AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಪಿಯಾನ್​ನಲ್ಲಿ ಎನ್​ಕೌಂಟರ್​​; ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದ ಭದ್ರತಾ ಪಡೆ

ಇನ್ನೊಂದೆಡೆ ಅವಂತಿಪೋರಾ ಪೊಲೀಸ್​ ಮತ್ತು ಸಿಆರ್​ಪಿಎಫ್​ ಸಿಬ್ಬಂದಿ ಜಂಟಿಯಾಗಿ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ನಡೆಸಿದ್ದು, ಉಗ್ರನೊಬ್ಬನನ್ನು ಬಂಧಿಸಿದ್ದಾರೆ. ಈತ ಜೈಷ್​ ಇ ಮೊಹಮ್ಮದ್​ ಉಗ್ರ ಸಂಘಟನೆಗೆ ಸೇರಿದವನು.

ಶೋಪಿಯಾನ್​ನಲ್ಲಿ ಎನ್​ಕೌಂಟರ್​​; ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದ ಭದ್ರತಾ ಪಡೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jan 23, 2022 | 9:38 AM

Share

ಕಾಶ್ಮೀರದ ಶೋಪಿಯಾನ್​ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ದಾಳಿಗೆ ಇಬ್ಬರು ಉಗ್ರರು ಸತ್ತಿದ್ದಾರೆ ಎಂದು ಸ್ಥಳೀಯ ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.  ಶೋಪಿಯಾನ್​​ದ ಕಿಲ್ಬಾಲ್​ ಎಂಬ ಹಳ್ಳಿಯಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದವು. ಆ ಪ್ರದೇಶವನ್ನು ಸಂಪೂರ್ಣವಾಗಿ ಸುತ್ತುವರಿಯಲಾಗಿತ್ತು. ಉಗ್ರರು ಅಡಗಿದ್ದಾರೆ ಎಂದು ಅನುಮಾನ ಬಂದ ಜಾಗದಲ್ಲೆಲ್ಲ ಹುಡುಕಲಾಗಿತ್ತು.  ಆದರೆ ನಾವು ಹುಡುಕಾಟ ನಡೆಸುತ್ತಿದ್ದಾಗ, ಅಡಗಿದ್ದ ಭಯೋತ್ಪಾದಕರು ನಮ್ಮ ಮೇಲೆ ಗುಂಡಿನ ದಾಳಿ ನಡೆಸಿದರು. ಹೀಗಾಗಿ ತಿರುಗಿ ನಾವೂ ಫೈರಿಂಗ್​ ಮಾಡಿದೆವು ಎಂದು ತಿಳಿಸಿದ್ದಾರೆ. 

ಮೃತ ಭಯೋತ್ಪಾದಕರನ್ನು ಸಮೀರ್​ ಅಹ್ಮದ್ ಶಾ ಮತ್ತು ರಯೀಸ್​ ಅಹ್ಮದ್​ ಮಿರ್​ ಎಂದು ಗುರುತಿಸಲಾಗಿದೆ. ಸಮೀರ್​ ಅಹ್ಮದ್​ ಶೋಪಿಯಾನ್​ದವನಾಗಿದ್ದು, ರಯೀಸ್​ ಪುಲ್ವಾಮಾದವನಾಗಿದ್ದಾನೆ. ಇವರಿಬ್ಬರೂ ಲಷ್ಕರ್ ಇ ತೈಬಾ ಮತ್ತು ದಿ ರೆಸಿಸ್ಟನ್ಸ್​ ಫ್ರಂಟ್​  ಉಗ್ರ ಸಂಘಟನೆಗಳೊಂದಿಗೆ ಗುರುತಿಸಿಕೊಂಡವರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನೊಂದೆಡೆ ಅವಂತಿಪೋರಾ ಪೊಲೀಸ್​ ಮತ್ತು ಸಿಆರ್​ಪಿಎಫ್​ ಸಿಬ್ಬಂದಿ ಜಂಟಿಯಾಗಿ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ನಡೆಸಿದ್ದು, ಉಗ್ರನೊಬ್ಬನನ್ನು ಬಂಧಿಸಿದ್ದಾರೆ. ಈತ ಜೈಷ್​ ಇ ಮೊಹಮ್ಮದ್​ ಉಗ್ರ ಸಂಘಟನೆಗೆ ಸೇರಿದವನು ಎನ್ನಲಾಗಿದೆ. ಈತನ ಹೆಸರು ಉಮರ್​ ಫಾರೂಕ್​ ಭಟ್​ ಎಂದು ಹೇಳಲಾಗಿದ್ದು, ಆವಂತಿಪೋರಾ ನಿವಾಸಿಯೇ ಆಗಿದ್ದಾನೆ.

ಇದನ್ನೂ ಓದಿ: ನೈಟ್ ಕರ್ಫ್ಯೂ ಸಯಮ ಬದಲಾವಣೆಗೆ ಸಿಎಂ ಬೊಮ್ಮಾಯಿಗೆ ಮನವಿ; ಶೀಘ್ರದಲ್ಲೇ 50:50 ನಿಮಯ ರದ್ದು ಸಾಧ್ಯತೆ

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು