AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಪಿಯಾನ್​ನಲ್ಲಿ ಎನ್​ಕೌಂಟರ್​​; ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದ ಭದ್ರತಾ ಪಡೆ

ಇನ್ನೊಂದೆಡೆ ಅವಂತಿಪೋರಾ ಪೊಲೀಸ್​ ಮತ್ತು ಸಿಆರ್​ಪಿಎಫ್​ ಸಿಬ್ಬಂದಿ ಜಂಟಿಯಾಗಿ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ನಡೆಸಿದ್ದು, ಉಗ್ರನೊಬ್ಬನನ್ನು ಬಂಧಿಸಿದ್ದಾರೆ. ಈತ ಜೈಷ್​ ಇ ಮೊಹಮ್ಮದ್​ ಉಗ್ರ ಸಂಘಟನೆಗೆ ಸೇರಿದವನು.

ಶೋಪಿಯಾನ್​ನಲ್ಲಿ ಎನ್​ಕೌಂಟರ್​​; ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದ ಭದ್ರತಾ ಪಡೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jan 23, 2022 | 9:38 AM

Share

ಕಾಶ್ಮೀರದ ಶೋಪಿಯಾನ್​ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ದಾಳಿಗೆ ಇಬ್ಬರು ಉಗ್ರರು ಸತ್ತಿದ್ದಾರೆ ಎಂದು ಸ್ಥಳೀಯ ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.  ಶೋಪಿಯಾನ್​​ದ ಕಿಲ್ಬಾಲ್​ ಎಂಬ ಹಳ್ಳಿಯಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದವು. ಆ ಪ್ರದೇಶವನ್ನು ಸಂಪೂರ್ಣವಾಗಿ ಸುತ್ತುವರಿಯಲಾಗಿತ್ತು. ಉಗ್ರರು ಅಡಗಿದ್ದಾರೆ ಎಂದು ಅನುಮಾನ ಬಂದ ಜಾಗದಲ್ಲೆಲ್ಲ ಹುಡುಕಲಾಗಿತ್ತು.  ಆದರೆ ನಾವು ಹುಡುಕಾಟ ನಡೆಸುತ್ತಿದ್ದಾಗ, ಅಡಗಿದ್ದ ಭಯೋತ್ಪಾದಕರು ನಮ್ಮ ಮೇಲೆ ಗುಂಡಿನ ದಾಳಿ ನಡೆಸಿದರು. ಹೀಗಾಗಿ ತಿರುಗಿ ನಾವೂ ಫೈರಿಂಗ್​ ಮಾಡಿದೆವು ಎಂದು ತಿಳಿಸಿದ್ದಾರೆ. 

ಮೃತ ಭಯೋತ್ಪಾದಕರನ್ನು ಸಮೀರ್​ ಅಹ್ಮದ್ ಶಾ ಮತ್ತು ರಯೀಸ್​ ಅಹ್ಮದ್​ ಮಿರ್​ ಎಂದು ಗುರುತಿಸಲಾಗಿದೆ. ಸಮೀರ್​ ಅಹ್ಮದ್​ ಶೋಪಿಯಾನ್​ದವನಾಗಿದ್ದು, ರಯೀಸ್​ ಪುಲ್ವಾಮಾದವನಾಗಿದ್ದಾನೆ. ಇವರಿಬ್ಬರೂ ಲಷ್ಕರ್ ಇ ತೈಬಾ ಮತ್ತು ದಿ ರೆಸಿಸ್ಟನ್ಸ್​ ಫ್ರಂಟ್​  ಉಗ್ರ ಸಂಘಟನೆಗಳೊಂದಿಗೆ ಗುರುತಿಸಿಕೊಂಡವರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನೊಂದೆಡೆ ಅವಂತಿಪೋರಾ ಪೊಲೀಸ್​ ಮತ್ತು ಸಿಆರ್​ಪಿಎಫ್​ ಸಿಬ್ಬಂದಿ ಜಂಟಿಯಾಗಿ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ನಡೆಸಿದ್ದು, ಉಗ್ರನೊಬ್ಬನನ್ನು ಬಂಧಿಸಿದ್ದಾರೆ. ಈತ ಜೈಷ್​ ಇ ಮೊಹಮ್ಮದ್​ ಉಗ್ರ ಸಂಘಟನೆಗೆ ಸೇರಿದವನು ಎನ್ನಲಾಗಿದೆ. ಈತನ ಹೆಸರು ಉಮರ್​ ಫಾರೂಕ್​ ಭಟ್​ ಎಂದು ಹೇಳಲಾಗಿದ್ದು, ಆವಂತಿಪೋರಾ ನಿವಾಸಿಯೇ ಆಗಿದ್ದಾನೆ.

ಇದನ್ನೂ ಓದಿ: ನೈಟ್ ಕರ್ಫ್ಯೂ ಸಯಮ ಬದಲಾವಣೆಗೆ ಸಿಎಂ ಬೊಮ್ಮಾಯಿಗೆ ಮನವಿ; ಶೀಘ್ರದಲ್ಲೇ 50:50 ನಿಮಯ ರದ್ದು ಸಾಧ್ಯತೆ

Follow Us
ಅಂಬೋಲಿ ಫಾಲ್ಸ್​​ ನೋಡಲು ಮುಗಿಬಿದ್ದ ಪ್ರವಾಸಿಗರು
ಅಂಬೋಲಿ ಫಾಲ್ಸ್​​ ನೋಡಲು ಮುಗಿಬಿದ್ದ ಪ್ರವಾಸಿಗರು
‘ದೇವಿ’ ಸಿನಿಮಾ ಬಗ್ಗೆ ಸಂಭಾಷಣೆಕಾರ ಮಾಸ್ತಿ ಹೇಳಿದ್ದೇನು: ವಿಡಿಯೋ
‘ದೇವಿ’ ಸಿನಿಮಾ ಬಗ್ಗೆ ಸಂಭಾಷಣೆಕಾರ ಮಾಸ್ತಿ ಹೇಳಿದ್ದೇನು: ವಿಡಿಯೋ
ಬೇಬಿ ಯಡಿಯೂರಪ್ಪ ತಮ್ಮ ನಾಯಕರ ಮೇಲಿರುವ ಕೇಸ್​ಗಳ ಬಗ್ಗೆ ಮಾತನಾಡಲಿ: BKH
ಬೇಬಿ ಯಡಿಯೂರಪ್ಪ ತಮ್ಮ ನಾಯಕರ ಮೇಲಿರುವ ಕೇಸ್​ಗಳ ಬಗ್ಗೆ ಮಾತನಾಡಲಿ: BKH
'ನಮ್ಮಿಬ್ರನ್ನ ಊರಿಗೆ ಕರ್ಕೊಂಡು ಹೋಗಿ': 112ಕ್ಕೆ ಕರೆ ಮಾಡಿ ದಂಪತಿ ಕಿರಿಕ್!
'ನಮ್ಮಿಬ್ರನ್ನ ಊರಿಗೆ ಕರ್ಕೊಂಡು ಹೋಗಿ': 112ಕ್ಕೆ ಕರೆ ಮಾಡಿ ದಂಪತಿ ಕಿರಿಕ್!
ಮಣಿಪಾಲ ಬಳಿ ಕಂದಕಕ್ಕೆ ಉರುಳಿದ ಶಾಲಾ ಬಸ್
ಮಣಿಪಾಲ ಬಳಿ ಕಂದಕಕ್ಕೆ ಉರುಳಿದ ಶಾಲಾ ಬಸ್
ಜಿಬಿಎ ಚುನಾವಣೆಗೆ ಕಾಲಾವಕಾಶ ವಿಸ್ತರಣೆಗೆ ಮನವಿ: ಸುಪ್ರೀಂ​ಗೆ ಸರ್ಕಾರ ಅರ್ಜಿ
ಜಿಬಿಎ ಚುನಾವಣೆಗೆ ಕಾಲಾವಕಾಶ ವಿಸ್ತರಣೆಗೆ ಮನವಿ: ಸುಪ್ರೀಂ​ಗೆ ಸರ್ಕಾರ ಅರ್ಜಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್