AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂ: ಅಲ್​​ಖೈದಾ ಸಂಘಟನೆ ಜತೆ ನಂಟಿದೆ ಎಂದು ಶಂಕಿಸಲಾಗುವ ಇಬ್ಬರು ಉಗ್ರರ ಬಂಧನ

ಬಂಧಿತರನ್ನು ಅಬ್ಬಾಸ್ ಸುಬಾನ್ ಮತ್ತು ಜಲಾಲುದ್ದೀಮ್ ಶೇಖ್ ಎಂದು ಗುರುತಿಸಲಾಗಿದೆ. ಇವರಿಬ್ಬರ ಗೋಲ್​​ಪಾರಾ ಮಸೀದಿಯ ಇಮಾಮ್ ಆಗಿದ್ದಾರೆ.

ಅಸ್ಸಾಂ: ಅಲ್​​ಖೈದಾ ಸಂಘಟನೆ ಜತೆ  ನಂಟಿದೆ ಎಂದು ಶಂಕಿಸಲಾಗುವ ಇಬ್ಬರು ಉಗ್ರರ ಬಂಧನ
ಬಂಧಿತ ಆರೋಪಿಗಳು
TV9 Web
| Edited By: |

Updated on:Aug 21, 2022 | 1:49 PM

Share

ಅಲ್ ಖೈದಾ ಇಂಡಿಯನ್ ಸಬ್ ಕಾಂಟಿನೆಂಟ್ (AQIS) ಮತ್ತು ಬಾಂಗ್ಲಾದೇಶ ಮೂಲದ ಉಗ್ರ ಸಂಘಟನೆಯಾದ ಅನ್ಸರುಲ್ಲಾ ಬಾಂಗ್ಲಾ ಟೀಂ(ABT) ಜತೆ ನಂಟು ಹೊಂದಿದ್ದಾರೆ ಎಂದು ಶಂಕಿಸಲಾ ಇಬ್ಬರು ಉಗ್ರನರನ್ನು ಅಸ್ಸಾಂನ ಗೋಲ್ ಪಾರಾ ಜಿಲ್ಲೆಯಲ್ಲಿ ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಶಂಕಿತ ಉಗ್ರರು ಬಾಂಗ್ಲಾದೇಶದಿಂದ ಬೂಂದ ಜಿಹಾದಿಗಳಿಗೆ ಬೆಂಬಲ ಮತ್ತು ಮನೆ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ ಎಂದು ಗೋಲ್ ಪಾರದ ಸುಪರಿಟೆಂಡೆಂಟ್ ಆಫ್ ಪೊಲೀಸ್ ವಿ.ಕೆ ರಾಕೇಶ್ ರೆಡ್ಡಿ ಹೇಳಿದ್ದಾರೆ. ಬಂಧಿತರನ್ನು ಅಬ್ಬಾಸ್ ಸುಬಾನ್ ಮತ್ತು ಜಲಾಲುದ್ದೀಮ್ ಶೇಖ್ ಎಂದು ಗುರುತಿಸಲಾಗಿದೆ. ಇವರಿಬ್ಬರ ಗೋಲ್​​ಪಾರಾ ಮಸೀದಿಯ ಇಮಾಮ್ ಆಗಿದ್ದಾರೆ. ಎಕ್ಯುಐಎಸ್ ಮತ್ತು ಜಿಲ್ಲೆಯಲ್ಲಿ ಸ್ಲೀಪರ್ ಸೆಲ್ ಗೆ ನಿಯೋಜನೆ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಇಬ್ಬರೂ ಒಪ್ಪಿಕೊಂಡಿರುವುದಾಗಿ ರೆಡ್ಡಿ ಮಾಧ್ಯಮದವರಿಗೆ ಹೇಳಿದ್ದಾರೆ. ಬಂಧಿತ ವ್ಯಕ್ತಿಗಳು ಎಕ್ಯೂಐಎಸ್ ಮತ್ತು ಎಬಿಟಿಯ ಭಯೋತ್ಪಾದಕ ಘಟಕಗಳೊಂದಿಗೆ ನೇರ ಸಂಪರ್ಕವನ್ನು ಹೊಂದಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಜಿಹಾದಿ ಶಕ್ತಿಗಳೊಂದಿಗೆ ನಂಟು ಹೊಂದಿರುವ ಬಂಧಿತ ಅಬ್ಬಾಸ್ ಅಲಿಯಿಂದ ಈ ವರ್ಷ ಜುಲೈನಲ್ಲಿ ನಾವು ಮಾಹಿತಿ ಪಡೆದುಕೊಂಡಿದ್ದೇವೆ. ವಿಚಾರಣೆಯ ಸಮಯದಲ್ಲಿ ಆತ ಅಸ್ಸಾಂನ ಎಕ್ಯೂಐಎಸ್ ಮತ್ತು ಎಬಿಟಿಯ ಬಾರ್ಪೇಟಾ ಮತ್ತು ಮೊರಿಗಾಂವ್ ಮಾಡ್ಯೂಲ್​​ಗಳೊಂದಿಗೆ ನೇರವಾಗಿ ಸಂಪರ್ಕ ಹೊಂದಿದ್ದಾನೆ ಎಂದು ನಾವು ಕಂಡುಕೊಂಡಿದ್ದೇವೆ ಎಂದು ರೆಡ್ಡಿ ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.

