AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಪಿಯಾನ್​ನಲ್ಲಿ ಎನ್​ಕೌಂಟರ್​​; ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದ ಭದ್ರತಾ ಪಡೆ

ಇನ್ನೊಂದೆಡೆ ಅವಂತಿಪೋರಾ ಪೊಲೀಸ್​ ಮತ್ತು ಸಿಆರ್​ಪಿಎಫ್​ ಸಿಬ್ಬಂದಿ ಜಂಟಿಯಾಗಿ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ನಡೆಸಿದ್ದು, ಉಗ್ರನೊಬ್ಬನನ್ನು ಬಂಧಿಸಿದ್ದಾರೆ. ಈತ ಜೈಷ್​ ಇ ಮೊಹಮ್ಮದ್​ ಉಗ್ರ ಸಂಘಟನೆಗೆ ಸೇರಿದವನು.

ಶೋಪಿಯಾನ್​ನಲ್ಲಿ ಎನ್​ಕೌಂಟರ್​​; ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದ ಭದ್ರತಾ ಪಡೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jan 23, 2022 | 9:38 AM

Share

ಕಾಶ್ಮೀರದ ಶೋಪಿಯಾನ್​ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ದಾಳಿಗೆ ಇಬ್ಬರು ಉಗ್ರರು ಸತ್ತಿದ್ದಾರೆ ಎಂದು ಸ್ಥಳೀಯ ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.  ಶೋಪಿಯಾನ್​​ದ ಕಿಲ್ಬಾಲ್​ ಎಂಬ ಹಳ್ಳಿಯಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದವು. ಆ ಪ್ರದೇಶವನ್ನು ಸಂಪೂರ್ಣವಾಗಿ ಸುತ್ತುವರಿಯಲಾಗಿತ್ತು. ಉಗ್ರರು ಅಡಗಿದ್ದಾರೆ ಎಂದು ಅನುಮಾನ ಬಂದ ಜಾಗದಲ್ಲೆಲ್ಲ ಹುಡುಕಲಾಗಿತ್ತು.  ಆದರೆ ನಾವು ಹುಡುಕಾಟ ನಡೆಸುತ್ತಿದ್ದಾಗ, ಅಡಗಿದ್ದ ಭಯೋತ್ಪಾದಕರು ನಮ್ಮ ಮೇಲೆ ಗುಂಡಿನ ದಾಳಿ ನಡೆಸಿದರು. ಹೀಗಾಗಿ ತಿರುಗಿ ನಾವೂ ಫೈರಿಂಗ್​ ಮಾಡಿದೆವು ಎಂದು ತಿಳಿಸಿದ್ದಾರೆ. 

ಮೃತ ಭಯೋತ್ಪಾದಕರನ್ನು ಸಮೀರ್​ ಅಹ್ಮದ್ ಶಾ ಮತ್ತು ರಯೀಸ್​ ಅಹ್ಮದ್​ ಮಿರ್​ ಎಂದು ಗುರುತಿಸಲಾಗಿದೆ. ಸಮೀರ್​ ಅಹ್ಮದ್​ ಶೋಪಿಯಾನ್​ದವನಾಗಿದ್ದು, ರಯೀಸ್​ ಪುಲ್ವಾಮಾದವನಾಗಿದ್ದಾನೆ. ಇವರಿಬ್ಬರೂ ಲಷ್ಕರ್ ಇ ತೈಬಾ ಮತ್ತು ದಿ ರೆಸಿಸ್ಟನ್ಸ್​ ಫ್ರಂಟ್​  ಉಗ್ರ ಸಂಘಟನೆಗಳೊಂದಿಗೆ ಗುರುತಿಸಿಕೊಂಡವರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನೊಂದೆಡೆ ಅವಂತಿಪೋರಾ ಪೊಲೀಸ್​ ಮತ್ತು ಸಿಆರ್​ಪಿಎಫ್​ ಸಿಬ್ಬಂದಿ ಜಂಟಿಯಾಗಿ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ನಡೆಸಿದ್ದು, ಉಗ್ರನೊಬ್ಬನನ್ನು ಬಂಧಿಸಿದ್ದಾರೆ. ಈತ ಜೈಷ್​ ಇ ಮೊಹಮ್ಮದ್​ ಉಗ್ರ ಸಂಘಟನೆಗೆ ಸೇರಿದವನು ಎನ್ನಲಾಗಿದೆ. ಈತನ ಹೆಸರು ಉಮರ್​ ಫಾರೂಕ್​ ಭಟ್​ ಎಂದು ಹೇಳಲಾಗಿದ್ದು, ಆವಂತಿಪೋರಾ ನಿವಾಸಿಯೇ ಆಗಿದ್ದಾನೆ.

ಇದನ್ನೂ ಓದಿ: ನೈಟ್ ಕರ್ಫ್ಯೂ ಸಯಮ ಬದಲಾವಣೆಗೆ ಸಿಎಂ ಬೊಮ್ಮಾಯಿಗೆ ಮನವಿ; ಶೀಘ್ರದಲ್ಲೇ 50:50 ನಿಮಯ ರದ್ದು ಸಾಧ್ಯತೆ

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು