗಳಿಗೆ ಬೆಂಬಲ ಮತ್ತು ಮನೆ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ ಎಂದು ಗೋಲ್ ಪಾರದ ಸುಪರಿಟೆಂಡೆಂಟ್ ಆಫ್ ಪೊಲೀಸ್ ವಿ.ಕೆ ರಾಕೇಶ್ ರೆಡ್ಡಿ ಹೇಳಿದ್ದಾರೆ. ಬಂಧಿತರನ್ನು ಅಬ್ಬಾಸ್ ಸುಬಾನ್ ಮತ್ತು ಜಲಾಲುದ್ದೀಮ್ ಶೇಖ್ ಎಂದು ಗುರುತಿಸಲಾಗಿದೆ. ಇವರಿಬ್ಬರ ಗೋಲ್​​ಪಾರಾ ಮಸೀದಿಯ ಇಮಾಮ್ ಆಗಿದ್ದಾರೆ. ಎಕ್ಯುಐಎಸ್ ಮತ್ತು ಜಿಲ್ಲೆಯಲ್ಲಿ ಸ್ಲೀಪರ್ ಸೆಲ್ ಗೆ ನಿಯೋಜನೆ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಇಬ್ಬರೂ ಒಪ್ಪಿಕೊಂಡಿರುವುದಾಗಿ ರೆಡ್ಡಿ ಮಾಧ್ಯಮದವರಿಗೆ ಹೇಳಿದ್ದಾರೆ. ಬಂಧಿತ ವ್ಯಕ್ತಿಗಳು ಎಕ್ಯೂಐಎಸ್ ಮತ್ತು ಎಬಿಟಿಯ ಭಯೋತ್ಪಾದಕ ಘಟಕಗಳೊಂದಿಗೆ ನೇರ ಸಂಪರ್ಕವನ್ನು ಹೊಂದಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಜಿಹಾದಿ ಶಕ್ತಿಗಳೊಂದಿಗೆ ನಂಟು ಹೊಂದಿರುವ ಬಂಧಿತ ಅಬ್ಬಾಸ್ ಅಲಿಯಿಂದ ಈ ವರ್ಷ ಜುಲೈನಲ್ಲಿ ನಾವು ಮಾಹಿತಿ ಪಡೆದುಕೊಂಡಿದ್ದೇವೆ. ವಿಚಾರಣೆಯ ಸಮಯದಲ್ಲಿ ಆತ ಅಸ್ಸಾಂನ ಎಕ್ಯೂಐಎಸ್ ಮತ್ತು ಎಬಿಟಿಯ ಬಾರ್ಪೇಟಾ ಮತ್ತು ಮೊರಿಗಾಂವ್ ಮಾಡ್ಯೂಲ್​​ಗಳೊಂದಿಗೆ ನೇರವಾಗಿ ಸಂಪರ್ಕ ಹೊಂದಿದ್ದಾನೆ ಎಂದು ನಾವು ಕಂಡುಕೊಂಡಿದ್ದೇವೆ ಎಂದು ರೆಡ್ಡಿ ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.

ಆರೋಪಿಗಳ ಮನೆ ಶೋಧ ನಡೆಸಿದಾಗ ಅಲ್-ಖೈದಾ, ಜಿಹಾದಿ ಸಂಬಂಧಿಸಿದ ಹಲವಾರು ವಸ್ತುಗಳು, ಪೋಸ್ಟರ್‌ಗಳು, ಪುಸ್ತಕಗಳು ಮತ್ತು ಇತರ ದಾಖಲೆಗಳ ಜೊತೆಗೆ ಮೊಬೈಲ್ ಫೋನ್‌ಗಳು, ಸಿಮ್ ಕಾರ್ಡ್‌ಗಳು ಮತ್ತು ಐಡಿ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಈ ತಿಂಗಳ ಆರಂಭದಲ್ಲಿ ಈಶಾನ್ಯ ರಾಜ್ಯವು ಇಸ್ಲಾಮಿಕ್ ಮೂಲಭೂತವಾದಿಗಳ ತಾಣವಾಗುತ್ತಿದೆ ಎಂದು ಹೇಳಿದ್ದು ಭಯೋತ್ಪಾದನಾ ಕೃತ್ಯಗಳಿಗೆ ಸಂಬಂಧಿಸಿದಂತೆ ಮಾಡಿದ ಬಂಧನಗಳನ್ನು ಉಲ್ಲೇಖಿಸಿ ಹೇಳಿದರು. ಬಾರ್‌ಪೇಟಾ, ಬೊಂಗೈಗಾಂವ್ ಮತ್ತು ಮೋರಿಗಾಂವ್‌ನಲ್ಲಿ ಸ್ಲೀಪರ್ ಸೆಲ್‌ಗಳು ಬಳಸುತ್ತಿದ್ದ ಉನ್ನತ ಮಟ್ಟದ ಎಲೆಕ್ಟ್ರಾನಿಕ್ ಸಾಧನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಅಸ್ಸಾಂ ಇಸ್ಲಾಮಿಕ್ ಮೂಲಭೂತವಾದಿಗಳ ತಾಣವಾಗುತ್ತಿದೆ ಎಂಬುದು ಅನುಮಾನಾಸ್ಪದವಾಗಿ ಸಾಬೀತಾಗಿದೆ. 5 ಮಾಡ್ಯೂಲ್‌ಗಳನ್ನು ಪತ್ತೆ ಹಚ್ಚಿದ್ದು ಇತರ 5 ಬಾಂಗ್ಲಾದೇಶಿ ಪ್ರಜೆಗಳು ಎಲ್ಲಿದ್ದಾರೆ ಎಂಬುದು ಇನ್ನೂ ತಿಳಿದಿಲ್ಲ ಎಂದು ಶರ್ಮಾ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು.

Published On - 1:30 pm, Sun, 21 August 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್