ಆರೋಪಿಗಳ ಮನೆ ಶೋಧ ನಡೆಸಿದಾಗ ಅಲ್-ಖೈದಾ, ಜಿಹಾದಿ ಸಂಬಂಧಿಸಿದ ಹಲವಾರು ವಸ್ತುಗಳು, ಪೋಸ್ಟರ್‌ಗಳು, ಪುಸ್ತಕಗಳು ಮತ್ತು ಇತರ ದಾಖಲೆಗಳ ಜೊತೆಗೆ ಮೊಬೈಲ್ ಫೋನ್‌ಗಳು, ಸಿಮ್ ಕಾರ್ಡ್‌ಗಳು ಮತ್ತು ಐಡಿ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಈ ತಿಂಗಳ ಆರಂಭದಲ್ಲಿ ಈಶಾನ್ಯ ರಾಜ್ಯವು ಇಸ್ಲಾಮಿಕ್ ಮೂಲಭೂತವಾದಿಗಳ ತಾಣವಾಗುತ್ತಿದೆ ಎಂದು ಹೇಳಿದ್ದು ಭಯೋತ್ಪಾದನಾ ಕೃತ್ಯಗಳಿಗೆ ಸಂಬಂಧಿಸಿದಂತೆ ಮಾಡಿದ ಬಂಧನಗಳನ್ನು ಉಲ್ಲೇಖಿಸಿ ಹೇಳಿದರು. ಬಾರ್‌ಪೇಟಾ, ಬೊಂಗೈಗಾಂವ್ ಮತ್ತು ಮೋರಿಗಾಂವ್‌ನಲ್ಲಿ ಸ್ಲೀಪರ್ ಸೆಲ್‌ಗಳು ಬಳಸುತ್ತಿದ್ದ ಉನ್ನತ ಮಟ್ಟದ ಎಲೆಕ್ಟ್ರಾನಿಕ್ ಸಾಧನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಅಸ್ಸಾಂ ಇಸ್ಲಾಮಿಕ್ ಮೂಲಭೂತವಾದಿಗಳ ತಾಣವಾಗುತ್ತಿದೆ ಎಂಬುದು ಅನುಮಾನಾಸ್ಪದವಾಗಿ ಸಾಬೀತಾಗಿದೆ. 5 ಮಾಡ್ಯೂಲ್‌ಗಳನ್ನು ಪತ್ತೆ ಹಚ್ಚಿದ್ದು ಇತರ 5 ಬಾಂಗ್ಲಾದೇಶಿ ಪ್ರಜೆಗಳು ಎಲ್ಲಿದ್ದಾರೆ ಎಂಬುದು ಇನ್ನೂ ತಿಳಿದಿಲ್ಲ ಎಂದು ಶರ್ಮಾ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು.

Published On - 1:30 pm, Sun, 21 August 22

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